ಕೊಲೆಗೆ ಯತ್ನ: ಅಳಕೆ ಗ್ಯಾಂಗ್ ನ ನಾಲ್ವರನ್ನು ಬಂಧಿಸಿದ ಮಂಗಳೂರು ಪೊಲೀಸರು
Team Udayavani, Dec 4, 2021, 3:42 PM IST
ಮಂಗಳೂರು : ಅಳಕೆ ಮತ್ತು ಬೋಳೂರು ಗ್ಯಾಂಗ್ ಗಳ ನಡುವಿನ ದ್ವೇಷ ಮತ್ತು ಕೊಲೆ ಯತ್ನ ಪ್ರಕರಣದಲ್ಲಿ ತಲವಾರು ದಾಳಿ ನಡೆಸಿದ ನಾಲ್ವರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ.
ಬರ್ಕೆ ಠಾಣಾ ವ್ಯಾಪ್ತಿಯಲ್ಲಿ ನವೆಂಬರ್ 28 ರ ನಸುಕಿನ 2 ಗಂಟೆಯ ವೇಳೆಗೆ ಅಂಕಿತ್ ಮತ್ತು ಶ್ರವಣ್ ಎನ್ನುವವರ ಮೇಲೆ ಮಾರಕಾಯುಧಗಳಿಂದ ದಾಳಿ ನಡೆಸಿದ ಆರೋಪಿಗಳಾದ ಅಳಕೆ ಗ್ಯಾಂಗಿನ ಹತ್ಯೆಗೀಡಾದ ಇಂದ್ರಜಿತ್ ಸ್ನೇಹಿತರಾದ ನವನೀತ್ ಅಶೋಕನಗರ , ಹೇಮಂತ್ ಹೊಯಿಗೆ ಬೈಲ್ , ದೀಕ್ಷಿತ್ ಬೋಳೂರು, ಮತ್ತು ಆರೋಪಿಗಳು ತಲೆ ಮರೆಸಿಕೊಳ್ಳಲು ನೆರವಾದ ಸಂದೇಶ್ ಅವರನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಸಹಕರಿಸಿದ ಇತರರ ಬಂಧನ ಬಾಕಿ ಉಳಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಬಳಸಿದ 3 ತಲವಾರುಗಳು, 3 ದ್ವಿಚಕ್ರ ವಾಹನಗಳನ್ನು ಮತ್ತು ಆಟೋರಿಕ್ಷಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತರು ಈ ಹಿಂದೆಯೂ ಅಪರಾಯಧ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಹೇಮಂತ್ ಮೂರು ಪ್ರಕರಣಗಳಲ್ಲಿ, ನವನೀತ್ 2 ಪ್ರಕರಣಗಳಲ್ಲಿ ಮತ್ತು ದೀಕ್ಷಿತ್ 1 ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿದ್ದರು.
2020 ರಲ್ಲಿ ಇಂದ್ರಜಿತ್ ನನ್ನ ಬೋಳೂರು ಗ್ಯಾಂಗ್ ಹತ್ಯೆ ಮಾಡಿತ್ತು.
2014 ರಲ್ಲಿ ಬೋಳೂರು ಗ್ಯಾಂಗ್ ನ ತಲ್ವಾರ್ ಜಗ್ಗ ಸೇರಿ ಮೂವರ ಹತ್ಯೆ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ