6 ವರ್ಷದ ಮಗುವಿನ ಮೇಲೆ ಅತ್ಯಾಚಾರ; ಆರೋಪಿಯನ್ನು ಎನ್ ಕೌಂಟರ್ ಮಾಡ್ತೇವೆ: ತೆಲಂಗಾಣ ಸಚಿವ
ತಲೆಮರೆಯಿಸಿಕೊಂಡಿರುವ ಆರೋಪಿ ಪತ್ತೆಗಾಗಿ 15 ವಿಶೇಷ ಪೊಲೀಸರ ತಂಡವನ್ನು ರಚಿಸಲಾಗಿದೆ.
Team Udayavani, Sep 15, 2021, 1:21 PM IST
ಹೈದರಾಬಾದ್: ಆರು ವರ್ಷದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಹಿಡಿದು ನಂತರ ಎನ್ ಕೌಂಟರ್ ಮಾಡಿ ಕೊಲ್ಲುತ್ತೇವೆ. ನಾವು ಖಂಡಿತವಾಗಿಯೂ ಆರೋಪಿಯನ್ನು ಬಂಧಿಸಿ, ನಂತರ ಎನ್ ಕೌಂಟರ್ ಮಾಡುತ್ತೇವೆ ಎಂದು ತೆಲಂಗಾಣ ಸಚಿವ ಮಲ್ಲ ರೆಡ್ಡಿ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ:ಭಾರತ:ಕಳೆದ 24 ಗಂಟೆಗಳಲ್ಲಿ 27,176 ಕೋವಿಡ್ ಪ್ರಕರಣ ಪತ್ತೆ, ಕೇರಳದಲ್ಲಿ ಅತೀ ಹೆಚ್ಚು ಪ್ರಕರಣ
ಅತ್ಯಾಚಾರ ಎಸಗಿದ ಆರೋಪಿಯನ್ನು ಎನ್ ಕೌಂಟರ್ ಮಾಡಿ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಹೇಳಿಕೆ ನೀಡಿದ್ದ ಬೆನ್ನಲ್ಲೇ ಕಾರ್ಮಿಕ ಸಚಿವ ಮಲ್ಲ ರೆಡ್ಡಿ ಕೂಡಾ ಈ ಪ್ರತಿಕ್ರಿಯೆ ನೀಡಿರುವುದಾಗಿ ವರದಿ ತಿಳಿಸಿದೆ.
ನಾನು ಅತ್ಯಾಚಾರಕ್ಕೆಳಗಾದ ಸಂತ್ರಸ್ತೆ ಬಾಲಕಿಯ ಮನೆಗೆ ಭೇಟಿ ನೀಡಿ, ಅವರಿಗೆ ಸಿಗಬೇಕಾದ ಪರಿಹಾರದ ವ್ಯವಸ್ಥೆ ಮಾಡುವುದಾಗಿ ಸುದ್ದಿಗಾರರ ಜತೆ ಮಾತನಾಡುತ್ತ ರೆಡ್ಡಿ ತಿಳಿಸಿದ್ದಾರೆ. ಸಂತ್ರಸ್ತೆ ಕುಟುಂಬದ ಸದಸ್ಯರಿಗೆ ದೂರವಾಣಿ ಕರೆ ಮಾಡದ ವಿಪಕ್ಷ ನಾಯಕರ ಟೀಕೆಗೆ ಉತ್ತರಿಸಿದ ಅವರು, ಎನ್ ಕೌಂಟರ್ ಕುರಿತ ಮಾತುತೆಯಿಂದ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಆರೋಪಿ ಎಲ್ಲಿದ್ದಾನೆ ಎಂಬ ಬಗ್ಗೆ ಮಾಹಿತಿ ಇಲ್ಲ ಎಂದು ವರದಿ ವಿವರಿಸಿದೆ.
ಪೊಲೀಸ್ ಮೂಲಗಳ ಪ್ರಾಥಮಿಕ ಮಾಹಿತಿ ಪ್ರಕಾರ, ಆರೋಪಿಯನ್ನು ಭುವನ್ ಗಿರಿ ಜಿಲ್ಲೆಯ ಯಾದಾದ್ರಿ ಗ್ರಾಮದಲ್ಲಿ ಬಂಧಿಸಲಾಗಗಿತ್ತು ಎಂದು ತಿಳಿಸಿದೆ. ಆದರೆ ಅತ್ಯಾಚಾರಗೈದ ಆರೋಪಿ ನಾಪತ್ತೆಯಾಗಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಲೆಮರೆಯಿಸಿಕೊಂಡಿರುವ ಆರೋಪಿ ಪತ್ತೆಗಾಗಿ 15 ವಿಶೇಷ ಪೊಲೀಸರ ತಂಡವನ್ನು ರಚಿಸಲಾಗಿದೆ. ಪೊಲೀಸರು ಪರಿಶೀಲಿಸಿದ ಸಿಸಿಟವಿ ಫೂಟೇಜ್ ಪ್ರಕಾರ, ಆರೋಪಿ ತಲೆಗೆ ಟೋಪಿ ಧರಿಸಿದ್ದು, ಮುಖಕ್ಕೆ ಮಾಸ್ಟ್ ಹಾಕಿಕೊಂಡು ಮತ್ತೊ ವ್ಯಕ್ತಿಯೊಂದಿಗೆ ಹೊರಟು ಹೋಗಿರುವುದು ದಾಖಲಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ