Russia ದಲ್ಲಿ 216 ಭಾರತೀಯರು ಅತಂತ್ರ 

ತಾಂತ್ರಿಕ ದೋಷದಿಂದ ಮಂಗಳವಾರ ಏರ್‌ ಇಂಡಿಯಾ ವಿಮಾನ ರಷ್ಯಾದಲ್ಲಿ ತುರ್ತು ಭೂಸ್ಪರ್ಶ

Team Udayavani, Jun 8, 2023, 7:49 AM IST

AIR INDIA

ನವದೆಹಲಿ/ಮಾಸ್ಕೋ: ಎಂಜಿನ್‌ನಲ್ಲಿ ದೋಷ ಕಂಡುಬಂದ ಹಿನ್ನೆಲೆಯಲ್ಲಿ ನವದೆಹಲಿಯಿಂದ ಸ್ಯಾನ್‌ಫ್ರಾನ್ಸಿಸ್ಕೋಗೆ ಹೊರಟಿದ್ದ ಏರ್‌ಇಂಡಿಯಾ ವಿಮಾನವು ಮಂಗಳವಾರ ರಾತ್ರಿ ರಷ್ಯಾದ ಮ್ಯಾಗಡನ್‌ನಲ್ಲಿ ಇಳಿದಿದ್ದು, ಅದರಲ್ಲಿದ್ದ 216 ಪ್ರಯಾಣಿಕರು ಹೆಚ್ಚಿನ ಸೌಲಭ್ಯಗಳಿಲ್ಲದೇ ಊರಿನಲ್ಲಿ ರಾತ್ರಿ ಕಳೆದಿದ್ದಾರೆ. ಅವರನ್ನು ಅಲ್ಲಿಂದ ಕರೆದೊಯ್ಯುವ ಸಲುವಾಗಿ ಬುಧವಾರ ಮಧ್ಯಾಹ್ನ ಮುಂಬೈನಿಂದ ವಿಶೇಷ ವಿಮಾನವೊಂದು ಮ್ಯಾಗಡನ್‌ಗೆ ತೆರಳಿದೆ.

ಮ್ಯಾಗಡನ್‌ ನಿಲ್ದಾಣವು ರಷ್ಯಾ ರಾಜಧಾನಿ ಮಾಸ್ಕೋದಿಂದ ಸುಮಾರು 10 ಸಾವಿರ ಕಿ.ಮೀ. ದೂರದಲ್ಲಿದೆ. ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರಿಗೂ ವಸತಿ ಕಲ್ಪಿಸಲು ಆ ಪ್ರದೇಶದಲ್ಲಿ ಸಾಕಷ್ಟು ಹೋಟೆಲ್‌ಗಳ ವ್ಯವಸ್ಥೆ ಇಲ್ಲದ ಕಾರಣ, ಕೆಲವರಿಗೆ ಸಮೀಪದ ಶಾಲೆಗಳು, ವಸತಿ ನಿಲಯಗಳಲ್ಲಿ ಆಶ್ರಯ ಕಲ್ಪಿಸಲಾಯಿತು.

ಒಂದು ಕೊಠಡಿಯಲ್ಲಿ 20 ಮಂದಿ

ತುರ್ತು ಭೂಸ್ಪರ್ಶದಿಂದಾಗಿ ಅತಂತ್ರಕ್ಕೆ ಸಿಲುಕಿದ ಪ್ರಯಾಣಿಕರು ರಷ್ಯಾದ ಹಳ್ಳಿಯಲ್ಲಿ ಮಲಗಲು ಸೂಕ್ತ ವ್ಯವಸ್ಥೆಯಿಲ್ಲದೇ, ತಿನ್ನಲು ಸರಿಯಾದ ಆಹಾರವಿಲ್ಲದೇ, ಮಾತನಾಡಲು ಭಾಷೆಯೂ ಬಾರದೆ ಗೊಂದಲಕ್ಕೆ ಸಿಲುಕಿದ್ದಾರೆ. ಉದ್ದಕ್ಕೂ ಒಂದು ಚಾದರ ಹಾಸಿ ಶಾಲೆಗಳ ಒಂದೊಂದು ಕೊಠಡಿಯಲ್ಲಿ 20 ಮಂದಿಯಂತೆ ಮಲಗಿ ರಾತ್ರಿ ಕಳೆದಿದ್ದಾರೆ. ಮಾಂಸಾಹಾರ ಮಾತ್ರ ಲಭ್ಯವಿರುವ ಕಾರಣ, ಕೆಲವರು ಬ್ರೆಡ್‌ ಮತ್ತು ಸೂಪ್‌ ಕುಡಿದು ಹೊಟ್ಟೆ ತುಂಬಿಸಿಕೊಂಡಿದ್ದಾರೆ. ಮಹಿಳೆಯರು, ಮಕ್ಕಳು ಮತ್ತು ಹಿರಿಯ ನಾಗರಿಕರಿಗೆ ಹೆಚ್ಚು ಸಮಸ್ಯೆಯಾಗಿದೆ ಎಂದು ಅಲ್ಲಿ ಸಿಲುಕಿರುವ ಭಾರತೀಯರು ಹೇಳಿದ್ದಾರೆ.

ಮತ್ತೂಂದೆಡೆ, ವಿಮಾನವು ಸ್ಯಾನ್‌ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಕಾರಣ ಅದರಲ್ಲಿ ಹಲವು ಅಮೆರಿಕನ್ನರೂ ಇದ್ದರು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅಮೆರಿಕ ವಿದೇಶಾಂಗ ಇಲಾಖೆ ಉಪ ವಕ್ತಾರ ವೇದಾಂತ್‌ ಪಟೇಲ್‌, “ಅಮೆರಿಕದತ್ತ ಹೊರಟಿದ್ದ ವಿಮಾನವು ರಷ್ಯಾದಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಸಂಗತಿ ನಮಗೆ ಗೊತ್ತಾಗಿದೆ. ಅದರಲ್ಲಿ ಅಮೆರಿಕದ ನಾಗರಿಕರು ಎಷ್ಟು ಮಂದಿಯಿದ್ದರು ಎಂಬ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಆದರೆ, ನಾವು ಈ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ’ ಎಂದಿದ್ದಾರೆ.

 

ಟಾಪ್ ನ್ಯೂಸ್

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Robbery case: ಕೇರಳದಲ್ಲಿ ಓರ್ವನ ಬಂಧನ?

Robbery case: ಕೇರಳದಲ್ಲಿ ಓರ್ವನ ಬಂಧನ?

Ullal ರೈಲಿಗೆ ತಲೆ ಕೊಟ್ಟು ಅವಿವಾಹಿತ ಆತ್ಮಹತ್ಯೆ

Ullal ರೈಲಿಗೆ ತಲೆ ಕೊಟ್ಟು ಅವಿವಾಹಿತ ಆತ್ಮಹತ್ಯೆ

Kadaba ಜೈ ಶ್ರೀರಾಮ್‌ ಘೋಷಣೆ: ಇಬ್ಬರ ಬಂಧನ

Kadaba ಜೈ ಶ್ರೀರಾಮ್‌ ಘೋಷಣೆ: ಇಬ್ಬರ ಬಂಧನ

Brahmavar ಸ್ಕೂಟಿ ಢಿಕ್ಕಿ ಹೊಡೆದು ಪಾದಚಾರಿ ಸಾವು

Brahmavar ಸ್ಕೂಟಿ ಢಿಕ್ಕಿ ಹೊಡೆದು ಪಾದಚಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

covid

Corona: ಮತ್ತೆ ಮರುಕಳಿಸಲಿದೆ ಕೊರೊನಾ!

DESERTS

Sahara: 8 ಲಕ್ಷ ವರ್ಷಗಳ ಹಿಂದೆ ಹಚ್ಚ ಹಸಿರಿನಿಂದ ಕೂಡಿದ್ದ ಸಹಾರಾ ಮರುಭೂಮಿ!

ISREALLL

Israel: ಇಸ್ರೇಲ್‌ಗೆ ಶೀಘ್ರವೇ 7 ಮುಸ್ಲಿಂ ರಾಷ್ಟ್ರಗಳ ಅಂಗೀಕಾರ

ASTEROID

Asteroid: ಭೂಮಿಗೆ ಬಂತು ಕ್ಷುದ್ರಗ್ರಹ ಸ್ಯಾಂಪಲ್‌

vivek ramaswamy

USA: ವಿವೇಕ್‌ ಜತೆ ಊಟಕ್ಕೆ 41 ಲಕ್ಷ ರೂ !

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Robbery case: ಕೇರಳದಲ್ಲಿ ಓರ್ವನ ಬಂಧನ?

Robbery case: ಕೇರಳದಲ್ಲಿ ಓರ್ವನ ಬಂಧನ?

BJP FLAG 1

BJP: ಈ ವಾರವೇ ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.