ಜ. 15: ಸೇನಾ ಶಕ್ತಿ ಪ್ರದರ್ಶನ: ಉದ್ಯಾನನಗರಿಯಲ್ಲಿ ಮೊದಲ ಬಾರಿಗೆ ಸೇನಾ ದಿನ ಆಚರಣೆ


Team Udayavani, Jan 11, 2023, 6:20 AM IST

ಜ. 15: ಸೇನಾ ಶಕ್ತಿ ಪ್ರದರ್ಶನ: ಉದ್ಯಾನನಗರಿಯಲ್ಲಿ ಮೊದಲ ಬಾರಿಗೆ ಸೇನಾ ದಿನ ಆಚರಣೆ

ಬೆಂಗಳೂರು: ದಕ್ಷಿಣ ಭಾರತದಲ್ಲಿ ನಡೆಯಲಿರುವ ಮೊತ್ತಮೊದಲ ಭಾರತೀಯ ಸೇನಾ ದಿನಾಚರಣೆಗೆ ಉದ್ಯಾನ ನಗರಿ ಸಜ್ಜಾಗಿದೆ. ರಾಷ್ಟ್ರ ರಾಜಧಾನಿ ದಿಲ್ಲಿಯಿಂದ ಹೊರಗಡೆ ಇದೇ ಪ್ರಥಮ ಬಾರಿಗೆ ನಡೆಯಲಿರುವ ಐತಿಹಾಸಿಕ ಕಾರ್ಯಕ್ರಮಕ್ಕೆ ನಗರದ ಮದ್ರಾಸ್‌ ಎಂಜಿನಿಯರಿಂಗ್‌ ಗ್ರೂಪ್‌ ಆ್ಯಂಡ್‌ ಸೆಂಟರ್‌ (ಎಂಇಜಿ) ಮೈದಾನ ಸಾಕ್ಷಿಯಾಗಲಿದೆ.

ಇಲ್ಲಿನ ಗೋವಿಂದಸ್ವಾಮಿ ಪರೇಡ್‌ ಮೈದಾನದಲ್ಲಿ ಪೂರ್ವಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದ್ದು, ಸೇನಾ ದಿನದ ಅಂಗವಾಗಿ ಜ. 15ರಂದು ದೇಶದ ಪ್ರಮುಖ ಎಂಟು ರೆಜಿಮೆಂಟ್‌ಗಳ ಆಕರ್ಷಕ ಪಥಸಂಚಲನ, ದೇಶೀಯ ನಿರ್ಮಿತ ರಕ್ಷಣ ಉಪಕರಣಗಳ ಪ್ರದರ್ಶನ, ಸೇನಾ ಸಾಮರ್ಥ್ಯ ಪ್ರದರ್ಶನ ನಡೆಯಲಿದೆ. ಅಂದು ಬೆಳಗ್ಗೆ ನಡೆಯುವ ಕಾರ್ಯಕ್ರಮದಲ್ಲಿ ಭೂಸೇನಾ ಮುಖ್ಯಸ್ಥ ಜ| ಮನೋಜ್‌ ಪಾಂಡೆ ಭಾಗವಹಿಸಲಿದ್ದಾರೆ ಎಂದು ಕೇರಳ ಆ್ಯಂಡ್‌ ಕರ್ನಾಟಕ ಸಬ್‌ ಏರಿಯಾದ ಜನರಲ್‌ ಆಫೀಸರ್‌ ಕಮಾಂಡಿಂಗ್‌ ಜ| ರವಿ ಮುರುಗನ್‌ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ವೈಮಾನಿಕ ಕಸರತ್ತು
ಪ್ರಮುಖ ಆಕರ್ಷಣೆ
ಧ್ರುವ ಮತ್ತು ರುದ್ರ ಹೆಲಿಕಾಪ್ಟರ್‌ಗಳಿಂದ ವೈಮಾನಿಕ ಕಸರತ್ತು ಪ್ರದರ್ಶನ, ಬಹುಹಂತದ ರಾಕೆಟ್‌ ಉಡ್ಡಯನ ವ್ಯವಸ್ಥೆ “ಪಿನಾಕಾ’, ಸ್ವಯಂಚಾಲಿತ ಕೆ-9 ವಜ್ರ ಗನ್‌, ಟಿ-90 ಟ್ಯಾಂಕ್‌ಗಳು, ಸ್ವಾತಿ ರೇಡಾರ್‌, 155 ಎಂಎಂ ಗನ್‌ಗಳು, ಬಿಎಂಪಿ- 2, ಭೀಷ್ಮ ಟ್ಯಾಂಕರ್‌, ತುಂಗುಸ್ಕಾ ವೈಮಾನಿಕ ರಕ್ಷಣ ವ್ಯವಸ್ಥೆ, ಸೇತುವೆ ನಿರ್ಮಾಣಕ್ಕೆ ಬಳಸುವ ಟ್ಯಾಂಕ್‌ಗಳನ್ನು ಪ್ರದರ್ಶಿಸಲಾಗುತ್ತದೆ.

ರಕ್ಷಣ ಸಚಿವರು ಭಾಗಿ
ಜ. 15ರಂದು ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಆರ್ಮಿ ಸರ್ವಿಸ್‌ ಸೆಂಟರ್‌ (ಎಸ್‌ಸಿ)ನಲ್ಲಿ ನಡೆಯಲಿರುವ ಮಿಲಿಟರಿ ಟ್ಯಾಟೂನಲ್ಲಿ ರಕ್ಷಣ ಸಚಿವ ರಾಜನಾಥ್‌ ಸಿಂಗ್‌ ಭಾಗವಹಿಸಲಿದ್ದಾರೆ. ಅಲ್ಲಿ ವಿನೂತನ ಕಾರ್ಯಕ್ರಮಗಳು ಜರಗಲಿವೆ.

11 ಸಾವಿರ ಜನ ವೀಕ್ಷಣೆ
3 4ದಿನಗಳಿಂದ ಎಂಇಜಿ ಮೈದಾನದಲ್ಲಿ ಸೇನಾ ದಿನಾಚರಣೆಯ ಪೂರ್ವಪ್ರದರ್ಶನ ನಿರಂತರವಾಗಿ ನಡೆಯುತ್ತಿದ್ದು, ವೀಕ್ಷಣೆಗೆ ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿತ್ತು. ಇದುವರೆಗೆ 11 ಸಾವಿರ ಜನ ಪ್ರದರ್ಶನ ವೀಕ್ಷಿಸಿದ್ದು, ಇದರಲ್ಲಿ ಮಕ್ಕಳೇ ಹೆಚ್ಚು ಎಂದು ಜ| ರವಿ ಮುರುಗನ್‌ ತಿಳಿಸಿದರು. ಬುಧವಾರದಿಂದ ಪಾಸ್‌ ಹೊಂದಿದವರಿಗೆ ಮಾತ್ರ ಅವಕಾಶ ಇರಲಿದೆ.

ಸಾಮಾನ್ಯವಾಗಿ ದಿಲ್ಲಿಯಲ್ಲಿ ಭಾಗವಹಿಸುತ್ತಿದ್ದೆವು. ಈಗ ರಾಜ್ಯದಲ್ಲಿ ಅದರಲ್ಲೂ ಬೆಂಗಳೂರಿನಲ್ಲೇ ನಮ್ಮವರೆದುರು ಪ್ರದರ್ಶನ ನೀಡಲಿರುವುದು ಸಹಜವಾಗಿ ಹೆಮ್ಮೆ ಮತ್ತು ಖುಷಿ ಕೊಡುತ್ತಿದೆ. ಹತ್ತು ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದೇನೆ.
– ಶಿವನಗೌಡ ಕೆಂಚನಗೌಡರ,
ಎಂಇಜಿ ಆ್ಯಂಡ್‌ ಸೆಂಟರ್‌ ಯೋಧ

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.