ಗುಜರಾತ್: ರಾಸಾಯನಿಕ ತಯಾರಿಕ ಕಾರ್ಖಾನೆಯಲ್ಲಿ ಸ್ಫೋಟ, 6 ಮಂದಿ ಸಜೀವ ದಹನ
ಸ್ಫೋಟದಿಂದಾಗಿ ಬೆಂಕಿ ಹೊತ್ತಿಕೊಂಡು ಕ್ಷಣಾರ್ಥದಲ್ಲಿ ಎಲ್ಲೆಡೆ ಆವರಿಸಿತ್ತು.
Team Udayavani, Apr 11, 2022, 11:18 AM IST
ಅಹಮದಾಬಾದ್: ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಆರು ಮಂದಿ ಸಾವನ್ನಪ್ಪಿರುವ ಘಟನೆ ಸೋಮವಾರ (ಏಪ್ರಿಲ್ 11) ಗುಜರಾತ್ ನ ಭರೂಚ್ ಜಿಲ್ಲೆಯಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಎಚ್ಚರ ವಹಿಸಿ; ಭಾರತದಲ್ಲಿ 24 ಗಂಟೆಯಲ್ಲಿ 861 ಕೋವಿಡ್ ಪ್ರಕರಣ ಪತ್ತೆ, 6 ಮಂದಿ ಸಾವು
ಅಹಮದಾಬಾದ್ ನಿಂದ 235 ಕಿಲೋ ಮೀಟರ್ ದೂರದಲ್ಲಿರುವ ದಹೇಜ್ ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕೆ ಕಾರ್ಖಾನೆಯಲ್ಲಿ ಮುಂಜಾನೆ 3ಗಂಟೆ ಹೊತ್ತಿಗೆ ಈ ಸ್ಫೋಟ ಸಂಭವಿಸಿದ್ದು, ಇದರಿಂದಾಗಿ ಬೆಂಕಿ ಹೊತ್ತಿಕೊಂಡಿರುವುದಾಗಿ ವರದಿ ತಿಳಿಸಿದೆ.
ರಾಸಾಯನಿಕ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಿದ್ದು, ಆರು ಮಂದಿ ಕಾರ್ಮಿಕರು ಸಜೀವವಾಗಿ ದಹನಗೊಂಡಿರುವುದಾಗಿ ಭರೂಚ್ ಪೊಲೀಸ್ ವರಿಷ್ಠಾಧಿಕಾರಿ ಲೀನಾ ಪಾಟೀಲ್ ತಿಳಿಸಿದ್ದಾರೆ.
ಸ್ಫೋಟದಿಂದಾಗಿ ಬೆಂಕಿ ಹೊತ್ತಿಕೊಂಡು ಕ್ಷಣಾರ್ಥದಲ್ಲಿ ಎಲ್ಲೆಡೆ ಆವರಿಸಿತ್ತು. ಘಟನೆಯಲ್ಲಿ ಸಾವನ್ನಪ್ಪಿರುವವರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಬೆಂಕಿಯನ್ನು ನಿಯಂತ್ರಿಸುವಲ್ಲಿ ಅಗ್ನಿಶಾಮಕ ದಳ ಯಶಸ್ವಿಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನದಿಗೆ ಉರುಳಿ ಬಿದ್ದ ಐಟಿಬಿಪಿ ಸಿಬ್ಬಂದಿಗಳನ್ನು ಹೊತ್ತೊಯ್ದ ಬಸ್ : 6 ಮಂದಿ ಸಾವು
ಶೋಪಿಯಾನ್: ಉಗ್ರರ ಗುಂಡಿನ ದಾಳಿಗೆ ಕಾಶ್ಮೀರಿ ಪಂಡಿತ ಸಾವು, ಸಹೋದರನಿಗೆ ಗಾಯ
ಮಧ್ಯಪ್ರದೇಶದ ಜನವಸತಿ ಪ್ರದೇಶಕ್ಕೆ ಸರ್ಪ್ರೈಸ್ ವಿಸಿಟ್ ಕೊಟ್ಟ ದೈತ್ಯ ಮೊಸಳೆ : ಕಂಗಾಲಾದ ಜನ
ಹರ್ ಘರ್ ತಿರಂಗಾ- ಈ ವರ್ಷ 30 ಕೋಟಿಗೂ ಅಧಿಕ ರಾಷ್ಟ್ರಧ್ವಜ ಮಾರಾಟ, 500 ಕೋಟಿ ಆದಾಯ: ಸಿಎಐಟಿ
ಮನೆಯಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಅತ್ತೆ, ಸೊಸೆ ಶವ ಪತ್ತೆ : ದರೋಡೆಕೋರರ ಕೈವಾಡ ಶಂಕೆ ?
MUST WATCH
ಹೊಸ ಸೇರ್ಪಡೆ
ನದಿಗೆ ಉರುಳಿ ಬಿದ್ದ ಐಟಿಬಿಪಿ ಸಿಬ್ಬಂದಿಗಳನ್ನು ಹೊತ್ತೊಯ್ದ ಬಸ್ : 6 ಮಂದಿ ಸಾವು
ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅಪ್ರಾಪ್ತ ವಯಸ್ಕ ಸಂಬಂಧಿಯಿಂದಲೇ ಅತ್ಯಾಚಾರ!
ಶೋಪಿಯಾನ್: ಉಗ್ರರ ಗುಂಡಿನ ದಾಳಿಗೆ ಕಾಶ್ಮೀರಿ ಪಂಡಿತ ಸಾವು, ಸಹೋದರನಿಗೆ ಗಾಯ
ಅಮೃತ ಮಹೋತ್ಸವ; 75 ಸಾಮಾಜಿಕ ಕಾರ್ಯ
ಹೆಚ್ಚಿದ ಭದ್ರತೆ: ಶಿವಮೊಗ್ಗ- ಭದ್ರಾವತಿ ನಗರ ವ್ಯಾಪ್ತಿಯಲ್ಲಿ ಮದ್ಯಮಾರಾಟ ನಿಷೇಧ