ಪತ್ನಿ ಹೊಡೆಯುತ್ತಾಳೆಂದು ಪ್ರಧಾನಿಗೇ ದೂರು ನೀಡಿದ ಬೆಂಗಳೂರಿನ ಪತಿರಾಯ
ಇದು ನೀವು ಹೆಚ್ಚಿಸುವ ನಾರಿ ಶಕ್ತಿ? ನೊಂದ ಪತಿಯ ಪ್ರಶ್ನೆ
Team Udayavani, Nov 2, 2022, 9:45 PM IST
ಬೆಂಗಳೂರು : ಹೆಂಡತಿ ಹೊಡೆಯುತ್ತಿದ್ದಾಳೆ ಎಂದು ಪತಿಯೊಬ್ಬ ಪ್ರಧಾನಿ ನರೇಂದ್ರ ಮೋದಿ ಸೇರಿ ಕೇಂದ್ರ ಕಾನೂನು ಸಚಿವರಿಗೇ ದೂರು ನೀಡಿದ ಸುದ್ದಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಯದುನಂದನ್ ಆಚಾರ್ಯ ಎನ್ನುವ ಖಾತೆಯಿಂದ ”ಯಾರಾದರೂ ನನಗೆ ಸಹಾಯ ಮಾಡುವರೇ? ಅಥವಾ ಇದು ಸಂಭವಿಸಿದಾಗ ಯಾರಾದರೂ ನನಗೆ ಸಹಾಯ ಮಾಡಿದ್ದಾರೆಯೇ? ಇಲ್ಲ, ಏಕೆಂದರೆ ನಾನು ಒಬ್ಬ ಗಂಡಸು! ನನ್ನ ಹೆಂಡತಿ ನನ್ನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದಳು, ಇದು ನೀವು ಹೆಚ್ಚಿಸುವ ನಾರಿ ಶಕ್ತಿಯೇ? ಇದಕ್ಕಾಗಿ ನಾನು ಅವಳ ಮೇಲೆ ಕೌಟುಂಬಿಕ ದೌರ್ಜನ್ಯ ಪ್ರಕರಣವನ್ನು ಹಾಕಬಹುದೇ? ಇಲ್ಲ!” ಎಂದು ಗಾಯಗೊಂಡಿರುವ ಫೋಟೋ ಸಮೇತ ಟ್ವೀಟ್ ಮಾಡಿ ಪ್ರಧಾನಿ ನರೇಂದ್ರ ಮೋದಿ, ಕಾನೂನು ಸಚಿವ ಕಿರಣ್ ರಿಜಿಜು, ಬೆಂಗಳೂರು ಪೊಲೀಸ್ ಆಯುಕ್ತರನ್ನು ಟ್ಯಾಗ್ ಮಾಡಿದ್ದಾರೆ.
ಪೊಲೀಸರು ಟ್ವೀಟ್ ಗೆ ಪ್ರತಿಕ್ರಿಯಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಯದುನಂದನ್ ಆಚಾರ್ಯ ಇಂಜಿನಿಯರ್, ಮಾಜಿ-ಬೈಕರ್, ಬಹು ಪ್ರಕರಣಗಳಲ್ಲಿ ಸುಳ್ಳು ಆರೋಪಿಯಾಗಿದ್ದೇನೆ , ಭಾರತದಲ್ಲಿ ಲಿಂಗ ಪಕ್ಷಪಾತ ಕಾನೂನುಗಳ ವಿರುದ್ಧ ಹೋರಾಟ ಮಾಡುತ್ತಿರುವುದಾಗಿ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ