
ಅವಕಾಶ ವಂಚಿತ ಎಲ್ಲರಿಗೂ 2ಎ ಮೀಸಲಾತಿ ನೀಡಬೇಕು: ಸಚಿವ ಮುರುಗೇಶ ನಿರಾಣಿ
Team Udayavani, Dec 6, 2022, 8:23 PM IST

ಬೆಂಗಳೂರು: ಪಂಚಮಸಾಲಿ ಲಿಂಗಾಯತರಿಗೆ ಮಾತ್ರವಲ್ಲ; ಇಡೀ ವೀರಶೈವ-ಲಿಂಗಾಯತ ಸೇರಿ ಅವಕಾಶ ವಂಚಿತ ಎಲ್ಲ ಸಮುದಾಯಗಳಿಗೂ 2ಎ ಮೀಸಲಾತಿ ನೀಡಬೇಕೆಂದು ಸಚಿವ ಮುರುಗೇಶ ನಿರಾಣಿ ತಿಳಿಸಿದರು.
ಮಂಗಳವಾರ ಬೆಂಗಳೂರು ಪ್ರಸ್ಕ್ಲಬ್ ಹಮ್ಮಿಕೊಂಡಿದ್ದ ಸಂವಾದದಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, 2ಎ ಮೀಸಲಾತಿಯಿಂದ ಸಾಕಷ್ಟು ಸಮುದಾಯಗಳು ವಂಚಿತವಾಗಿವೆ. ಹಾಗಾಗಿ, ಕೇವಲ ಪಂಚಮಸಾಲಿಗೆ ಸೀಮಿತವಾಗದೆ, ವೀರಶೈವ-ಲಿಂಗಾಯತರು ಒಳಗೊಂಡಂತೆ ಎಲ್ಲ ಸಮುದಾಯಗಳಿಗೂ ಈ ಸೌಲಭ್ಯ ಸಿಗುವಂತಾಗಬೇಕೆಂದು ಹೇಳಿದರು.
ರಾಜ್ಯದ ಒಟ್ಟಾರೆ ಜನಸಂಖ್ಯೆಯಲ್ಲಿ ಶೇ.26ರಷ್ಟು ಅಂದರೆ ಅಂದಾಜು 1.25 ಕೋಟಿ ವೀರಶೈವ-ಲಿಂಗಾಯತ ಸಮುದಾಯದವರು ಇದ್ದಾರೆ. ಇದರಲ್ಲಿ 80 ಲಕ್ಷ ಪಂಚಮಸಾಲಿಗಳಿದ್ದು, 18 ಜನ ಈ ಸಮುದಾಯಕ್ಕೆ ಸೇರಿದ ಶಾಸಕರಿದ್ದಾರೆ. ಇವರ ಮೀಸಲಾತಿ ಕೂಗು ಈಗ ವಿಧಾನಸೌಧಕ್ಕೆ ಕೇಳಿಸುತ್ತಿದೆ. ಇನ್ನು ಲಿಂಗಾಯತದಲ್ಲಿನ ಒಳಪಂಗಡಗಳಾದ ಸಾದರ ಲಿಂಗಾಯತದ ಆರು ಜನ ಶಾಸಕರು, ಬಣಜಿಗರಲ್ಲಿ ಐದು ಜನ, ಜಂಗಮ ಮತ್ತು ನೊಣಬ ಲಿಂಗಾಯತರಲ್ಲಿ ತಲಾ ಇಬ್ಬರು ಶಾಸಕರಿದ್ದಾರೆ. ಒಟ್ಟಾರೆ ಅತಿ ಹೆಚ್ಚು ಶಾಸಕರನ್ನು ಈ ಸಮುದಾಯ ಒಳಗೊಂಡಿದೆ. ಆದಾಗ್ಯೂ 2ಎ ಸೌಲಭ್ಯದಿಂದ ವಂಚಿತ ಆಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ನೂರು- ಮುನ್ನೂರು ವರ್ಷದ ಬಗ್ಗೆ ಯೋಚಿಸಿ ಬಜೆಟ್ ಮಾಡಿದ್ದಾರೆ: ಸಿ.ಟಿ ರವಿ

ಬಜೆಟ್ ನಲ್ಲಿ ಅಭಿವೃದ್ಧಿ ಹಾಗೂ ಕಲ್ಯಾಣ ಯೋಜನೆಗಳಿಗೆ ಸಮಾನ ಅವಕಾಶ: ಸುನಿಲ್ ಕುಮಾರ್

ಸಿ.ಡಿ ವಿಚಾರದಲ್ಲಿ ಡಿಕೆಶಿ ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸಿದ್ದಾರೆ: ಈಶ್ವರಪ್ಪ

ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ 5300 ಕೋಟಿ ಘೋಷಣೆ ಸ್ವಾಗತಾರ್ಹ: ಸಿಎಂ ಬೊಮ್ಮಾಯಿ

ಧಾರವಾಡದ ಕಸೂತಿ ಕಲೆಯ ಸೀರೆಯುಟ್ಟು ಬಜೆಟ್ ಮಂಡಿಸಿದ ಸಚಿವೆ ನಿರ್ಮಲಾ ಸೀತಾರಾಮನ್
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಆಸೀಸ್ ವಿರುದ್ಧದ ಮೊದಲ ಟೆಸ್ಟ್ ನಿಂದ ಹೊರಬಿದ್ದ ಸ್ಟಾರ್ ಬ್ಯಾಟರ್: ಸೂರ್ಯಗೆ ಅವಕಾಶ ಸಾಧ್ಯತೆ

ಪುತ್ತೂರು: ಸ್ಕೂಟರ್-ಮಾರುತಿ ವ್ಯಾನ್ ಡಿಕ್ಕಿ; ಸವಾರ ಗಂಭೀರ ಗಾಯ

ಈ ಬಜೆಟ್ ಕರ್ನಾಟಕದ ಪಾಲಿಗೆ ಗೇಮ್ ಚೇಂಜರ್ : ತೇಜಸ್ವಿ ಸೂರ್ಯ

ಕೇಂದ್ರ ಬಜೆಟ್ 2023:ಸಿಹಿ ಸುದ್ದಿ-ಪ್ರಧಾನ್ ಮಂತ್ರಿ ಆವಾಸ್ ಯೋಜನೆಗೆ 79ಸಾವಿರ ಕೋಟಿ ಅನುದಾನ

‘ಹೊಂದಿಸಿ ಬರೆಯಿರಿʼ ಟ್ರೇಲರ್ ಬಿಡುಗಡೆ ಮಾಡಿ ಶುಭ ಹಾರೈಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್