ಗೋವಾದಲ್ಲಿ ಶೇ 90 ರಷ್ಟು ಕೋವಿಡ್ 2ನೇ ಡೋಸ್ ವ್ಯಾಕ್ಸಿನೇಶನ್ ಪೂರ್ಣ: ಪ್ರಮೋದ್ ಸಾವಂತ್
Team Udayavani, Nov 23, 2021, 2:10 PM IST
ಪಣಜಿ: ಕೊರೊನಾ ಮಹಾಮಾರಿಯ ಸಂದರ್ಭವು ಎಲ್ಲರನ್ನೂ ಪರೀಕ್ಷೆ ಮಾಡಿತ್ತು. ಪ್ರಧಾನಿಗಳಿಗೂ ಕಠಿಣ ಸಂದರ್ಭ ಬಂದಿತ್ತು. ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ಕೊರೊನಾ ಸಂದರ್ಭದಲ್ಲಿ ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಿ, ಇಂತಹ ಸಂಕಷ್ಟ ಪರಿಸ್ಥಿತಿಯನ್ನು ಗೆದ್ದಿದ್ದಾರೆ ಎಂದು ಹಿಮಾಚಲ ಪ್ರದೇಶದ ರಾಜ್ಯಪಾಲ ರಾಜೇಂದ್ರ ಅರ್ಲೆಕರ್ ನುಡಿದರು.
ಗೋವಾದ ಪಾಳಿಯ ಶ್ರೀ ನವದುರ್ಗಾ ದೇವಸ್ಥಾನದ ವತಿಯಿಂದ ಆಯೋಜಿಸಿದ್ದ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಗೋವಾದಲ್ಲಿ ಶೇ 90 ರಷ್ಟು ಜನರಿಗೆ ಕೋವಿಡ್ ಎರಡನೇಯ ಡೋಸ್ ವ್ಯಾಕ್ಸಿನೇಶನ್ ಪೂರ್ಣಗೊಂಡಿದೆ. ಇನ್ನುಳಿದ ಶೇ 10 ರಷ್ಟು ಜನೆರಿಗೆ ಲಸಿಕೆ ನೀಡಲು ಜನತೆ ಸಹಕರಿಸಬೇಕು. ಗೋವಾ ರಾಜ್ಯದ ಸಂಪೂರ್ಣ ಜನತೆ ಶೀಘ್ರವಾಗಿ ಎರಡೂ ಡೋಸ್ ವ್ಯಾಕ್ಸಿನ್ ಪಡೆದುಕೊಳ್ಳುವ ಮೂಲಕ ದೇಶದಲ್ಲಿಯೇ ಸಂಪೂರ್ಣ ಲಸಿಕೆ ಪಡೆದ ಪ್ರಪ್ರಥಮ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಬೇಕು ಎಂದರು.
ಇದನ್ನೂ ಓದಿ:ಅಪಾರ ಬೆಂಬಲಿಗರೊಂದಿಗೆ ಲಖನ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ
ರಾಜ್ಯಪಾಲ ಅರ್ಲೆಕರ್ ಅವರು ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಪ್ರಮೋದ ಸಾವಂತ್ ದಂಪತಿಗಳನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಹಿರಿಯ ನಾಗರಿಕ ವಿಷ್ಣು ಭಾವೆ, ಶುಭದಾ ಭಾವೆ, ದೇವಸ್ಥಾನ ಸಮೀತಿಯ ಅಧ್ಯಕ್ಷ ವಿಷ್ಣು ಗಾವಸ್, ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರ ಪತ್ನಿ ಸುಲಕ್ಷಣಾ ಸಾವಂತ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ