ರಾಜ್ಯಾದ್ಯಂತ ಮೂವರು ಮಹಿಳೆಯರ ಸಹಿತ 81 ಕೈದಿಗಳ ಬಿಡುಗಡೆ
ಅಮೃತ ಮಹೋತ್ಸವ ಹಿನ್ನೆಲೆ
Team Udayavani, Aug 14, 2022, 9:24 PM IST
ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ರಾಜ್ಯದ 9 ಕೇಂದ್ರ ಕಾರಾಗೃಹಗಳಲ್ಲಿ ಅಲ್ಪಾವಧಿ ಶಿಕ್ಷಾ ಬಂಧಿಗಳಿಗಾಗಿರುವ ಮೂವರು ಮಹಿಳೆಯರು ಸೇರಿ 81 ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ.
ಸೋಮವಾರ ಜೈಲುಗಳಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಬಳಿಕ ಕೈದಿಗಳಿಗೆ ಬಿಡುಗಡೆ ಪ್ರಮಾಣ ಪತ್ರ ನೀಡಿ ಕಳುಹಿಸಲಾಗುತ್ತದೆ ಎಂದು ಕಾರಾಗೃಹ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು 14, ಬೆಳಗಾವಿ 3, ಬಳ್ಳಾರಿ 8, ವಿಜಯಪುರ ಇಬ್ಬರು ಮಹಿಳೆಯರು ಸೇರಿ 10, ಧಾರವಾಡ 6, ಕಲಬುರಗಿ 10, ಮೈಸೂರು 20, ಶಿವಮೊಗ್ಗ 9, ಶಿವಮೊಗ್ಗ ಮಹಿಳಾ ಕಾರಾಗೃಹ ಒಬ್ಬ ಮಹಿಳೆ ಒಟ್ಟು 81 ಮಂದಿಯನ್ನು ಬಿಡುಗಡೆ ಮಾಡಲಾಗುತ್ತದೆ.
75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತಮಹೋತ್ಸವ ಅಂಗವಾಗಿ ರಾಜ್ಯಪಾಲರ ಸೂಚನೆ ಮೇರೆಗೆ ವಿಶೇಷ ಆದ್ಯತೆ ಮೇರೆಗೆ ಅಲ್ಫಾವಧಿ (8-10 ವರ್ಷ) ಶಿಕ್ಷೆಗೊಳಗಾಗಿರುವ ಕೈದಿಗಳಲ್ಲಿ ಸನ್ನಡೆ ಹೊಂದಿರುವ ಕೈದಿಗಳನ್ನು ಆಯ್ದು ಬಿಡುಗಡೆ ಮಾಡಲಾಗುತ್ತಿದೆ ಎಂದು ಕಾರಾಗೃಹ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ