ಮಣಿಪುರ: ಪಿಎಲ್ ಎ ಉಗ್ರರ ದಾಳಿಗೆ 3 ಅಸ್ಸಾಂ ರೈಫಲ್ಸ್ ಯೋಧರು ಹುತಾತ್ಮ, ಐವರು ಗಂಭೀರ
ಚಾಂಡೇಲ್ ಪ್ರದೇಶಕ್ಕೆ ಹೆಚ್ಚುವರಿ ಸೇನೆಯನ್ನು ಕಳುಹಿಸಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿರುವುದಾಗಿ ವರದಿ ತಿಳಿಸಿದೆ.
Team Udayavani, Jul 30, 2020, 1:28 PM IST
ಇಂಫಾಲ್: ಮಯನ್ಮಾರ್ ಗಡಿ ಸಮೀಪದ ಮಣಿಪುರದ ಚಾಂಡೇಲ್ ಜಿಲ್ಲೆಯಲ್ಲಿ ಸ್ಥಳೀಯ ಉಗ್ರರು ನಡೆಸಿದ ದಾಳಿಯಲ್ಲಿ ಅಸ್ಸಾಂ ರೈಫಲ್ಸ್ ನ ಮೂವರು ಯೋಧರು ಹುತಾತ್ಮರಾಗಿದ್ದು, ಐವರು ಗಾಯಗೊಂಡಿರುವ ಘಟನೆ ನಡೆದಿರುವುದಾಗಿ ವರದಿ ತಿಳಿಸಿದೆ.
ಉಗ್ರರ ದಾಳಿಯಲ್ಲಿ ಗಾಯಗೊಂಡ ಯೋಧರ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ಹೇಳಿವೆ. ಎಎನ್ ಐ ವರದಿ ಪ್ರಕಾರ, ಇದೊಂದು ಪೂರ್ವನಿಯೋಜಿತ ದಾಳಿಯಾಗಿದೆ. ಅಸ್ಸಾಂನ ಪೀಪಲ್ಸ್ ಲಿಬರೇಶನ್ ಆರ್ಮಿ ಎಂಬ ಉಗ್ರಗಾಮಿ ಸಂಘಟನೆ ನಡೆಸಿರುವ ದಾಳಿ ಇದಾಗಿದೆ ಎಂದು ವಿವರಿಸಿದೆ.
ಭಯೋತ್ಪಾದಕರು ಮೊದಲು ಐಇಡಿಯನ್ನು ಸ್ಫೋಟಿಸಿದ್ದರು. ಬಳಿಕ ಗುಂಡಿನ ದಾಳಿ ನಡೆಸಿರುವುದಾಗಿ ವರದಿ ತಿಳಿಸಿದೆ. ಮಣಿಪುರ ರಾಜಧಾನಿ ಇಂಫಾಲದಿಂದ ನೂರು ಕಿಲೋ ಮೀಟರ್ ದೂರದಲ್ಲಿರುವ ಚಾಂಡೇಲ್ ಪ್ರದೇಶಕ್ಕೆ ಹೆಚ್ಚುವರಿ ಸೇನೆಯನ್ನು ಕಳುಹಿಸಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿರುವುದಾಗಿ ವರದಿ ತಿಳಿಸಿದೆ.
ಪ್ರತ್ಯೇಕತವಾದಿ ಸಂಘಟನೆಗಳಿಗೆ ನಿರಂತರವಾಗಿ ಚೀನಾದಿಂದ ಶಸ್ತ್ರಾಸ್ತ್ರ ಮತ್ತು ಆರ್ಥಿಕ ನೆರವು ದೊರೆಯುತ್ತಿರುತ್ತದೆ. ಇದರಿಂದಾಗಿ ಈಶಾನ್ಯ ರಾಜ್ಯಗಳಲ್ಲಿ ಉಗ್ರ ಚಟುವಟಿಕೆಯ ಜಾಲವನ್ನು ಬಲಗೊಳಿಸಲು ನೆರವಾಗುತ್ತಿದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್