ಸಾಮಾಜಿಕ ಜಾಲತಾಣ ದುರುಪಯೋಗ: ಸಂಸದೀಯ ಸಮಿತಿ ಮುಂದೆ ಟ್ವಿಟರ್ ಅಧಿಕಾರಿಗಳು ಹಾಜರು
ಈ ಸಂದರ್ಭದಲ್ಲಿ ಸಂಸದೀಯ ಸ್ಥಾಯಿ ಸಮಿತಿ ಟ್ವಿಟರ್ ಅಧಿಕಾರಿಗಳಿಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು.
Team Udayavani, Jun 18, 2021, 6:10 PM IST
ನವದೆಹಲಿ: ಸಾಮಾಜಿಕ ಜಾಲತಾಣದ ಪ್ಲ್ಯಾಟ್ ಫಾರಂ ಅನ್ನು ದುರುಪಯೋಗಪಡಿಸಿಕೊಳ್ಳುವುದನ್ನು ತಡೆಗಟ್ಟುವ ಮಾರ್ಗಗಳಿಗೆ ಸಂಬಂಧಿಸಿದಂತೆ ಉತ್ತರಿಸುವ ನಿಟ್ಟಿನಲ್ಲಿ ಟ್ವಿಟರ್ ಇಂಡಿಯಾದ ಇಬ್ಬರು ಪ್ರತಿನಿಧಿಗಳು ಶುಕ್ರವಾರ(ಜೂನ್ 18) ಸಂಸದೀಯ ಸ್ಥಾಯಿ ಸಮಿತಿ ಮುಂದೆ ಹಾಜರಾಗಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ;ಚಿಕ್ಕಮಗಳೂರು : ಭಾರೀ ಮಳೆಗೆ ಕುಸಿದ ಮನೆ : ಪ್ರಾಣಾಪಾಯದಿಂದ ಅಜ್ಜಿ ಪಾರು
ನಿಗದಿಯಂತೆ ಟ್ವಿಟರ್ ಇಂಡಿಯಾ ಅಧಿಕಾರಿಗಳು ಇಂದು ಸಂಜೆ 4ಗಂಟೆಗೆ ಸಮಿತಿ ಮುಂದೆ ಹಾಜರಾಗಿದ್ದರು. ಭಾರತೀಯ ನಾಗರಿಕರ ಹಕ್ಕುಗಳನ್ನು ರಕ್ಷಿಸುವ ಮತ್ತು ಸಾಮಾಜಿಕ ಜಾಲತಾಣದ ದುರುಪಯೋಗ ತಡೆಗಟ್ಟು ವಿಷಯದ ಕುರಿತು ಪರಿಶೀಲನೆ ನಡೆಸಲು ಸಂಸದೀಯ ಸಮಿತಿ ಈ ಸಭೆಯನ್ನು ಕರೆದಿರುವುದಾಗಿ ವರದಿ ವಿವರಿಸಿದೆ.
ಕಾಂಗ್ರೆಸ್ ಸಂಸದ ಶಶಿ ತರೂರ್ ನೇತೃತ್ವದ ಮಾಹಿತಿ ತಂತ್ರಜ್ಞಾನ ಸ್ಥಾಯಿ ಸಮಿತಿಯು ಟ್ವಿಟರ್ ಇಂಡಿಯಾ ಪ್ರತಿನಿಧಿಗಳನ್ನು ಮತ್ತು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಧಿಕಾರಿಗಳನ್ನು ಸಭೆಗೆ ಆಹ್ವಾನಿಸಿರುವುದಾಗಿ ವರದಿ ತಿಳಿಸಿದೆ.
ಕೇಂದ್ರದ ನೂತನ ಐಟಿ ನಿಯಮ ಮತ್ತು ಅವುಗಳನ್ನು ಪಾಲಿಸುವಲ್ಲಿ ಟ್ವಿಟರ್ ವಿಫಲವಾದ ನಂತರ ಸಾಮಾಜಿಕ ಜಾಲತಾಣ ಟ್ವಿಟರ್ ಮತ್ತು ಕೇಂದ್ರ ಸರ್ಕಾರದ ನಡುವೆ ಭಿನ್ನಾಭಿಪ್ರಾಯ ತಲೆದೋರಿತ್ತು. ಈ ಸಂದರ್ಭದಲ್ಲಿ ಸಂಸದೀಯ ಸ್ಥಾಯಿ ಸಮಿತಿ ಟ್ವಿಟರ್ ಅಧಿಕಾರಿಗಳಿಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
MUST WATCH
ಹೊಸ ಸೇರ್ಪಡೆ
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ
Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
ಬ್ಯಾಡಗಿ: ಮೆಣಸಿನಕಾಯಿ ವಹಿವಾಟು ಸುಗಮ; ಪೊಲೀಸ್ ಭದ್ರತೆ