ಪಾಕಿಸ್ತಾನ: ನಾಲ್ವರು ಯುವತಿಯರನ್ನು ನಗ್ನಗೊಳಿಸಿ ಮೆರವಣಿಗೆ, ಹಲ್ಲೆ; ಐವರ ಬಂಧನ

ತಮ್ಮನ್ನು ಬಿಟ್ಟು ಬಿಡಿ ಎಂದು ಜನರಲ್ಲಿ ಅಂಗಲಾಚುತ್ತಿದ್ದರೂ ಕೂಡಾ  ಯಾವುದೇ ಪ್ರಯೋಜನವಾಗಿಲ್ಲ

Team Udayavani, Dec 8, 2021, 10:51 AM IST

ಪಾಕಿಸ್ತಾನ: ನಾಲ್ವರು ಯುವತಿಯರನ್ನು ನಗ್ನಗೊಳಿಸಿ ಮೆರವಣಿಗೆ, ಹಲ್ಲೆ; ಐವರ ಬಂಧನ

ಲಾಹೋರ್: ಅಂಗಡಿಯೊಂದರಲ್ಲಿ ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಗುಂಪೊಂದು ಅಪ್ರಾಪ್ತಾ ಬಾಲಕಿ ಸೇರಿದಂತೆ ನಾಲ್ವರು ಯುವತಿಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿಸಿರುವ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.

ಈ ಘಟನೆ ಸೋಮವಾರ ಲಾಹೋರ್ ನಿಂದ 180 ಕಿಲೋ ಮೀಟರ್ ದೂರದಲ್ಲಿರುವ ಫೈಸಲಾಬಾದ್ ಎಂಬಲ್ಲಿ ನಡೆದಿದೆ. ನಾಲ್ವರು ಯುವತಿಯರನ್ನು ನಗ್ನಗೊಳಿಸಿ, ಥಳಿಸಿದ ನಂತರ ಸುತ್ತಲೂ ನೆರೆದಿದ್ದ ಜನರ ಬಳಿ ಮಾನ ಮುಚ್ಚಿಕೊಳ್ಳಲು ಬಟ್ಟೆಯ ತುಂಡನ್ನು ಕೊಡಿ ಎಂದು ಅಲವತ್ತುಕೊಂಡಿರುವ ದೃಶ್ಯ ವೈರಲ್ ಆದ ವಿಡಿಯೋದಲ್ಲಿ ಕಂಡುಬಂದಿರುವುದಾಗಿ ವರದಿ ಹೇಳಿದೆ.

ಯುವತಿಯವರು ತಮ್ಮನ್ನು ಬಿಟ್ಟು ಬಿಡಿ ಎಂದು ಜನರಲ್ಲಿ ಅಂಗಲಾಚುತ್ತಿದ್ದರೂ ಕೂಡಾ  ಯಾವುದೇ ಪ್ರಯೋಜನವಾಗಿಲ್ಲ, ನಂತರ ಸುಮಾರು ಒಂದು ಗಂಟೆಗಳ ಕಾಲ ಯುವತಿಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿಸಲಾಗಿತ್ತು ಎಂದು ವರದಿ ತಿಳಿಸಿದೆ.

ಯುವತಿಯರನ್ನು ನಗ್ನಗೊಳಿಸಿ ಥಳಿಸಿದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಪಾಕಿಸ್ತಾನದ ಪಂಜಾಬ್ ಪೊಲೀಸರು ತನಿಖೆ ನಡೆಸಿದ್ದು, ಐವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸ್ ವಕ್ತಾರ ಮಂಗಳವಾರ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಈ ನಾಲ್ವರು ಫೈಸಲಾಬಾದ್ ನ ಬಾವಾ ಚಾಕ್ ಮಾರುಕಟ್ಟೆ ಪ್ರದೇಶದಲ್ಲಿ ತ್ಯಾಜ್ಯ ವಸ್ತು ಸಂಗ್ರಹಕ್ಕೆ ತೆರಳಿದ್ದರು. ಬಾಯಾರಿಕೆಯಿಂದಾಗಿ ಇವರು ಉಸ್ಮಾನ್ ಎಲೆಕ್ಟ್ರಿಕ್ ಸ್ಟೋರ್ ಗೆ ತೆರಳಿ ಒಂದು ಬಾಟಲು ನೀರು ಕೇಳಿದ್ದರು. ಆದರೆ ಅಂಗಡಿ ಮಾಲೀಕ ಸದ್ದಾಂ, ನೀವೆಲ್ಲಾ ಕಳವು ಮಾಡಲು ಬಂದಿದ್ದೀರಿ ಎಂದು ಆರೋಪಿಸಿ ಹಿಗ್ಗಾಮುಗ್ಗಾ ಹೊಡೆಯಲು ಆರಂಭಿಸಿದ್ದ. ಬಳಿಕ ಯುವತಿಯರನ್ನು ನಗ್ನಗೊಳಿಸಿ, ಎಳೆದೊಯ್ದು ಹಲ್ಲೆ ನಡೆಸಿರುವುದಾಗಿ ಪೊಲೀಸ್ ವಕ್ತಾರ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.