ಉತ್ತರಪ್ರದೇಶ: ಕ್ರಿಶ್ಚಿಯನ್ ಧರ್ಮಕ್ಕೆ 400 ಮಂದಿ ಹಿಂದೂಗಳ ಬಲವಂತದ ಮತಾಂತರ, ಪ್ರಕರಣ ದಾಖಲು
ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು, ಆಧಾರ್ ಕಾರ್ಡ್ ನಲ್ಲಿ ಹೆಸರನ್ನು ಬದಲಾಯಿಸುವಂತೆ ಸೂಚಿಸಿದ್ದರು.
Team Udayavani, Oct 29, 2022, 1:22 PM IST
ಲಕ್ನೋ: ಕೋವಿಡ್ ಸಮಯದಲ್ಲಿ 400 ಜನರನ್ನು ಬಲವಂತವಾಗಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳಿಸಿದ ಆರೋಪದಲ್ಲಿ ಉತ್ತರಪ್ರದೇಶದ ಮೀರತ್ ನಲ್ಲಿ ಒಂಬತ್ತು ಜನರ ಮೇಲೆ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಅಜ್ಜ ಪಡೆದ ಪುಸ್ತಕವನ್ನು 84 ವರ್ಷದ ಬಳಿಕ ಲೈಬ್ರರಿಗೆ ಮರಳಿಸಿದ ಮೊಮ್ಮಗ.!
ತಮ್ಮನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುವಂತೆ ಆಮಿಷ ಒಡ್ಡಲಾಗಿದೆ ಎಂದು ಸಂತ್ರಸ್ಥರು ಹಿರಿಯ ಪೊಲೀಸ್ ವರಿಷ್ಠಾಧಿಕಾರಿಯವರನ್ನು ಭೇಟಿಯಾಗಿ ದೂರು ನೀಡಿದ್ದಾರೆ. ಈ ಘಟನೆ ಮೀರತ್ ನ ಮಂಗಟ್ ಪುರಂನ ಮಲಿನ್ ಗ್ರಾಮದಲ್ಲಿ ನಡೆದಿದೆ.
ಪೊಲೀಸರಿಗೆ ನೀಡಿರುವ ದೂರಿನಲ್ಲಿ, ಹಿಂದೂ ದೇವರು, ದೇವತೆಗಳ ಫೋಟೋಗಳನ್ನು ತೆಗೆದು ಹಾಕುವಂತೆ ನಮಗೆ ಒತ್ತಾಯ ಮಾಡಲಾಗಿತ್ತು. ಕೋವಿಡ್ ಸಮಯದಲ್ಲಿ ನಮ್ಮನ್ನು ಬಲವಂತಾಗಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸಲಾಗಿದೆ ಎಂದು ತಿಳಿಸಲಾಗಿದೆ.
ಮತಾಂತರಕ್ಕೊಳಗಾದ ವ್ಯಕ್ತಿಗಳು ಬಿಜೆಪಿ ನಾಯಕನ ಜೊತೆ ಬ್ರಹ್ಮಪುತ್ರಿ ಪೊಲೀಸ್ ಠಾಣೆಗೆ ಆಗಮಿಸಿ, ನಮಗೆ ಹಣ ಮತ್ತು ಆಹಾರದ ಆಮಿಷವೊಡ್ಡಿ ಮತಾಂತರಗೊಳಿಸಿರುವುದಾಗಿ ಆರೋಪಿಸಿದ್ದಾರೆ.
ಹಿಂದೂ ಧರ್ಮದಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು, ಆಧಾರ್ ಕಾರ್ಡ್ ನಲ್ಲಿ ಹೆಸರನ್ನು ಬದಲಾಯಿಸುವಂತೆ ಸೂಚಿಸಿದ್ದರು. ದೀಪಾವಳಿ ದಿನದಂದು ನಾವು ಪೂಜೆ ಮಾಡುತ್ತಿದ್ದಾಗ ಆರೋಪಿಗಳು ಏಕಾಏಕಿ ನಮ್ಮ ಮನೆಗಳಿಗೆ ನುಗ್ಗಿ ಹಿಂದೂ ದೇವರ ಫೋಟೋಗಳನ್ನು ಒಡೆದು ಹಾಕಿದ್ದರು.
ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ನಂತರ ಮತ್ತೆ ಯಾವಾಗ ಹಿಂದೂ ಧರ್ಮಕ್ಕೆ ಪರಿವರ್ತನೆಗೊಂಡಿದ್ದೀರಿ, ಯಾಕಾಗಿ ಹಿಂದೂ ಹಬ್ಬವನ್ನು ಆಚರಿಸುತ್ತಿದ್ದೀರಿ ಎಂದು ಪ್ರಶ್ನಿಸಿ, ಜೀವ ಬೆದರಿಕೆ ಒಡ್ಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಎಫ್ ಐಆರ್ ನಲ್ಲಿ ಆರೋಪಿಗಳಾದ ಛಾಬ್ಲಿ ಅಲಿಯಾಸ್ ಶಿವ, ಬಿನ್ವಾ, ಅನಿಲ್, ಸರ್ದಾರ್, ನಿಕ್ಕೂ, ಬಸಂತ್, ಪ್ರೇಮ್, ಟಿಟ್ಲಿ ಮತ್ತು ರಾಣಿ ಹೆಸರನ್ನು ಉಲ್ಲೇಖಿಸಲಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ