ಕೋವಿಡ್ ಕಾಟ: ಹಡಗಿನಲ್ಲಿದ್ದ 2000 ಪ್ರವಾಸಿಗರು ಮತ್ತಷ್ಟು ಸಂಕಷ್ಟಕ್ಕೆ
Team Udayavani, Jan 5, 2022, 11:55 AM IST
ಪಣಜಿ: ಕಳೆದ ವಾರ ಮುಂಬೈಯಿಂದ ಗೋವಾಕ್ಕೆ ಹಡಗಿನಲ್ಲಿ ಸುಮಾರು 2000 ಜನ ಪ್ರವಾಸಿಗರನ್ನು ಕರೆದುಕೊಂಡು ಬಂದಿದ್ದ ಕಾರ್ಡೆಲಿಯಾ ಕ್ರೂಜ್ ಹಡಗಿನಲ್ಲಿದ್ದ ಪ್ರಯಾಣಿಕರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಹಡಗಿನಲ್ಲಿದ್ದ ಪ್ರವಾಸಿಗರ ಆರ್ ಟಿಪಿಸಿಆರ್ ತಪಾಸಣೆ ನಡೆಸಲಾಗಿದ್ದು, ಅದರಲ್ಲಿ 66 ಜನ ಪ್ರವಾಸಿಗರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಹಡಗಿನಲ್ಲಿದ್ದ 2000 ಜನ ಪ್ರವಾಸಿಗರ ಪೈಕಿ 66 ಜನರಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಈ ಹಡಗನ್ನು ಪ್ರವಾಸಿಗರ ಸಮೇತವಾಗಿ ಮುಂಬಯಿಗೆ ವಾಪಸ್ಸು ಕಳುಹಿಸಲಾಗುತ್ತಿದೆ.
ಈ ಹಡಗಿನಲ್ಲಿದ್ದ ಕೆಲ ಪ್ರವಾಸಿಗರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಈ ಹಡಗು ವಾಸ್ಕೊ ಮುರಗಾಂವ ಬಂದರು ಪ್ರವೇಶಿಸಲು ನಿರಾಕರಿಸಲಾಗಿತ್ತು. ಇದರಿಂದಾಗಿ ಒಂದು ವಾರಗಳ ಕಾಲ ಸಮುದ್ರ ಮಧ್ಯದಲ್ಲಿಯೇ ನಿಲ್ಲುವಂತಾಗಿತ್ತು.
ಎಲ್ಲಿಯ ವರೆಗೆ ಎಲ್ಲ ಪ್ರವಾಸಿಗರ ತಪಾಸಣೆ ಪೂರ್ಣಗೊಳ್ಳುವುದಿಲ್ಲವೋ ಅಲ್ಲಿಯ ವರೆಗೆ ಮುರಗಾಂವ ಬಂದರಿನ ಟರ್ಮಿನಲ್ಗೆ ಆಗಮಿಸಲು ನಿರ್ಬಂಧ ಹೇರಲಾಗಿತ್ತು. ಆದರೆ ಇದೀಗ ಈ ಹಡಗನ್ನು ಪ್ರವಾಸಿಗರ ಸಮೇತವಾಗಿ ಮುಂಬಯಿಗೆ ವಾಪಸ್ಸು ಕರೆದೊಯ್ಯಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್