76 ಕ್ಷೇತ್ರಗಳೇ ನಿರ್ಣಾಯಕ: ತಲೆಬಿಸಿ ಹೆಚ್ಚಿಸಿದೆ ಗುಪ್ತಚರ ದಳದ ವರದಿ

ಕಣಕಣವೂ ಚಿಂತಾಕ್ರಾಂತ!

Team Udayavani, Jan 28, 2023, 7:15 AM IST

76 ಕ್ಷೇತ್ರಗಳೇ ನಿರ್ಣಾಯಕ: ತಲೆಬಿಸಿ ಹೆಚ್ಚಿಸಿದೆ ಗುಪ್ತಚರ ದಳದ ವರದಿ

ಮೂರೂ ಪಕ್ಷಗಳಿಗೆ ಚುನಾವಣೆಯಲ್ಲಿ ತಮ್ಮ ಗೆಲುವು ಖಚಿತ ಎಂಬ ಸ್ಥಿತಿ ಸದ್ಯ ಇಲ್ಲ. ಗುಪ್ತಚರ ವರದಿಯೂ ಇದನ್ನೇ ಹೇಳುತ್ತಿದೆ. ಹೀಗಾಗಿ ಫ‌ಲಿತಾಂಶ ಪ್ರಕಟವಾಗುವವರೆಗೆ ಮೂರೂ ಪಕ್ಷಗಳಿಗೆ ಪ್ರತೀ ಕಣವೂ ಚಿಂತೆಯೇ!

ಬೆಂಗಳೂರು: ಚುನಾವಣೆಯ ಸಂಬಂಧ ಗುಪ್ತದಳದ ಪ್ರಾಥಮಿಕ ವರದಿ ಮೂರೂ ಪಕ್ಷಗಳ ನಿದ್ದೆಗೆಡಿಸಿದೆ. ರಾಜ್ಯದ 224 ಕ್ಷೇತ್ರಗಳ ಪೈಕಿ ಸದ್ಯ ಬಿಜೆಪಿ 60, ಕಾಂಗ್ರೆಸ್‌ 58 ಹಾಗೂ ಜೆಡಿಎಸ್‌ 30 ಸ್ಥಾನ ಗೆಲ್ಲುವುದು ಖಚಿತ; ಉಳಿದ 76 ಕ್ಷೇತ್ರಗಳ ಪೈಕಿ ಅತೀ ಹೆಚ್ಚು ಗೆಲುವು ಸಾಧಿಸಿದವರದೇ ಸರಕಾರ ಎಂದು ಗುಪ್ತದಳದ ಪ್ರಾಥಮಿಕ ವರದಿ ತಿಳಿಸಿದೆ ಎಂದು ಮೂಲಗಳು ಹೇಳಿವೆ.

ಬಿಜೆಪಿಯತ್ತ ಕರಾವಳಿ- ಮಲೆನಾಡು, ಉತ್ತರ ಕರ್ನಾಟಕ; ಕಾಂಗ್ರೆಸ್‌ನತ್ತ ಹಳೇ ಮೈಸೂರು, ಕಲ್ಯಾಣ ಕರ್ನಾಟಕ; ಜೆಡಿಎಸ್‌ನತ್ತ ಹಳೇ ಮೈಸೂರು ಮತ್ತು ಮಧ್ಯ ಕರ್ನಾಟಕ, ಮುಂಬಯಿ ಕರ್ನಾಟಕದಲ್ಲಿ ಒಲವು ಇರುವ ಬಗ್ಗೆ ವರದಿ ಉಲ್ಲೇಖೀಸಿದೆ.

ಬಿಜೆಪಿಯ ಜನಸಂಕಲ್ಪ ಯಾತ್ರೆ, ಕಾಂಗ್ರೆಸ್‌ನ ಪ್ರಜಾಧ್ವನಿ, ಜೆಡಿಎಸ್‌ನ ಪಂಚರತ್ನ ಯಾತ್ರೆಗಳ ಅನಂತರ ಕೆಲವು ಕ್ಷೇತ್ರಗಳಲ್ಲಿ ರಾಜಕೀಯವಾಗಿ ಬದಲಾವಣೆ ಹಾಗೂ ಸ್ಥಳೀಯ ಹಂತದ ಪರಿಸ್ಥಿತಿ ಬದಲಾಗಿದೆ ಎನ್ನಲಾಗಿದೆ. ಇದೆಲ್ಲವೂ ನವೆಂಬರ್‌ನಿಂದ ಜ. 25ರ ವರೆಗಿನ ಗುಪ್ತಚರ ಮಾಹಿತಿ ಎಂದು ತಿಳಿದು ಬಂದಿದೆ.

ಈಗ ನೀಡಿರುವುದು ಪ್ರಾಥಮಿಕ ಹಂತದ ವರದಿಯಾಗಿದ್ದು, ಅಭ್ಯರ್ಥಿ ಗಳ ಪಟ್ಟಿ ಬಿಡುಗಡೆಯಾದ ಅನಂತರ 50ರಿಂದ 60 ಕ್ಷೇತ್ರಗಳ ಚಿತ್ರಣ ಬದಲಾಗುವ ಸಾಧ್ಯತೆಯಿದೆ. ಚುನಾವಣೆ ಸಮಯದ ಪಕ್ಷಾಂತರ ಯಾವುದೇ ಪಕ್ಷಕ್ಕೆ ದೊಡ್ಡ ಮಟ್ಟದಲ್ಲಿ ಲಾಭ ತರುವುದಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಅಭ್ಯರ್ಥಿಗಳ ಕೊರತೆ
ಮೂರೂ ಪಕ್ಷಗಳು ರಾಜ್ಯದ ಎಲ್ಲ 224 ಕ್ಷೇತ್ರಗಳಲ್ಲಿಯೂ ಸ್ಪರ್ಧಿಸುತ್ತೇವೆ ಎಂದು ಹೇಳುತ್ತಿವೆ. ಆದರೆ ಬಿಜೆಪಿ 30ರಿಂದ 40, ಕಾಂಗ್ರೆಸ್‌ 25ರಿಂದ 35 ಹಾಗೂ ಜೆಡಿಎಸ್‌ 45ರಿಂದ 50 ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿಗಳ ಕೊರತೆ ಎದುರಿಸುತ್ತಿದೆ ಎಂಬುದು ವರದಿಯಲ್ಲಿದೆ ಎನ್ನಲಾಗಿದೆ.

ಮ್ಯಾಜಿಕ್‌ ನಂಬರ್‌ ತಲುಪಲು ಪ್ರಯಾಸ
ಯಾತ್ರೆ, ಸಮಾವೇಶಗಳಲ್ಲಿ ನಮ್ಮದೇ ಅಧಿಕಾರ ಎಂದು ಮೂರೂ ಪಕ್ಷಗಳ ನಾಯಕರು ಹೇಳುತ್ತಿದ್ದಾರಾದರೂ ಯಾರಿಗೂ ಸ್ಪಷ್ಟ ಬಹುಮತದ ಭರವಸೆ ಇಲ್ಲ. ಈಗಿನ ಪ್ರಕಾರ ಮ್ಯಾಜಿಕ್‌ ನಂಬರ್‌ ತಲುಪಲು 3 ಪಕ್ಷಗಳೂ ಬೆವರು ಹರಿಸಬೇಕಾಗುತ್ತದೆ. ಬಿಜೆಪಿ- ಜೆಡಿಎಸ್‌ನಲ್ಲಿ ಟಿಕೆಟ್‌ ಹಂಚಿಕೆ ಸಮಸ್ಯೆಯಾಗುವ ಸಾಧ್ಯತೆ ಕಡಿಮೆ. ಆದರೆ ಕಾಂಗ್ರೆಸ್‌ಗೆ ಅದೇ ದೊಡ್ಡ ತಲೆನೋವಾಗಬಹುದು ಎಂಬ ವಾಖ್ಯಾನಗಳಿವೆ.

- ಎಸ್‌. ಲಕ್ಷ್ಮೀನಾರಾಯಣ

 

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.