ಒಂದೇ ದಿನ 2,433 ಸಾರಿಗೆ ನೌಕರರ ಅಮಾನತು : 11 ದಿನಗಳಲ್ಲಿ ಇಂಥ ಕ್ರಮ ಇದೇ ಮೊದಲು
Team Udayavani, Apr 18, 2021, 7:10 AM IST
ಬೆಂಗಳೂರು: ಮುಷ್ಕರ ನಿರತ ಬಿಎಂಟಿಸಿ ನೌಕರರಿಗೆ ಸರಕಾರ ಭಾರೀ ಪೆಟ್ಟು ನೀಡಿದ್ದು, ಶನಿವಾರ ಒಂದೇ ದಿನ 2,443 ನೌಕರರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ. ಇಷ್ಟು ನೌಕರರನ್ನು ಅಮಾನತು ಮಾಡಿರುವುದು ಇದೇ ಮೊದಲು.
ಮುಷ್ಕರ ನಿಷೇಧಿಸಿದ್ದರೂ ಅನಧಿಕೃತವಾಗಿ ಭಾಗವಹಿಸಿದ್ದು ಮತ್ತು ಇತರರನ್ನು ಪ್ರಚೋದಿಸಿದ ಆರೋಪದ ಹಿನ್ನೆಲೆಯಲ್ಲಿ ಈ ಎಲ್ಲ ಸಿಬಂದಿಯನ್ನು ಅಮಾನತು ಮಾಡಲಾಗಿದೆ.
ಸಾವಿರ ಮೀರಿದ ಸಂಖ್ಯೆ
ಇತರ ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ ಇದುವರೆಗೆ 1 ಸಾವಿರಕ್ಕೂ ಅಧಿಕ ನೌಕರರನ್ನು ವಜಾಗೊಳಿಸಲಾಗಿದೆ. ಇನ್ನಷ್ಟು ನೌಕರರ ವಜಾಕ್ಕೆ ನಿಗಮಗಳು ಸಿದ್ಧತೆ ನಡೆಸುತ್ತಿವೆ.
ಸುಧಾರಿಸದ ಗ್ರಾಮೀಣ ಸಾರಿಗೆ
ಇದೇ ವೇಳೆ, ರಸ್ತೆಗೆ ಇಳಿದಿರುವ ಬಸ್ಗಳ ಸಂಖ್ಯೆ ಹೆಚ್ಚಾಗಿದ್ದರೂ ಗ್ರಾಮೀಣ ಭಾಗದಲ್ಲಿ ಸಮರ್ಪಕ ಸೇವೆ ಸಿಗುತ್ತಿಲ್ಲ. ಗ್ರಾಮೀಣ ಭಾಗಗಳಿಗೆ ಖಾಸಗಿ ಬಸ್ಗಳೂ ಹೋಗುತ್ತಿಲ್ಲ, ಕೆಎಸ್ಸಾರ್ಟಿಸಿ ಬಸ್ ಸೇವೆಯೂ ಇಲ್ಲ. ಖಾಸಗಿ ಬಸ್ಗಳು ನಗರ ಕೇಂದ್ರೀಕೃತವಾಗಿಯೇ ಓಡಾಡುತ್ತಿವೆ. ಇದರಿಂದ ಗ್ರಾಮೀಣ ಜನರಿಗೆ ತೊಂದರೆಯಾಗುತ್ತಿದೆ.
ಜೈಲ್ ಭರೋ ಚಳವಳಿ
ಈ ಮಧ್ಯೆ ನೌಕರರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿದ್ದು , ಜೈಲ್ ಭರೋ ನಡೆಸಲು ಮುಂದಾಗಿದ್ದಾರೆ. ಬೇಡಿಕೆ ಈಡೇರಿಸಲು ಸೋಮವಾರದ ವರೆಗೆ ಸರಕಾರಕ್ಕೆ ಗಡುವು ನೀಡುತ್ತಿದ್ದೇವೆ. ಅನಂತರ ಒಂದು ಲಕ್ಷ ನೌಕರರು ಸೇರಿ ಜೈಲ್ ಭರೋ ಮಾಡಲಿದ್ದೇವೆ ಎಂದು ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದ್ದಾರೆ.
ಮುಖಂಡರಲ್ಲಿ ಒಡಕು
ನೌಕರರ ಬಣಗಳ ಆಂತರಿಕ ಗುದ್ದಾಟಕ್ಕೆ ಮುಷ್ಕರ ವೇದಿಕೆಯಾಗಿದೆ. ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಆರ್. ಚಂದ್ರಶೇಖರ್ ಶನಿವಾರ ವೀಡಿಯೋದಲ್ಲಿ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್, ಸಾರಿಗೆ ನೌಕರರ ಮಹಾ ಮಂಡಳದ ಅಧ್ಯಕ್ಷ ಕೆ.ಎಸ್. ಶರ್ಮಾ ವಿರುದ್ಧ ಆರೋಪ ಮಾಡಿದ್ದಾರೆ. ಪ್ರತಿಯಾಗಿ ಶರ್ಮಾ ಬಣದ ಸದಸ್ಯರು ಚಂದ್ರಶೇಖರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ