ಅವಕಾಶ ವಂಚಿತ ಎಲ್ಲರಿಗೂ 2ಎ ಮೀಸಲಾತಿ ನೀಡಬೇಕು: ಸಚಿವ ಮುರುಗೇಶ ನಿರಾಣಿ
Team Udayavani, Dec 6, 2022, 8:23 PM IST
ಬೆಂಗಳೂರು: ಪಂಚಮಸಾಲಿ ಲಿಂಗಾಯತರಿಗೆ ಮಾತ್ರವಲ್ಲ; ಇಡೀ ವೀರಶೈವ-ಲಿಂಗಾಯತ ಸೇರಿ ಅವಕಾಶ ವಂಚಿತ ಎಲ್ಲ ಸಮುದಾಯಗಳಿಗೂ 2ಎ ಮೀಸಲಾತಿ ನೀಡಬೇಕೆಂದು ಸಚಿವ ಮುರುಗೇಶ ನಿರಾಣಿ ತಿಳಿಸಿದರು.
ಮಂಗಳವಾರ ಬೆಂಗಳೂರು ಪ್ರಸ್ಕ್ಲಬ್ ಹಮ್ಮಿಕೊಂಡಿದ್ದ ಸಂವಾದದಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, 2ಎ ಮೀಸಲಾತಿಯಿಂದ ಸಾಕಷ್ಟು ಸಮುದಾಯಗಳು ವಂಚಿತವಾಗಿವೆ. ಹಾಗಾಗಿ, ಕೇವಲ ಪಂಚಮಸಾಲಿಗೆ ಸೀಮಿತವಾಗದೆ, ವೀರಶೈವ-ಲಿಂಗಾಯತರು ಒಳಗೊಂಡಂತೆ ಎಲ್ಲ ಸಮುದಾಯಗಳಿಗೂ ಈ ಸೌಲಭ್ಯ ಸಿಗುವಂತಾಗಬೇಕೆಂದು ಹೇಳಿದರು.
ರಾಜ್ಯದ ಒಟ್ಟಾರೆ ಜನಸಂಖ್ಯೆಯಲ್ಲಿ ಶೇ.26ರಷ್ಟು ಅಂದರೆ ಅಂದಾಜು 1.25 ಕೋಟಿ ವೀರಶೈವ-ಲಿಂಗಾಯತ ಸಮುದಾಯದವರು ಇದ್ದಾರೆ. ಇದರಲ್ಲಿ 80 ಲಕ್ಷ ಪಂಚಮಸಾಲಿಗಳಿದ್ದು, 18 ಜನ ಈ ಸಮುದಾಯಕ್ಕೆ ಸೇರಿದ ಶಾಸಕರಿದ್ದಾರೆ. ಇವರ ಮೀಸಲಾತಿ ಕೂಗು ಈಗ ವಿಧಾನಸೌಧಕ್ಕೆ ಕೇಳಿಸುತ್ತಿದೆ. ಇನ್ನು ಲಿಂಗಾಯತದಲ್ಲಿನ ಒಳಪಂಗಡಗಳಾದ ಸಾದರ ಲಿಂಗಾಯತದ ಆರು ಜನ ಶಾಸಕರು, ಬಣಜಿಗರಲ್ಲಿ ಐದು ಜನ, ಜಂಗಮ ಮತ್ತು ನೊಣಬ ಲಿಂಗಾಯತರಲ್ಲಿ ತಲಾ ಇಬ್ಬರು ಶಾಸಕರಿದ್ದಾರೆ. ಒಟ್ಟಾರೆ ಅತಿ ಹೆಚ್ಚು ಶಾಸಕರನ್ನು ಈ ಸಮುದಾಯ ಒಳಗೊಂಡಿದೆ. ಆದಾಗ್ಯೂ 2ಎ ಸೌಲಭ್ಯದಿಂದ ವಂಚಿತ ಆಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ