ಸಮುದ್ರ ಪಾಲಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ
Team Udayavani, Mar 10, 2023, 5:30 AM IST
ಕಾಪು: ಉಳಿಯಾರಗೋಳಿ ಸಮುದ್ರ ಕಿನಾರೆಯಲ್ಲಿ ಟ್ಯೂಬ್ ಧರಿಸಿ ಮೀನುಗಾರಿಕೆಗೆ ತೆರಳಿದ್ದ ವೇಳೆ ಸಮುದ್ರ ಪಾಲಾಗಿದ್ದ ಯಾರ್ಡ್ ಬಳಿ ನಿವಾಸಿ ಸಂತೋಷ್ (45) ಅವರ ಮೃತದೇಹವು ಗುರುವಾರ ಮಧ್ಯಾಹ್ನ ಪೊಲಿಪು ಬಳಿ ಸಮುದ್ರ ಕಿನಾರೆಯಲ್ಲಿ ಪತ್ತೆಯಾಗಿದೆ.
ಬುಧವಾರ ಸಂಜೆ ಟ್ಯೂಬ್ ಮೂಲಕ ಮೀನುಗಾರಿಕೆಗೆ ತೆರಳಿದ್ದ ಸಂತೋಷ್ ಬಲೆ ಬೀಸಿ ವಾಪಸಾಗುತ್ತಿದ್ದ ವೇಳೆ ತೆರೆಯ ಅಬ್ಬರಕ್ಕೆ ಸಿಲುಕಿ ಸಮುದ್ರದಲ್ಲಿ ಮುಳುಗಿದ್ದರು. ಸ್ಥಳೀಯರು ಗಮನಿಸಿ ಕೂಡಲೇ ಅವರನ್ನು ರಕ್ಷಿಸಲು ಪ್ರಯತ್ನಿಸಿದ್ದರಾದರೂ, ರಕ್ಷಿಸಲು ಸಾಧ್ಯವಾಗಿರಲಿಲ್ಲ. ಮುಳುಗು ತಜ¡ ಈಶ್ವರ್ ಮಲ್ಪೆ ಸೇರಿದಂತೆ ರಕ್ಷಣ ತಂಡವು ರಾತ್ರಿಯವರೆಗೂ ಸಂತೋಷ್ ಅವರ ಪತ್ತೆ ಕಾರ್ಯಾಚರಣೆ ನಡೆಸಿದ್ದರು.
ಗುರುವಾರ ಮಧ್ಯಾಹ್ನ ಪೊಲಿಪು ಬಳಿಯ ಸಮುದ್ರ ತೀರದಲ್ಲಿ ಶವ ತೇಲಿಕೊಂಡು ಬಂದಿದ್ದು, ಸ್ಥಳೀಯ ಮೀನುಗಾರ ರಿತೇಶ್ ಅವರು ಮೃತದೇಹವನ್ನು ಮೇಲಕ್ಕೆತ್ತಿ ತಂದು ಪರಿಶೀಲಿಸಿದಾಗ ಅದು ಸಂತೋಷ್ ಅವರ ಮೃತದೇಹವೆಂದು ಗುರುತಿಸಲಾಯಿತು. ಬಳಿಕ ಸೂರಿ ಶೆಟ್ಟಿ ನೇತೃತೃದಲ್ಲಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್