ಶೇ, 30 ಕಮಿಷನ್ ಆರೋಪ ; ದಿಂಗಾಲೇಶ್ವರ ಶ್ರೀಗಳು ದಾಖಲೆ ಕೊಡಲಿ: ಸಿಎಂ
ಆಳಕ್ಕೆ ಹೋಗುತ್ತೇವೆ, ಸಂಪೂರ್ಣ ತನಿಖೆ ಮಾಡುತ್ತೇವೆ
Team Udayavani, Apr 18, 2022, 5:39 PM IST
ಬೆಂಗಳೂರು: ದಿಂಗಾಲೇಶ್ವರ ಸ್ವಾಮೀಜಿಗಳು ಎಲ್ಲಿ, ಯಾರಿಗೆ ಎಷ್ಟು ಪರ್ಸೆಂಟ್ ಕಮಿಷನ್ ಕೊಟ್ಟಿದ್ದಾರೆ ಎಂದು ದಾಖಲೆ ಕೊಡಲಿ, ಸಂಪೂರ್ಣ ತನಿಖೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
‘ಮಠ ಗಳಿಗೆ ಅನುದಾನ ಬಿಡುಗಡೆಗೂ ಶೇಕಡಾ 30 ಕಮಿಷನ್ ನೀಡಬೇಕು’ ಎಂದು ಗಂಭೀರ ಆರೋಪ ಮಾಡಿದ್ದರು. ಈ ಬಗ್ಗೆ ವಿಧಾನ ಸೌಧದಲ್ಲಿ ಸೋಮವಾರ ಪ್ರತಿಕ್ರಿಯೆ ನೀಡಿದ ಸಿಎಂ, ”ದಿಂಗಾಲೇಶ್ವರ ಸ್ವಾಮೀಜಿಗಳು ಅತ್ಯಂತ ಉತ್ತಮ ಸ್ವಾಮೀಜಿ, ದೊಡ್ಡ ತಪಸ್ವಿಗಳು. ಒಳ್ಳೆ ಹಿನ್ನೆಲೆ ಇದೆ ಅವರಿಗೆ. ಎಲ್ಲಿ ಯಾರಿಗೆ ಎಷ್ಟು ಪರ್ಸೆಂಟ್ ಕೊಟ್ಟಿದ್ದಾರೆ ಎಂದು ದಾಖಲೆ ಕೊಡಲಿ. ಸಂಪೂರ್ಣ ತನಿಖೆ ಮಾಡುತ್ತೇವೆ” ಎಂದರು.
”ಅವರ ಮಾತಿಗೆ ಬೆಲೆ ಕೊಡುತ್ತಿದ್ದೇವೆ, ಯಾವ ಮಠಾಧೀಶರು ಯಾರಿಗೆ ಕೊಟ್ಟಿದ್ದಾರೆ ದಾಖಲೆ ಕೊಡಲಿ. ಅದರ ಆಳಕ್ಕೆ ಹೋಗುತ್ತೇವೆ, ಸಂಪೂರ್ಣ ತನಿಖೆ ಮಾಡುತ್ತೇವೆ” ಎಂದರು.
ರಾಗಿ ಖರೀದಿ ಮತ್ತಷ್ಟು ಹೆಚ್ಚಳ
”ಬೆಂಬಲ ಬೆಲೆ ಅಡಿ ರಾಗಿ ಖರೀದಿ ಮತ್ತಷ್ಟು ಹೆಚ್ಚಳ ಮಾಡಲು ಸರ್ಕಾರದ ನಿರ್ಧಾರ ಮಾಡಿದೆ. ಕೆಲವು ಜಿಲ್ಲೆ ಗಳಲ್ಲಿ ರಾಗಿ ಖರೀದಿ ಮಾಡಬೇಕು ಎಂಬ ಒತ್ತಡ ಇತ್ತು. ಈಗಾಗಲೇ 2.1 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿ ಮಾಡಿದ್ದೇವೆ. ಇದೀಗ ಹೆಚ್ಚುವರಿಯಾಗಿ 1.14 ಲಕ್ಷ ಮೆಟ್ರಿಕ್ ಟನ್ ಖರೀದಿ ಮಾಡಲು ತೀರ್ಮಾನ ಮಾಡಿದ್ದೇವೆ. ಒಟ್ಟು 487 ಕೋಟಿ ರೂ. ವೆಚ್ಚವಾಗಲಿದೆ” ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ