ನೇಮಕಾತಿ ಹಗರಣ: ಪಾರ್ಥ ಚಟರ್ಜಿ, ಅರ್ಪಿತಾಗೆ 86 ಯೋಧರು, 6 ಬೆಂಗಾವಲು ಪಡೆ ಭದ್ರತೆ
ಇಬ್ಬರನ್ನೂ ಕೋರ್ಟ್ ಹತ್ತು ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೊಪ್ಪಿಸಿತ್ತು.
Team Udayavani, Aug 2, 2022, 1:48 PM IST
ಕೋಲ್ಕತಾ: ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಟಿಎಂಸಿ ಮಾಜಿ ಸಚಿವ ಪಾರ್ಥ ಚಟರ್ಜಿ ಮತ್ತು ಆಪ್ತೆ ಅರ್ಪಿತಾ ಮುಖರ್ಜಿಯನ್ನು ಪ್ರತಿ 48 ಗಂಟೆಗಳಿಗೊಮ್ಮೆ ಆರೋಗ್ಯ ತಪಾಸಣೆ ನಡೆಸಬೇಕೆಂದು ಕೋರ್ಟ್ ಆದೇಶ ನೀಡಿದ್ದು, ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದ 6 ಬೆಂಗಾವಲು ಪಡೆ ವಾಹನ ಮತ್ತು 86 ಯೋಧರ ಬಿಗಿ ಭದ್ರತೆಯಲ್ಲಿ ಪಾರ್ಥ, ಅರ್ಪಿತಾಳನ್ನು ಇಎಸ್ ಐ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಸಾಗರ: ಅಬ್ಬರದ ಮಳೆ ಹಿನ್ನಲೆ; ತುಂಬಿ ಹರಿಯುತ್ತಿರುವ ಇರುವಕ್ಕಿ ಸೇತುವೆ
ಶಿಕ್ಷಕರ ನೇಮಕಾತಿ ಹಗರಣದಲ್ಲಿ ಇಬ್ಬರನ್ನೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇತ್ತೀಚೆಗೆ ಬಂಧಿಸಿದ್ದರು. ಮಂಗಳವಾರ (ಆಗಸ್ಟ್ 02) ಬೆಳಗ್ಗೆ ಪಾರ್ಥ ಮತ್ತು ಅರ್ಪಿತಾಳನ್ನು ಇಎಸ್ ಐ ಆಸ್ಪತ್ರೆಗೆ ಕರೆದೊಯ್ದು ಆರೋಗ್ಯ ತಪಾಸಣೆ ನಡೆಸಲಾಗಿದೆ ಎಂದು ವರದಿ ವಿವರಿಸಿದೆ.
ಪಾರ್ಥ ಮತ್ತು ಅರ್ಪಿತಾ ಸೇರಿದಂತೆ ಇಬ್ಬರನ್ನೂ ಕೋರ್ಟ್ ಹತ್ತು ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೊಪ್ಪಿಸಿತ್ತು. ಪಾರ್ಥ ಆಪ್ತೆ ಅರ್ಪಿತಾ ನಿವಾಸದಲ್ಲಿ ಸುಮಾರು 50 ಕೋಟಿ ರೂಪಾಯಿಯಷ್ಟು ನಗದು ಹಾಗೂ 5 ಕೆಜಿಗೂ ಅಧಿಕ ಚಿನ್ನವನ್ನು ಇ.ಡಿ ಅಧಿಕಾರಿಗಳು ವಶಪಡಿಸಿಕೊಂಡಿದ್ದರು.
ವಿಚಾರಣೆ ಪೂರ್ಣಗೊಂಡಿದ್ದು, ಬುಧವಾರ ಕೋರ್ಟ್ ಗೆ ವರದಿ ಸಲ್ಲಿಸಲಾಗುವುದು ಎಂದು ಇ.ಡಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಆರೋಪದ ಬಗ್ಗೆ ಪಾರ್ಥ ತನಗೇನೂ ಗೊತ್ತಿಲ್ಲ ಎಂದು ಹೇಳುತ್ತಿರುವುದಾಗಿ ಇ.ಡಿ ಅಧಿಕಾರಿಗಳು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ