ಭಾರತ-ಚೀನ ನಡುವೆ 5.63 ಲಕ್ಷ ಕೋಟಿ ರೂ. ಮೊತ್ತದ ವಹಿವಾಟು


Team Udayavani, Feb 24, 2021, 7:05 AM IST

ಭಾರತ-ಚೀನ ನಡುವೆ 5.63 ಲಕ್ಷ ಕೋಟಿ ರೂ. ಮೊತ್ತದ ವಹಿವಾಟು

ಬೀಜಿಂಗ್‌: 2020ರಲ್ಲಿ ಗಡಿ ಬಿಕ್ಕಟ್ಟಿನಿಂದಾಗಿ ಭಾರತ ಹಾಗೂ ಚೀನ ನಡುವೆ ಸಂಬಂಧ ಹದ ಗೆಟ್ಟಿದ್ದ ನಡುವೆಯೂ ಉಭಯ ದೇಶಗಳ ನಡುವಿನ ದ್ವಿಮುಖ ವ್ಯಾಪಾರ ವಹಿವಾಟು ನೆಲಕ್ಕಚ್ಚಿರಲಿಲ್ಲ. ಎರಡೂ ರಾಷ್ಟ್ರಗಳು ಬರೋಬ್ಬರಿ 5.63 ಲಕ್ಷ ಕೋಟಿ ರೂ. ವಹಿವಾಟು ನಡೆಸಿದ್ದು, ಇದು ಬೇರೆಲ್ಲ ರಾಷ್ಟ್ರಗಳಿಗಿಂತ ಅತ್ಯಧಿಕ ಎಂದು ಕೇಂದ್ರ ವಿತ್ತ ಸಚಿವಾಲಯ ಬಿಡುಗಡೆ ಮಾಡಿದ ದತ್ತಾಂಶ ಹೇಳಿದೆ.

ಭಾರತ ಕಳೆದ ವರ್ಷ 4.25 ಲಕ್ಷ ಕೋಟಿ ರೂ.ಗಳಷ್ಟು ಮೊತ್ತದ ಉತ್ಪನ್ನಗಳನ್ನು ಚೀನದಿಂದ ಆಮದು ಮಾಡಿಕೊಂಡಿತ್ತು. ಈ ಮೊತ್ತ ನಂ.1- ನಂ.2 ಸ್ಥಾನದಲ್ಲಿರುವ ಅಮೆರಿಕ, ಯುಎಇಗಳಿಂದ ಭಾರತ ಮಾಡಿಕೊಳ್ಳುವ ಒಟ್ಟು ಆಮದುಗಿಂತಲೂ ಅಧಿಕ. ಆದರೆ ಒಟ್ಟು 5.63 ಲಕ್ಷ ಕೋಟಿ ರೂ. ವಹಿವಾಟಿನಲ್ಲಿ ಭಾರತ ಕೇವಲ 1.37 ಲಕ್ಷ ಕೋಟಿ ರೂ.ಗಳಷ್ಟು ಮೊತ್ತದ ಉತ್ಪನ್ನಗಳನ್ನು ಮಾತ್ರವೇ ಚೀನಕ್ಕೆ ರಫ್ತು ಮಾಡಿದೆ. ಅಂದರೆ, ದ್ವಿಮುಖ ವ್ಯಾಪಾರದಲ್ಲಿ ನಮ್ಮ ಪಾಲು ಕೇವಲ ಶೇ.11!

ಭಾರತವು ಚೀನದಿಂದ 2.89 ಲಕ್ಷ ಕೋಟಿ ರೂ. ಮೊತ್ತದ ಭಾರೀ ಯಂತ್ರಗಳು, ಟೆಲಿಕಾಂ ಉಪಕರಣಗಳು, ಗೃಹ ಬಳಕೆ ವಸ್ತುಗಳನ್ನು ಆಮದು ಮಾಡಿಕೊಂಡಿದೆ.

ಸ್ವಾವಲಂಬಿಯಾಗಲು 4-5 ವರ್ಷ ಬೇಕು: ಸ್ಥಳೀಯವಾಗಿ ವಸ್ತುಗಳ ಉತ್ಪಾದನೆಗೆ ಪ್ರಧಾನಿ ಮೋದಿ ಅವರು ಪಿಎಲ್‌ಐ ಯೋಜನೆ (ಉತ್ಪಾದನೆ ಆಧಾರಿತ ಪ್ರೋತ್ಸಾಹಧನ) ಜಾರಿಮಾಡಿದ್ದಾರೆ. ಈ ಅನುದಾನ ಬಳಸಿಕೊಂಡು ಈಗಾಗಲೇ ಸ್ಥಳೀಯವಾಗಿ ವಸ್ತುಗಳ ತಯಾರಿಕೆ ಶುರುವಾಗಿದೆ. “ಪಿಎಲ್‌ಐ ಬಳಸಿಕೊಂಡು ಭಾರತ ಸ್ವಾವಲಂಬಿಯಾಗಲು ಇನ್ನೂ 4-5 ವರ್ಷಗಳು ಬೇಕು. ಅಲ್ಲಿಯವರೆಗೆ ಚೀನ ವಸ್ತುಗಳನ್ನೇ ಅವಲಂ­ಬಿ­ಸ­ಬೇಕಾಗಿದೆ’ ಎನ್ನುತ್ತಾರೆ ಆರ್ಥಿಕ ತಜ್ಞ ಅಮಿತೇಂದು ಪಾಲಿಟ್‌.

45 ಚೀನೀ ಸಂಸ್ಥೆಗಳ ಹೂಡಿಕೆಗೆ ಸಮ್ಮತಿ ವಿಚಾರ ಸುಳ್ಳು
45 ಚೀನೀ ಸಂಸ್ಥೆಗಳಿಗೆ ಹೂಡಿಕೆ ಮಾಡಲು ಭಾರತ ಗ್ರೀನ್‌ ಸಿಗ್ನಲ್‌ ನೀಡುತ್ತಿದೆ ಎಂಬ ಸುದ್ದಿಯನ್ನು ಕೇಂದ್ರ ಸರಕಾರ‌ ಸ್ಪಷ್ಟವಾಗಿ ನಿರಾಕರಿಸಿದೆ. “ಯಾವ ಚೀನೀ ಕಂಪೆನಿಗಳ ಹೂಡಿಕೆಗೂ ಭಾರತ ಸಮ್ಮತಿ ನೀಡಿಲ್ಲ’ ಎಂದು ಸರಕಾರದ ಮೂಲಗಳು ಸ್ಪಷ್ಪಪಡಿಸಿವೆ. “ಹಾಂಕಾಂಗ್‌ ಮೂಲದ 3 ಪ್ರಸ್ತಾವಗಳಿಗಷ್ಟೇ ಒಪ್ಪಿಗೆ ನೀಡಲಾಗಿದೆ. ಸಿಟಿಜನ್‌ ವಾಚಸ್‌, ನಿಪ್ಪಾನ್‌ ಪೇಂಟ್ಸ್‌ ಮತ್ತು ನೆಟ್‌ಪ್ಲೇ ಇಂಥ ಅವಕಾಶ ಪಡೆದಿವೆ. ಇವುಗಳ ಪೈಕಿ 2 ಜಪಾನೀಸ್‌ ಮತ್ತು 1 ಎನ್‌ಆರ್‌ಐಗೆ ಸೇರಿದ ಕಂಪೆನಿಗಳಾಗಿವೆ’ ಎಂದಿದೆ. ಭಾರತದ ಎಫ್ಡಿಐ ಕಾಯ್ದೆಯ ಹೊಸ ತಿದ್ದುಪಡಿಯಂತೆ ಬಿಕ್ಕಟ್ಟು ಹೊಂದಿರುವ ಯಾವುದೇ ನೆರೆರಾಷ್ಟ್ರಗಳು ಸರಕಾರದಿಂದ ರಕ್ಷಣ ವಿಶ್ಲೇ­ಷಣೆಗೊಳಪಟ್ಟೇ ಅನುಮತಿ ಪಡೆಯಬೇಕು ಎಂದಿದೆ.

ಟಾಪ್ ನ್ಯೂಸ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISREL

Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್‌ ಮೇಲೆ ಹಲವು ರಾಷ್ಟ್ರಗಳ ಒತ್ತಡ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

1eewqew

Sydney attack: ತನ್ನ ಪ್ರಾಣವೇ ಹೋಗುತ್ತಿದ್ದರೂ ಪುತ್ರಿ ರಕ್ಷಣೆಗೆ ಮಹಿಳೆ ಕೋರಿಕೆ!

1qeqweqwe

Canada; ಅಮೆರಿಕ ಮಾದರಿಯಲ್ಲಿ ಭಾರತೀಯ ವಿದ್ಯಾರ್ಥಿಯ ಹತ್ಯೆ

police USA

US ಷಿಕಾಗೋದಲ್ಲಿ ಶೂಟೌಟ್‌: 7 ವರ್ಷದ ಬಾಲಕಿ ಸಾವು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.