ಒಡಿಶಾ ಕರಾವಳಿ ಪ್ರದೇಶಕ್ಕೆ ಅಪ್ಪಳಿಸಿದ ಯಾಸ್, ಪಶ್ಚಿಮಬಂಗಾಳದಲ್ಲಿ 3 ಲಕ್ಷ ಮನೆಗಳಿಗೆ ಹಾನಿ
ಪಶ್ಚಿಮಬಂಗಾಳದಲ್ಲಿ ನಾಳೆಯೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
Team Udayavani, May 26, 2021, 4:40 PM IST
ನವದೆಹಲಿ:ಭಾರತೀಯ ಹವಾಮಾನ ಇಲಾಖೆಯ ಎಚ್ಚರಿಕೆಯಂತೆ ಯಾಸ್ ಚಂಡಮಾರುತ ಬುಧವಾರ(ಮೇ 26) ಒಡಿಶಾ ಮತ್ತು ಪಶ್ಚಿಮಬಂಗಾಳ ಕರಾವಳಿ ಪ್ರದೇಶಕ್ಕೆ ಅಪ್ಪಳಿಸಿದೆ. ಯಾಸ್ ಚಂಡಮಾರುತ ಹೊಡೆತಕ್ಕೆ ಪಶ್ಚಿಮಬಂಗಾಳದಲ್ಲಿ ಮೂರು ಲಕ್ಷ ಮನೆಗಳು ಹಾನಿಗೀಡಾಗಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಅತ್ಯಾಚಾರ ಎಸಗಿ, ಕೊಲೆ ಮಾಡಿದ ಪ್ರಕರಣ: ತಪ್ಪಿತಸ್ಥರ ವಿರುದ್ಧಕ್ರಮಕ್ಕೆ ಪ್ರಕಾಶ ರಾಠೋಡ ಆಗ್ರಹ
ಒಡಿಶಾದ ದಕ್ಷಿಣ ಬಾಲಾಸೋರ್ ನಲ್ಲಿ ಇಂದು ಬೆಳಗ್ಗೆ 10.30ರಿಂದ 11.30ರ ನಡುವೆ ಗಂಟೆಗೆ 150 ಕಿಲೋ ಮೀಟರ್ ನಷ್ಟು ವೇಗದಲ್ಲಿ ಚಂಡಮಾರುತ ಅಪ್ಪಳಿಸಿರುವುದಾಗಿ ವರದಿ ವಿವರಿಸಿದೆ. ಯಾಸ್ ಚಂಡಮಾರುತದಿಂದಾಗಿ ಒಡಿಶಾ, ಪಶ್ಚಿಮಬಂಗಾಳ ಮತ್ತು ಜಾರ್ಖಂಡ್ ನಲ್ಲಿ ಸಾಧಾರಣದಿಂದ ಭಾರೀ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿತ್ತು.
ಒಡಿಶಾದ ಭದ್ರಕ್ ಜಿಲ್ಲೆಯ ದಾಮ್ರಾ ಬಂದರು ಪ್ರದೇಶದ ಕರಾವಳಿಗೆ ಯಾಸ್ ಚಂಡಮಾರುತ ಅಪ್ಪಳಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಭಾರೀ ಮಳೆಯಿಂದಾಗಿ ಭದ್ರಕ್ ಜಿಲ್ಲೆಯ ಜಮುಜ್ಹಾದಿ ರಸ್ತೆ ಹಾನಿಗೀಡಾಗಿರುವುದಾಗಿ ವರದಿ ತಿಳಿಸಿದೆ.
Odisha | Heavy rain damages Jamujhadi Road in Bhadrak district. Road restoration work is underway. #CycloneYaas pic.twitter.com/QJY1i5TiHi
— ANI (@ANI) May 26, 2021
ಹವಾಮಾನ ವೈಪರೀತ್ಯ ಮತ್ತು ಯಾಸ್ ಚಂಡಮಾರುತದಿಂದ ಸುಮಾರು ಒಂದು ಕೋಟಿ ಜನರ ಮೇಲೆ ಪರಿಣಾಮ ಬೀರಿದೆ. ಒಡಿಶಾ ಮತ್ತು ಪಶ್ಚಿಮಬಂಗಾಳದಲ್ಲಿ ನಾಳೆಯೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…