
ಕೇಂದ್ರ ಸರಕಾರದಿಂದ ಉತ್ತರ ಕನ್ನಡ ಜಿಲ್ಲೆಗೆ 232 ಕೋ.ರೂ. ಅನುದಾನ
ಸಂಸದ ಅನಂತಕುಮಾರ ಹೆಗಡೆ ಮಾಹಿತಿ
Team Udayavani, Mar 24, 2023, 4:28 PM IST

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾಳೆಗುಳಿ ಕ್ರಾಸ್ ನಿಂದ ಮಾಸ್ತಿಕಟ್ಟಾವರೆಗಿನ NH 52 (ಹಳೆಯ NH 63) ರಸ್ತೆಯನ್ನು ನಾಲ್ಕು ಪಥದ ರಸ್ತೆಯ ಅಗಲೀಕರಣಕ್ಕೆ ಕೇಂದ್ರ ಸರಕಾರವು 232 ಕೋಟಿ ರೂಪಾಯಿಯನ್ನು ಮಂಜೂರು ಮಾಡಿದೆ ಎಂದು ಸಂಸದ ಅನಂತಕುಮಾರ ಹೆಗಡೆ ತಿಳಿಸಿದ್ದಾರೆ.
ಅಂಕೋಲಾ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಾಂದ್ರತೆಯನ್ನು ಆಧರಿಸಿ ಬಾಳೆಗುಳಿ ಕ್ರಾಸ್ ನಿಂದ ಮಾಸ್ತಿಕಟ್ಟಾವರೆಗಿನ 18 ಕಿ.ಮೀ. ರಸ್ತೆ ಅಗಲೀಕರಣ, ಸೇತುವೆ, ವಿದ್ಯುತ್, ಭೂಸ್ವಾಧಿನ ಹಾಗೂ ಅರಣ್ಯೀಕರಣ ಮುಂತಾದ ಕಾಮಗಾರಿಗೆ ಅಗತ್ಯವಿರುವ ಹಣಕ್ಕೆ ಮಂಜೂರಿ ದೊರೆತಿದೆ. ಈಗಾಗಲೇ ರಸ್ತೆಗೆ ಅಗತ್ಯವಿರುವ ಅರಣ್ಯ ಜಾಗಕ್ಕಾಗಿ ಅರಣ್ಯ ಮತ್ತು ಪರಿಸರ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ.
ಸದ್ಯ 18ಕಿ.ಮೀ. ರಸ್ತೆಗೆ ಮಂಜೂರಾತಿ ದೊರೆತಿದ್ದು ಹಂತ ಹಂತವಾಗಿ ಯಲ್ಲಾಪುರ ಮುಖಾಂತರ ಹುಬ್ಬಳ್ಳಿವರೆಗೆ ರಸ್ತೆಯನ್ನು ಅಭಿವೃದ್ಧಿಪದಿಸಲಾಗುವುದು ಎಂದು ಸಂಸದ ಅನಂತಕುಮಾರ ಹೆಗಡೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

PSI ಹಗರಣ; ನನ್ನ ಹೆಸರು ತೇಲಿ ಬಿಟ್ಟಿದ್ದಾರೆ, ತನಿಖೆ ಮಾಡಲಿ:ಬಿ.ವೈ.ವಿಜಯೇಂದ್ರ

ಗೋಹತ್ಯೆ ನಿಷೇಧ ಕಾಯ್ದೆ ಚರ್ಚೆಗೆ ಬಂದಿಲ್ಲ: ಸಚಿವ ತಂಗಡಗಿ

Gruha Jyoti ಉಚಿತ ವಿದ್ಯುತ್ ಗೆ ಹಲವು ಷರತ್ತು; ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಕಡ್ಡಾಯ
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
