4 ತಿಂಗಳಲ್ಲಿ 5 ಲಕ್ಷ ಮನೆ?- ಮಾರ್ಚ್ ಒಳಗೆ ಕಾಮಗಾರಿ ಪೂರ್ಣ ಗುರಿ: ಸಚಿವ ಸೋಮಣ್ಣ
Team Udayavani, Nov 29, 2022, 7:05 AM IST
ಬೆಂಗಳೂರು: ಮುಂದಿನ ಮಾರ್ಚ್ ಒಳಗೆ ಹೊಸದಾಗಿ ಐದು ಲಕ್ಷ ಮನೆ ನಿರ್ಮಾಣದ ಗುರಿ ಹೊಂದಲಾಗಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಇತ್ತೀಚೆಗೆ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ವಸತಿ ಇಲಾಖೆ ಸಭೆಯಲ್ಲಿ ಬಡ ಕುಟುಂಬಗಳಿಗೆ ಹೊಸದಾಗಿ 5 ಲಕ್ಷ ಮನೆ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ ಎಂದು ಸೋಮವಾರ ಸುದ್ದಿಗಾರರಿಗೆ ಅವರು ತಿಳಿಸಿದರು.
ರಾಜ್ಯ ಹಾಗೂ ಕೇಂದ್ರ ಸರಕಾರದ ಯೋಜನೆಗಳಡಿ 5 ಲಕ್ಷ ಮನೆಗಳ ನಿರ್ಮಾಣಕ್ಕೆ 5 ಸಾವಿರ ಕೋಟಿ ರೂ. ಅಗತ್ಯವಿದೆ. ನೆರವು ಕಲ್ಪಿಸುವ ಭರವಸೆಯನ್ನು ಸಿಎಂ ನೀಡಿದ್ದಾರೆ ಎಂದರು.
ಇದುವರೆಗೆ 3.5 ಲಕ್ಷ ಮನೆ ನಿರ್ಮಿಸಿ ಹಂಚಿಕೆ ಮಾಡಲಾಗಿದೆ. ಹಿಂದಿನ ಸರಕಾರವಿದ್ದಾಗ 3.5 ಲಕ್ಷ ಮನೆಗಳ ನಿರ್ಮಾಣ ಪ್ರಕ್ರಿಯೆ ಪ್ರಾರಂಭಿಸಿದ್ದರು. ಆದರೆ ಹಣಕಾಸು ಮೀಸಲಿಟ್ಟಿರಲಿಲ್ಲ. ಈಗ ಆ ಮನೆಗಳಿಗೂ ಹಣ ಮಂಜೂರು ಮಾಡಲಾಗಿದೆ ಎಂದರು.
ವಸತಿ ಇಲಾಖೆಗೆ ಅನುದಾನದ ಕೊರತೆ ಇಲ್ಲ. 1,200ರಿಂದ 1,500 ಕೋಟಿ ರೂ. ಖಾತೆಯಲ್ಲಿದೆ. ನಮ್ಮ ಅವಧಿಯಲ್ಲಿ ಕನಿಷ್ಠ 9 ಲಕ್ಷ ಮನೆ ನಿರ್ಮಿಸಿ ಹಂಚಿಕೆ ಮಾಡಲಿದ್ದೇವೆ ಎಂದು ತಿಳಿಸಿದರು.
ಶಿವಮೊಗ್ಗ ವಿಮಾನ ನಿಲ್ದಾಣ ಮುಂದಿನ ಫೆಬ್ರವರಿಯಲ್ಲಿ ಉದ್ಘಾಟನೆಯಾಗಲಿದೆ. ರಾಯಚೂರು ವಿಮಾನ ನಿಲ್ದಾಣಕ್ಕೆ ಸದ್ಯದಲ್ಲೇ ಟೆಂಡರ್ ಕರೆಯಲಾಗುವುದು. ಧರ್ಮಸ್ಥಳದಲ್ಲಿ ಮಿನಿ ಏರ್ಪೋರ್ಟ್ ನಿರ್ಮಾಣಕ್ಕೆ 200 ಎಕರೆ ಪೈಕಿ 170 ಎಕರೆ ಲಭ್ಯವಿದ್ದು, 30 ಎಕರೆ ಗುರುತಿಸಲು ಸೂಚಿಸಲಾಗಿದೆ. ವಿಜಯಪುರ, ಕಲಬುರಗಿ ವಿಮಾನ ನಿಲ್ದಾಣಗಳ ಕಾರ್ಯವೂ ಚುರುಕುಗೊಂಡಿದೆ. ದಾವಣಗೆರೆಯಲ್ಲೂ ವಿಮಾನ ನಿಲ್ದಾಣದ ಬೇಡಿಕೆಯಿದೆ.
– ವಿ. ಸೋಮಣ್ಣ, ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
MUST WATCH
ಹೊಸ ಸೇರ್ಪಡೆ
Sandalwood: ಗಾಡ್ ಪ್ರಾಮಿಸ್ಗೆ ಸ್ಕ್ರಿಪ್ಟ್ ಪೂಜೆ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್ ನಿರೀಕ್ಷೆ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ