ಹರ್ಷ ಕುಟುಂಬಕ್ಕೆ 25 ಲಕ್ಷ: ಯಾವ ಅಜೆಂಡಾ ಅಡಗಿದೆ? ; ಪ್ರಿಯಾಂಕ ಖರ್ಗೆ

ಗೋಡ್ಸೆ ಆರಾಧಕನಿಗೆ ಹಣ ನೀಡಿ ಗಾಂಧಿ ಹತ್ಯೆಯ ಅನುಮೋದನೆಯೇ ?

Team Udayavani, Mar 11, 2022, 12:40 PM IST

1-rgf

ಬೆಂಗಳೂರು: ಶಿವಮೊಗ್ಗದಲ್ಲಿ ಹತ್ಯೆಗೀಡಾದ ಯುವಕ ಹರ್ಷನ ಕುಟುಂಬಕ್ಕೆ ಸರ್ಕಾರ 25 ಲಕ್ಷ ಪರಿಹಾರ ನೀಡಿರುವುದರ ಹಿಂದೆ ಯಾವ ಅಜೆಂಡಾ ಅಡಗಿದೆ? ಎಂದು ಮಾಜಿ ಸಚಿವ ಪ್ರಿಯಾಂಕ ಖರ್ಗೆ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಅವರು,ಯಾವ ನಿಯಮಗಳ ಅಡಿಯಲ್ಲಿ ಸಾರ್ವಜನಿಕರ ತೆರಿಗೆ ಹಣವನ್ನು ನೀಡಲಾಗಿದೆ? ರಾಜ್ಯದಲ್ಲಿ ವೈಯುಕ್ತಿಕ ದ್ವೇಷಗಳಿಗೆ ಮೃತಪಟ್ಟವರೆಲ್ಲರಿಗೂ ಇದೇ ರೀತಿ ಪರಿಹಾರ ನೀಡುತ್ತದೆಯೇ ಈ ಸರ್ಕಾರ? ಎಂದು ಪ್ರಶ್ನಿಸಿದ್ದಾರೆ.ಮೃತ ಹರ್ಷನ ಮೇಲೆ ಹಲವು ಗಂಭೀರ ಪ್ರಕರಣಗಳು ದಾಖಲಾಗಿದ್ದವು ಎಂಬ ವಿಷಯ ತಿಳಿದುಬಂದಿದೆ.2020ರಲ್ಲಿ ಇವರದ್ದೇ ಸರ್ಕಾರ ಆತನನ್ನು ಜೈಲಿಗಟ್ಟಿತ್ತು, ಶಿವಮೊಗ್ಗದ ಉಸ್ತುವಾರಿ ಸಚಿವ ನಾರಾಯನಗೌಡರೇ ವೈಯುಕ್ತಿಕ ಕಾರಣಗಳಿಗೆ ನಡೆದ ಕೊಲೆ ಎಂದಿದ್ದಾರೆ.
ಪೊಲೀಸರ ತನಿಖಾ ವರದಿಯೂ ಬಂದಿಲ್ಲ.ಹೀಗಿರುವಾಗ ಈ ಪರಿಹಾರ ಹಣ ಕೊಟ್ಟಿದ್ದು ಏಕೆ? ಹೇಗೆ? ಎಂದು ಕೇಳಿದ್ದಾರೆ.

ನೆರೆ ಸಂತ್ರಸ್ತರಿಗೆ, ಕೋವಿಡ್ ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಸತಾಯಿಸುವ ಈ ಸರ್ಕಾರ ತಮ್ಮ ಪಕ್ಷದ ಕಾರ್ಯಕರ್ತನ ಕುಟುಂಬಕ್ಕೆ 25 ಲಕ್ಷ ಹಣ ನೀಡಿರುವುದು ಆಶ್ಚರ್ಯಕರ! ಇಂತಹ ಉದಾರ ಮನಸಿದ್ದರೆ ಧರ್ಮಸ್ಥಳದಲ್ಲಿ ಬಿಜೆಪಿ ಮುಖಂಡನಿಂದ ಹತ್ಯೆಯಾದ ದಲಿತ ಯುವಕ ದಿನೇಶ್ ಕುಟುಂಬಕ್ಕೆ ಏಕೆ ಕೊಡಲಿಲ್ಲ, ಬಜರಂಗದಳದವರಿಂದ ಹತ್ಯೆಯಾದ ಸಮೀರ್ ಕುಟುಂಬಕ್ಕೆ ಏಕೆ ಕೊಡಲಿಲ್ಲ?ಮೃತರಾದ ಕೊಡಗಿನ ಯೋಧನ ಕುಟುಂಬಕ್ಕೆ ಏಕೆ ಕೊಡಲಿಲ್ಲ? ಕನಿಷ್ಠ ಸಾಂತ್ವನವೂ ಹೇಳಲಿಲ್ಲವೇಕೆ? ಎಂದು ಪ್ರಶ್ನಿಸಿದರು.

ಅನಾರೋಗ್ಯ ಪೀಡಿತರಿಗೆ, ಬಡವರ ನೆರವಿಗೆ, ಯೋಧರ ಕುಟುಂಬಗಳಿಗೆ ಬಳಸಬಹುದಾದ ‘ವಿವೇಚನೆ’ಯನ್ನು ತಮ್ಮ ಪಕ್ಷದ ಕೆಡರ್ ಒಬ್ಬನಿಗೆ ಬಳಸಿದ್ದು ಮುಖ್ಯಮಂತ್ರಿಗಳ ಯೋಚನೆ, ವಿವೇಚನೆ ಎಂತದ್ದು ಎಂದು ತಿಳಿಸುತ್ತದೆ. ಬಿಜೆಪಿ ಪಕ್ಷದ ಮೂಲಕ 25 ಲಕ್ಷವಲ್ಲ 25 ಕೋಟಿಯಾದರೂ ಕೊಡಲಿ, ಆದರೆ ಸರ್ಕಾರದ ಹಣ ದುರ್ಬಳಕೆಗೆ ಅಧಿಕಾರ ಕೊಟ್ಟವರು ಯಾರು? ಗಾಂಧಿಯ ಕೊಲೆಗಾರ ಗೋಡ್ಸೆಯಲ್ಲಿ ದೇಶಭಕ್ತಿ ಕಾಣುವ ವ್ಯಕ್ತಿಯ ಸಾವಿಗೆ 25 ಲಕ್ಷ ನೀಡಿದ ಸರ್ಕಾರ, ದೇಶದ ಗಡಿ ಕಾಯುತ್ತಾ ಮೃತನಾದ ಯೋಧ ಅಲ್ತಾಫ್‌ಗೆ ಎಷ್ಟು ನೀಡಿದೆ? ದೇಶಭಕ್ತಿಯ ವ್ಯಾಖ್ಯಾನ ಬದಲಿಸಿದೆಯೇ ಬಿಜೆಪಿ ಸರ್ಕಾರ? ಗೋಡ್ಸೆ ಆರಾಧಕನಿಗೆ ಹಣ ನೀಡುವ ಮೂಲಕ ಗಾಂಧಿ ಹತ್ಯೆಯನ್ನು ಅನುಮೋದಿಸುತ್ತದೆಯೇ ಬಿಜೆಪಿ? ಸಿಎಂ ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.