![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ಕಬ್ಬು ಬೆಳೆಗಾರರಿಗೆ 204 ಕೋಟಿ ಬಂಪರ್ ಕೊಡುಗೆ ಘೋಷಿಸಿದ ರಾಜ್ಯ ಸರ್ಕಾರ
Team Udayavani, Dec 6, 2022, 6:20 AM IST
![ಕಬ್ಬು ಬೆಳೆಗಾರರಿಗೆ 204 ಕೋಟಿ ಬಂಪರ್ ಕೊಡುಗೆ ಘೋಷಿಸಿದ ರಾಜ್ಯ ಸರ್ಕಾರ](https://www.udayavani.com/wp-content/uploads/2022/12/sugarcane-581x465.jpg)
ಬೆಂಗಳೂರು: ಇದೇ ಮೊದಲ ಬಾರಿಗೆ ಕಬ್ಬಿನ ಉಪ ಉತ್ಪನ್ನ ಎಥೆನಾಲ್ ಮೇಲಿನ ಲಾಭಾಂಶವನ್ನು ರೈತರಿಗೆ ನೀಡಲು ನಿರ್ಧರಿಸಿರುವ ರಾಜ್ಯ ಸರ್ಕಾರ ಮೊದಲ ಹಂತದಲ್ಲಿ ಕಬ್ಬು ಬೆಳೆಗಾರರಿಗೆ 204.47 ಕೋಟಿ ರೂ. ಬಂಪರ್ ಕೊಡುಗೆ ಘೋಷಿಸಿದೆ.
ವಿಕಾಸಸೌಧದಲ್ಲಿ ಸೋಮವಾರ ನಡೆದ ಕಬ್ಬು ನಿಯಂತ್ರಣ ಮಂಡಳಿ ಸಭೆ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಸಕ್ಕರೆ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ, ಇಲ್ಲಿವರೆಗೆ ಸಕ್ಕರೆಯ ಉಪ ಉತ್ಪನ್ನಗಳ ಮೇಲೆ ಲಾಭಾಂಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ಕಬ್ಬಿನ ಉಪ ಉತ್ಪನ್ನದ ಮೇಲೆ ರೈತರಿಗೆ ಲಾಭಾಂಶ ನೀಡಲು ಕಬ್ಬು ನಿಯಂತ್ರಣ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.
ಉಪ ಉತ್ಪನ್ನಗಳ ಲಾಭಾಂಶ ಬೇಕೆಂದು ಅನೇಕ ದಿನಗಳಿಂದ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದರು. ಅದರಂತೆ, ಮೊದಲ ಹಂತದಲ್ಲಿ ಕಬ್ಬಿನ ಉಪ ಉತ್ಪನ್ನ ಎಥೆನಾಲ್ ಮೇಲಿನ ಲಾಭ ನೀಡಲು ಸರ್ಕಾರ ಮುಂದಾಗಿದ್ದು, ಎಫ್ಆರ್ಪಿ ದರದ ಪಾವತಿ ಬಳಿಕ ಹೆಚ್ಚುವರಿಯಾಗಿ ಪ್ರತಿ ಟನ್ಗೆ 50 ರೂಪಾಯಿಯಂತೆ ಕಬ್ಬು ಬೆಳೆಗಾರರಿಗೆ 204.47 ಕೋಟಿ ರೂ. ನೀಡಲಾಗುತ್ತಿದೆ.
ರಾಜ್ಯ ಸರ್ಕಾರದ ನಿರ್ಣಯದ ಕುರಿತು ತಕ್ಷಣ ಆದೇಶ ಹೊರಡಿಸುವಂತೆ ಕಬ್ಬು ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.
ಸಭೆಯಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಸೇರಿ ರೈತ ಪ್ರತಿನಿಧಿಗಳು, ಕಬ್ಬು ನಿಯಂತ್ರಣ ಮಂಡಳಿ ಅಧಿಕಾರಿಗಳು ಉಪಸ್ಥಿತರಿದ್ದರು.
ರೈತರ ತಿರಸ್ಕಾರ
ಕಬ್ಬು ಖರೀದಿ ಮಂಡಳಿ ಸಭೆಯಲ್ಲಿ ಸಕ್ಕರೆ ಸಚಿವರು ಕಬ್ಬಿನ ಉಪ ಉತ್ಪನ್ನಗಳಿಂದ ಟನ್ ಕಬ್ಬಿಗೆ 126 ರೂ. ಲಾಭ ಬರುತ್ತದೆ. ಅದರಲ್ಲಿ ಮೊದಲನೇ ಕಂತಾಗಿ ರೈತರಿಗೆ ಎಫ್ಆರ್ಪಿಗೆ ಹೆಚ್ಚುವರಿಯಾಗಿ 50 ರೂ. ನೀಡುವಂತೆ ಕಾರ್ಖಾನೆಗಳಿಗೆ ಆದೇಶ ಹೊರಡಿಸುವುದಾಗಿ ಸಕ್ಕರೆ ಸಚಿವ ಮುನೇನಕೊಪ್ಪ ಕಬ್ಬು ನಿಯಂತ್ರಣ ಮಂಡಳಿ ಸಭೆಯಲ್ಲಿ ತಿಳಿಸಿದರು. ಆದರೆ, ಸರ್ಕಾರದ ಈ ನಿಲುವು ತಿರಸ್ಕರಿಸಲಾಗಿದ್ದು, ಹೋರಾಟ ಮುಂದುವರಿಯಲಿದೆ ಎಂದು ರಾಜ್ಯ ಕಬ್ಬು ಬೆಳಗಾರರ ಸಂಘದ ಅಧ್ಯಕ್ಷ ಕುರುಬೂರ ಶಾಂತಕುಮಾರ್ ತಿಳಿಸಿದ್ದಾರೆ.
ಆದರೆ, ಈ ವಿಚಾರವಾಗಿ ಮಂಗಳವಾರ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳೋಣ ಎಂದು ಸಚಿವರು ಭರವಸೆ ನೀಡಿದ್ದಾರೆ ಎಂದು ಶಾಂತಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರ್ಕಾರ ರೈತರ ಪರ ಇದೆ:
ಸರ್ಕಾರದ ತೀರ್ಮಾನವನ್ನು ತಿರಸ್ಕರಿಸಿ ರೈತರು ಪ್ರತಿಭಟನೆ ಮುಂದುವರಿಸಲು ನಿರ್ಧರಿಸಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ರೈತರ ಹೋರಾಟ ಇರಬೇಕು. ಆಗ ಮಾತ್ರ ಅನೇಕ ವಿಚಾರಗಳು ಸರ್ಕಾರದ ಗಮನಕ್ಕೆ ಬರುತ್ತವೆ. ರೈತರಿಗಾಗಿ, ರೈತರ ಪರ ಇರುವ ಸರ್ಕಾರ ನಮ್ಮದು. ಇಲ್ಲಿವರೆಗೆ ಸಕ್ಕರೆ ಉಪ ಉತ್ಪನ್ನ ಮೇಲಿನ ಲಾಭಾಂಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ನಮ್ಮ ಸರ್ಕಾರ ಕಬ್ಬಿನ ಉಪ ಉತ್ಪನ್ನ ಮೇಲೆ ಲಾಭಾಂಶ ನೀಡಲು ನಿರ್ಧರಿಸಿದೆ. ಮೊದಲ ಹಂತದಲ್ಲಿ 204 ಕೋಟಿ ರೂ. ರೈತರ ಖಾತೆಗಳಿಗೆ ಜಮೆ ಮಾಡಲಾಗುತ್ತಿದೆ. ಎರಡನೇ ಹಂತದಲ್ಲಿ ಈ ವರ್ಷದ ಕಬ್ಬು ನುರಿಸುವಿಕೆ ಮುಗಿದ ಮೇಲೆ ಲಾಭ ಆಧರಿಸಿ ರೈತರಿಗೆ ಲಾಭಾಂಶ ನೀಡಲಾಗುವುದು ಎಂದು ಸಚಿವರು ತಿಳಿಸಿದರು.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ](https://www.udayavani.com/wp-content/uploads/2024/07/flood-150x68.jpg)
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.