ರಾವಲ್ಪಿಂಡಿಯಲ್ಲಿ ಶತಮಾನ ಹಳೆಯ ದೇಗುಲ ಧ್ವಂಸಗೊಳಿಸಿದ ಕಿಡಿಗೇಡಿಗಳು
Team Udayavani, Mar 29, 2021, 7:45 PM IST
ಇಸ್ಲಾಮಾಬಾದ್: ಭಾರತದಲ್ಲಿ ಅಲ್ಪಸಂಖ್ಯಾತರ ಹಕ್ಕುಗಳನ್ನು ದಮನಿಸಲಾಗುತ್ತದೆ ಎಂದು ಹುಯಿಲೆಬ್ಬಿಸುವ ಪಾಕಿಸ್ತಾನದಲ್ಲಿಯೇ ದೇಗುಲ ಧ್ವಂಸಗೊಳಿಸಿದ ಘಟನೆ ನಡೆದಿದೆ.
ರಾವಲ್ಪಿಂಡಿಯ ಪುರಾನಾ ಕಿಲಾ (ಹಳೆಯ ಕೋಟೆ) ಪ್ರದೇಶದಲ್ಲಿ 100 ವರ್ಷಗಳಷ್ಟು ಹಳೆಯದಾಗಿರುವ ದೇಗುಲವನ್ನು ಪುನರ್ ನಿರ್ಮಿಸುವ ಕೆಲಸ ನಡೆಯುತ್ತಿತ್ತು. ಶನಿವಾರ ರಾತ್ರಿ 7.30ರ ಸುಮಾರಿಗೆ 10-15 ಮಂದಿ ಇದ್ದ ತಂಡ ದೇಗುಲಕ್ಕೆ ನುಗ್ಗಿತು. ಮುಖ್ಯ ದ್ವಾರ, ಮೊದಲ ಅಂತಸ್ತಿನಲ್ಲಿರುವ ಬಾಗಿಲನ್ನೂ ಪುಂಡರು ಧ್ವಂಸ ಮಾಡಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಪಾಕಿಸ್ತಾನದ ಉತ್ತರ ವಲಯದ ನಿರ್ವಸಿತರ ಆಸ್ತಿಯ ಟ್ರಸ್ಟ್ ಮಂಡಳಿ (ಇಟಿಪಿಬಿ)ಯ ಭದ್ರತಾ ಅಧಿಕಾರಿ ಸಯ್ಯದ್ ರಾಝಾ ಅಬ್ಟಾಸ್ ಝೈದಿ ಬನ್ನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಾ.24ರಂದು ದೇಗುಲದ ಜಮೀನನ್ನು ಹಲವರು ಒತ್ತುವರಿ ಮಾಡಿಕೊಂಡಿದ್ದರು. ಅದನ್ನು ತೆರವುಗೊಳಿಸಲಾಗಿತ್ತು ಎಂದು ಅವರು ದೂರಿನಲ್ಲಿ ಉಲ್ಲೇಖೀಸಿದ್ದಾರೆ. ನಿರ್ಮಾಣ ಕಾರ್ಯ ಪ್ರಗತಿಯಲ್ಲಿ ಇರುವುದರಿಂದ ದೇವರ ಮೂರ್ತಿಯನ್ನು ಅಲ್ಲಿ ಪ್ರತಿಷ್ಠಾಪಿಸಲಾಗಿರಲಿಲ್ಲ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನೂ ನಡೆಸಲಾಗುತ್ತಿರಲಿಲ್ಲ ಎಂದಿದ್ದಾರೆ. ದೇಗುಲದ ಆಡಳಿತಾಧಿಕಾರಿ ಓಂ ಪ್ರಕಾಶ್ ಕೂಡ ಘಟನೆಯನ್ನು ಖಚಿತಪಡಿಸಿದ್ದಾರೆ.
ಇದನ್ನೂ ಓದಿ :ಲಾಕ್ ಡೌನ್ ಇಲ್ಲ, ಆದ್ರೆ 15 ದಿನ ಸತ್ಯಾಗ್ರಹ, ಚಳವಳಿ ಮಾಡುವಂತಿಲ್ಲ : ಸಿಎಂ ಆದೇಶ
2020ರ ಡಿಸೆಂಬರ್ನಲ್ಲಿ ಖೈಬರ್ ಪಕ್ತಾಖ್ವಾ ಪ್ರಾಂತ್ಯದ ಕರಕ್ ಜಿಲ್ಲೆಯ ಟೆರಿ ಗ್ರಾಮದಲ್ಲಿ ದೇಗುಲ ಧ್ವಂಸ ಮಾಡಲಾಗಿತ್ತು. ಭಾರತ ಸರ್ಕಾರದ ಪ್ರತಿಭಟನೆಯ ಬಳಿಕ 100ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?