ಮಹಾರಾಷ್ಟ್ರ: ಎಲ್ಲಾ ಶಾಸಕರು, ಸಚಿವರ ಸಂಬಳದಲ್ಲಿ ಶೇ.30ರಷ್ಟು ಕಡಿತ: ಸಂಪುಟ ಒಪ್ಪಿಗೆ
ಏಪ್ರಿಲ್ ತಿಂಗಳಿನಿಂದ ಆರಂಭಗೊಂಡು ವರ್ಷಾಂತ್ಯದವರೆಗೂ ಶಾಸಕರ ಸಂಬಳ ಕಡಿತಗೊಳ್ಳಲಿದೆ ಎಂದರು.
Team Udayavani, Apr 9, 2020, 8:23 PM IST
ಮುಂಬೈ: ಕೋವಿಡ್ 19 ವೈರಸ್ ನಿಂದಾದ ನಷ್ಟ ಸರಿದೂಗಿಸಲು ಎಲ್ಲಾ ಶಾಸಕರ ಹಾಗೂ ಸಚಿವರ ಸಂಬಳದಲ್ಲಿ ಶೇ.30ರಷ್ಟು ಕಡಿತಗೊಳಿಸಲು ಮಹಾರಾಷ್ಟ್ರ ಸಚಿವ ಸಂಪುಟ ಗುರುವಾರ ಅಂಕಿತ ಹಾಕಿದೆ. 21 ದಿನಗಳ ಲಾಕ್ ಡೌನ್ ನಿಂದಾಗಿ ಸಂಭವಿಸಿದ ನಷ್ಟವನ್ನು ಭರಿಸಲು ಈ ನಿರ್ಧಾರ ಕೈಗೊಂಡಿರುವುದಾಗಿ ವರದಿ ತಿಳಿಸಿದೆ.
ರಾಜ್ಯದ ಎಲ್ಲಾ ಶಾಸಕರ, ಸಚಿವರ ಸಂಬಳದಲ್ಲಿ ಶೇ.30ರಷ್ಟು ಕಡಿತಗೊಳಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದರು.
ಏಪ್ರಿಲ್ ತಿಂಗಳಿನಿಂದ ಆರಂಭಗೊಂಡು ವರ್ಷಾಂತ್ಯದವರೆಗೂ ಶಾಸಕರ ಸಂಬಳ ಕಡಿತಗೊಳ್ಳಲಿದೆ ಎಂದರು. ಲಾಕ್ ಡೌನ್ ಸಂದರ್ಭದಲ್ಲಿ ರಾಜ್ಯದ ಆರ್ಥಿಕ ಸ್ಥಿತಿಯನ್ನು ಪರಿಶೀಲಿಸಲು ಎರಡು ಸಮಿತಿಯನ್ನು ರಚಿಸಲು ಸಂಪುಟ ಅನುಮತಿ ನೀಡಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
MUST WATCH
ಹೊಸ ಸೇರ್ಪಡೆ
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ
Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
ಬ್ಯಾಡಗಿ: ಮೆಣಸಿನಕಾಯಿ ವಹಿವಾಟು ಸುಗಮ; ಪೊಲೀಸ್ ಭದ್ರತೆ