ತೃಣಮೂಲ ಕಾಂಗ್ರೆಸ್ ಪಕ್ಷದ 38 ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ: ಮಿಥುನ್ ಚಕ್ರವರ್ತಿ
ವಿಧಾನಸಭಾ ಚುನಾವಣೆಗೂ ಮುನ್ನ ನಟ ಮಿಥುನ್ ಚಕ್ರವರ್ತಿಯನ್ನು ಬಿಜೆಪಿ ತನ್ನ ಮಡಿಲಿಗೆ ಸೆಳೆದುಕೊಂಡಿತ್ತು.
Team Udayavani, Jul 27, 2022, 5:43 PM IST
ಕೋಲ್ಕತಾ: ಪಶ್ಚಿಮಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ನ 30ಕ್ಕೂ ಅಧಿಕ ಶಾಸಕರು ಭಾರತೀಯ ಜನತಾ ಪಕ್ಷದ ಸಂಪರ್ಕದಲ್ಲಿದ್ದಾರೆ ಎಂದು ನಟ ಮಿಥುನ್ ಚಕ್ರವರ್ತಿ ಬುಧವಾರ (ಜುಲೈ 27) ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ.
ಇದನ್ನೂ ಓದಿ:ಪ್ರವೀಣ್ ಹತ್ಯೆ : ಕೊಲೆಗಡುಕರಿಗೆ ಉಗ್ರ ಶಿಕ್ಷೆ ನೀಡುತ್ತೇವೆ : ಸಿಎಂ ಬೊಮ್ಮಾಯಿ
ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಸಚಿವ ಮತ್ತು ಅವರ ಆಪ್ತರಿಂದಾಗಿ ಟಿಎಂಸಿ ಪಕ್ಷದೊಳಗೆ ಸಮಸ್ಯೆ ತಲೆದೋರಿದೆ ಎಂದು ಚಕ್ರವರ್ತಿ ಆರೋಪಿಸಿದ್ದಾರೆ.
ನಾನು ನಿಮಗೆ ಎಲ್ಲಾ ಬ್ರೇಕಿಂಗ್ ನ್ಯೂಸ್ ನೀಡುತ್ತೇನೆ. ಸದ್ಯ ತೃಣಮೂಲ ಕಾಂಗ್ರೆಸ್ ನ 38 ಶಾಸಕರು ಬಿಜೆಪಿ ಜೊತೆ ಸಂಪರ್ಕದಲ್ಲಿದ್ದಾರೆ. ಅವರಲ್ಲಿ 21 ಶಾಸಕರು ನೇರವಾಗಿ ನನ್ನ ಸಂಪರ್ಕದಲ್ಲಿದ್ದಾರೆ ಎಂದು ಮಿಥುನ್ ತಿಳಿಸಿದ್ದಾರೆ.
ಕಳೆದ ವರ್ಷ ಪಶ್ಚಿಮಬಂಗಾಳ ವಿಧಾನಸಭಾ ಚುನಾವಣೆಗೂ ಮುನ್ನ ನಟ ಮಿಥುನ್ ಚಕ್ರವರ್ತಿಯನ್ನು ಬಿಜೆಪಿ ತನ್ನ ಮಡಿಲಿಗೆ ಸೆಳೆದುಕೊಂಡಿತ್ತು. ನಾನಿಂದು ಇಷ್ಟು ದೊಡ್ಡ ನಟನಾಗಲು ಹಿಂದೂಗಳೇ ಕಾರಣ. ಮುಸ್ಲಿಮರು ಮತ್ತು ಸಿಖ್ಖರು ನನ್ನ ನಟನೆಯನ್ನು ಪ್ರೀತಿಸುತ್ತಾರೆ ಎಂದು ಚಕ್ರವರ್ತಿ ಹೇಳಿದರು.
ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಸಚಿವ ಪಾರ್ಥ ಚಟರ್ಜಿ ಕುರಿತು ಮಾತನಾಡಿದ ಮಿಥುನ್, ಹಗರಣದಲ್ಲಿ ಅವರು ಶಾಮೀಲಾಗದಿದ್ದರೆ, ಅದಕ್ಕೆ ಪುರಾವೆ ಇಲ್ಲವೆಂದಾದ ಮೇಲೆ ಭಯಪಡುವ ಅಗತ್ಯವಿಲ್ಲ. ಆದರೆ ಒಂದು ವೇಳೆ ಆರೋಪಿ ಎಂದು ಸಾಬೀತಾದರೆ ಜಗತ್ತಿನ ಯಾವ ಶಕ್ತಿಯೂ ಅವರನ್ನು ಕಾಪಾಡಲಾರದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ