ಸುಟ್ಟು ಕರಕಲಾದ ಲಾರಿ
Team Udayavani, Mar 24, 2023, 5:24 AM IST
ಮಡಿಕೇರಿ: ಅನುಪಯುಕ್ತ ರಾಸಾಯನಿಕದ ಸರಕುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಅಗ್ನಿ ಆಕಸ್ಮಿಕದಿಂದ ಸುಟ್ಟು ಕರಕಲಾಗಿರುವ ಘಟನೆ ಕುಶಾಲನಗರದಲ್ಲಿ ಸಂಭವಿಸಿದೆ.
ಕೊಯಮತ್ತೂರಿನಿಂದ ಮಂಗಳೂರಿನ ಬೈಕಂಪಾಡಿಗೆ ತೆರಳುತ್ತಿದ್ದ ಲಾರಿ ಬುಧವಾರ ತಡರಾತ್ರಿ ಬೆಂಕಿಗೆ ಆಹುತಿಯಾಗಿದೆ. ಲಾರಿಯ ಹಿಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಚಾಲಕ ತತ್ಕ್ಷಣ ಕುಶಾಲನಗರದ ಹಿರಿಯ ಪ್ರಾಥಮಿಕ ಶಾಲೆಯ ಮುಂಭಾಗ ರಸ್ತೆ ಬದಿಯಲ್ಲಿ ನಿಲ್ಲಿಸಿ ಲಾರಿಯಲ್ಲಿದ್ದ ದಾಖಲೆಗಳನ್ನು ತನ್ನೊಂದಿಗೆ ತೆಗೆದುಕೊಂಡು ಹೊರಬಂದು ಸ್ಥಳೀಯರಿಗೆ ಮಾಹಿತಿ ನೀಡಿದರು.
ಸ್ಥಳೀಯರು ತತ್ಕ್ಷಣ ಪೊಲೀಸ್ ಠಾಣೆ ಮತ್ತು ಅಗ್ನಿಶಾಮಕ ತಂಡಕ್ಕೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ತಂಡ ಬೆಂಕಿ ನಂದಿಸಲು ಹರಸಾಹಸ ಪಟ್ಟರೂ ಬೆಂಕಿ ರಾಸಾಯನಿಕ ವಸ್ತುಗಳಿಗೆ ತಗಲಿ ಅಪಾಯಕಾರಿ ಪರಿಸ್ಥಿತಿ ಸೃಷ್ಟಿಯಾಯಿತು.
ಸ್ಥಳೀಯ ಅಧಿಕಾರಿಗಳ ಕೋರಿಕೆ ಮೇರೆಗೆ ಪಿರಿಯಾಪಟ್ಟಣ ಭಾಗದಿಂದ ಆಗಮಿಸಿದ ಅಗ್ನಿಶಾಮಕ ಸಿಬಂದಿ ಆಗಮಿಸಿ ಬೆಂಕಿ ಶಮನಗೊಳಿಸಲು ಪ್ರಯತ್ನಿಸಿದರು. ಮುಂಜಾನೆ 5 ಗಂಟೆಯ ವರೆಗೆ 2 ಅಗ್ನಿಶಾಮಕ ವಾಹನಗಳ ಸಹಕಾರದಿಂದ ಸಿಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಪೊಲೀಸರು ಸ್ಥಳದಲ್ಲಿದ್ದು ಹೆದ್ದಾರಿ ವಾಹನ ಸಂಚಾರ ವ್ಯವಸ್ಥೆಗೆ ಅನುವು ಮಾಡಿಕೊಟ್ಟರು.
ಕುಶಾಲನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ