ಶೇ.23 ರಷ್ಟಿರುವ ದಲಿತರು ಸಿಎಂ ಆಗಬಾರದಾ : ಜಿಗಜಿಣಗಿ ಪುನರುಚ್ಛಾರ
Team Udayavani, Apr 28, 2022, 6:12 PM IST
ವಿಜಯಪುರ: ಕೇವಲ ಶೇ.2 ರಷ್ಟಿರುವ ಸಮುದಾಯದ ವ್ಯಕ್ತಿಗಳು ಮುಖ್ಯಮಂತ್ರಿ ಆಗಬಹುದಾದರೆ ಶೇ.23 ರಷ್ಟು ಜನಸಂಖ್ಯೆ ಇರುವ ದಲಿತರು ರಾಜ್ಯದ ಮುಖ್ಯಮಂತ್ರಿ ಆದಲ್ಲಿ ತಪ್ಪೇನು, ಆದರೆ ಈಗ ಮಾತನಾಡಿ ಪ್ರಯೋಜನವಿಲ್ಲ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಹೇಳಿದರು.
ಗುರುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಲಿತ ಸಮುದಾಯದವರು ಸಿಎಂ ಆಗಬೇಕು. ಅದು ಯಾವುದೇ ಪಕ್ಷದಿಂದಾದರೂ ಆಗಲಿ ಎಂದರು.
ವಿಧಾನಸಭೆ ಮಾಜಿ ಅಧ್ಯಕ್ಷ ರಮೇಶಕುಮಾರ ದಲಿತ ಮುಖ್ಯಮಂತ್ರಿ ವಿಷಯ ಪ್ರಸ್ತಾಪಿಸಿರುವುದು ಉತ್ತಮವಾದುದೇ. ಆದರೆ ಅಧಿಕಾರಕ್ಕೆ ಬರುವ ಪಕ್ಷದ ನಾಯಕರು, ಶಾಸಕರು ತೆಗೆದುಕೊಳ್ಳುವ ತೀರ್ಮಾನವೂ ಇಲ್ಲಿ ಮುಖ್ಯ. ಹೀಗಾಗಿ ಈಗ ಸುಮ್ಮನೇ ಅಂಥ ವಿಷಯಗಳ ಬಗ್ಗೆ ಮಾತನಾಡುವುದರಿಂದ ಏನು ಪ್ರಯೋಜನ ಎಂದರು.
ಶೇ.23 ರಷ್ಟಿರುವ ಸಮುದಾಯದವರು ಮುಖ್ಯಮಂತ್ರಿ ಆಗಬಾರದಾ. ಮಾತನಾಡೋಕೆ ಇಂಥ ಲೆಕ್ಕಾಚಾರ ಚೆನ್ನಾಗಿಯೇ ಇರುತ್ತದೆ. ಆದರೆ ವಾಸ್ತವಾಂಶಗಳು ಬೇರೆಯೇ ಇರುತ್ತವೆ. ದಲಿತ ಮುಖ್ಯಮಂತ್ರಿ ವಿಷಯದಲ್ಲಿ ಬೆಂಬಲವಿದೆ. ಇಂಥ ಅವಕಾಶ ಸಿಕ್ಕಲ್ಲಿ ದಲಿತ ಸಮುದಾಯಕ್ಕಿಂತ ನಾನು ಖುಷಿ ಪಡುತ್ತೇನೆ ಹೇಳಿರುವುದು ನಮಗೂ ಖುಷಿ ತಂದಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್