ಕೋವಿಡ್ 19 ಸೋಂಕು: ನೌಕರರಿಗೆ 30 ಲ. ರೂ. ವಿಮೆ


Team Udayavani, Aug 8, 2020, 6:59 AM IST

ಕೋವಿಡ್ 19 ಸೋಂಕು: ನೌಕರರಿಗೆ 30 ಲ. ರೂ. ವಿಮೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಕೋವಿಡ್ 19 ಸೇನಾನಿಗಳಾಗಿ ಕಾರ್ಯ ನಿರ್ವಹಿಸುತ್ತಿರುವಾಗ ಸೋಂಕು ತಗಲಿ ಮೃತಪಟ್ಟ ಸರಕಾರಿ ಅಧಿಕಾರಿ ಮತ್ತು ಸಿಬಂದಿ ಕುಟುಂಬಕ್ಕೆ 30 ಲಕ್ಷ ರೂ. ವಿಮಾ ಪರಿಹಾರ ನೀಡಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಈವರೆಗೆ ಕೋವಿಡ್ 19 ಸೇನಾನಿಗಳು ಎಂದು ಉಲ್ಲೇಖಗೊಂಡವರಿಗೆ ಮಾತ್ರ ಈ ಸೌಲಭ್ಯವಿತ್ತು.

ಇನ್ನು ಮುಂದೆ ಕೋವಿಡ್ 19 ನಿಯಂತ್ರಣದಲ್ಲಿ ಕಾರ್ಯ ನಿರ್ವ ಹಿಸುತ್ತಿರುವ ಎಲ್ಲ ಇಲಾಖೆಗಳ ಅಧಿಕಾರಿ ಮತ್ತು ಸಿಬಂದಿಯ ಕುಟುಂಬಕ್ಕೆ ಇದು ಅನ್ವಯವಾಗಲಿದೆ.

ಕೋವಿಡ್ 19 ನಿಯಂತ್ರಣದಲ್ಲಿ ಭಾಗಿಯಾದ ಸಂದರ್ಭದಲ್ಲಿ ಸರಕಾರಿ ಅಧಿಕಾರಿಗಳು ಸೋಂಕಿಗೆ ಸಿಲುಕಿದರೆ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಲಿದೆ.

ಡಾ| ಯತೀಂದ್ರ ಅವರಿಗೆ ಸೋಂಕು
ವಿಪಕ್ಷ ನಾಯಕ ಸಿದ್ದರಾಮಯ್ಯ ಪುತ್ರ, ಶಾಸಕ ಡಾ| ಯತೀಂದ್ರ ಅವರಿಗೂ ಕೋವಿಡ್ 19 ಸೋಂಕು ತಗಲಿದೆ. ತನ್ನ ಸಂಪರ್ಕದಲ್ಲಿದ್ದವರು ಕ್ವಾರಂಟೈನ್‌ಗೆ ಒಳಗಾಗುವಂತೆ  ಅವರು ಟ್ವಿಟರ್‌ನಲ್ಲಿ  ಮನವಿ ಮಾಡಿಕೊಂಡಿದ್ದಾರೆ.

3 ಸಾವಿರ ತಲುಪಿದ ಸಾವಿನ ಸಂಖ್ಯೆ
ರಾಜ್ಯದಲ್ಲಿ ಶುಕ್ರವಾರ 101 ಮಂದಿ  ಸೋಂಕಿತರು  ಮೃತಪಟ್ಟಿದ್ದು, ಆ ಮೂಲಕ ಕೋವಿಡ್ 19 ಸೋಂಕಿಗೆ ಬಲಿಯಾದವರ ಸಂಖ್ಯೆ 3,000 ಗಡಿಗೆ ಬಂದು ನಿಂತಿದೆ.

ಜತೆಗೆ ಹೊಸದಾಗಿ 6,670 ಮಂದಿಗೆ ಸೋಂಕು ತಗುಲಿದ್ದು, 3,951 ಮಂದಿ ಗುಣಮುಖರಾಗಿದ್ದಾರೆ.  ಈಗ ಒಟ್ಟಾರೆ ಸೋಂಕು ಪ್ರಕರಣಗಳು 1,64,924ಕ್ಕೆ, ಮೃತರ ಸಂಖ್ಯೆ 2998ಕ್ಕೆ ಹಾಗೂ ಗುಣಮುಖರಾದವರ ಸಂಖ್ಯೆ 84,232ಕ್ಕೇರಿದೆ. ಸದ್ಯ 77,686 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ  678 ಮಂದಿ ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಜ್ಯದಲ್ಲಿ ನಿತ್ಯ ಸರಾಸರಿ 94 ಮಂದಿ ಮೃತಪಟ್ಟಿದ್ದು, ರಾಜ್ಯದ ಮರಣ ದರ ಶೇ. 1.81ರಷ್ಟಿದೆ. ಸೋಂಕಿತರ ಸಾವಿನಲ್ಲಿ ದೇಶದಲ್ಲಿಯೇ ನಾಲ್ಕನೇ ಸ್ಥಾನದಲ್ಲಿದೆ. ಶುಕ್ರವಾರ 23 ಸಾವಿರ ರ್ಯಾಪಿಡ್‌ ಆ್ಯಂಟಿಜೆನ್‌, 20 ಸಾವಿರ ಆರ್‌ಟಿಪಿಸಿಆರ್‌ ಸೇರಿ ಒಟ್ಟು 43,553 ಸೋಂಕು ಪರೀಕ್ಷೆಗಳು ನಡೆದಿದ್ದು, 6,670 ಪಾಸಿಟಿವ್‌ ವರದಿಯಾಗಿದೆ.

ಬೆಂಗಳೂರಿನಲ್ಲಿ ಅತಿ ಹೆಚ್ಚು, ಅಂದರೆ 2,147 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಉಳಿದಂತೆ ಬಳ್ಳಾರಿ 684, ಬೆಳಗಾವಿ 390, ಕಲಬುರಗಿ, ಉಡುಪಿ, ಧಾರವಾಡ ಹಾಗೂ ಮೈಸೂರು ನಾಲ್ಕು ಜಿಲ್ಲೆಗಳಲ್ಲಿ ತಲಾ 200ಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ. ಇನ್ನು ಬೆಂಗಳೂರಿನಲ್ಲಿ 1,131, ಬಳ್ಳಾರಿ 627, ಕಲಬುರಗಿ 203 ಸಹಿತ ಒಟ್ಟು 3,951 ಮಂದಿ ಗುಣಮುಖರಾಗಿದ್ದಾರೆ.

ಮೂರು ಲಕ್ಷ ಗಡಿ ದಾಟಿದ ರ್ಯಾಪಿಡ್‌ ಪರೀಕ್ಷೆ
ತ್ವರಿತವಾಗಿ ಸೋಂಕು ಪತ್ತೆಗೆ ರಾಜ್ಯದಲ್ಲಿ ಜುಲೈ 20ರಿಂದ ರ್ಯಾಪಿಡ್‌ ಆ್ಯಂಟಿ ಜೆನ್‌ ಪರೀಕ್ಷೆ ಆರಂಭಿಸಲಾಗಿದ್ದು, ಮೂರು ವಾರಗಳಲ್ಲಿ ಒಟ್ಟು 3,13,737 ಪರೀಕ್ಷೆಗಳನ್ನು ಕೈಗೊಳ್ಳಲಾಗಿದೆ. ಎಂದಿನಂತೆ ಆರ್‌ಟಿಪಿಸಿಆರ್‌ ಪರೀಕ್ಷೆಗಳು ನಡೆಯುತ್ತಿದ್ದು, ಸದ್ಯ ಒಟ್ಟಾರೆ ಪರೀಕ್ಷೆಗಳ ಸಂಖ್ಯೆ 16.2 ಲಕ್ಷಕ್ಕೆ ತಲುಪಿವೆ.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.