
ಪಾಳುಬಿದ್ದ ಕಟ್ಟಡದಲ್ಲಿ ಶವ ಪತ್ತೆ
Team Udayavani, Apr 2, 2023, 5:28 AM IST

ಉಡುಪಿ: ಕಲ್ಸಂಕದ ಬಳಿಯ ಪಾಳುಬಿದ್ದ ಕಟ್ಟಡದಲ್ಲಿ ಅಪರಿಚಿತ ಯುವಕನ ಶವ ಕೊಳೆತ ಸ್ಥಿತಿಯಲ್ಲಿ ಶನಿವಾರ ಪತ್ತೆಯಾಗಿದೆ.
ಶವವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದೆ. ವಾರಸುದಾರರು ನಗರ ಪೋಲಿಸ್ ಠಾಣೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ. ಘಟನ ಸ್ಥಳದಲ್ಲಿದ್ದು ಎಸ್ಐ ಮಹೇಶ್ ಟಿ.ಎಂ., ಹೆಡ್ ಕಾನ್ಸ್ಟೆಬಲ್ ಸುಷ್ಮಾ ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು, ಸುನೀಲ್ ಬೈಲಕೆರೆಯವರು ಶವವನ್ನು ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಇಲಾಖೆಗೆ ಸಹಕರಿಸಿದರು.
ಈ ಕಟ್ಟಡದಲ್ಲಿ ಪತ್ತೆಯಾಗಿರುವ ಶವಗಳ ಸಂಖ್ಯೆ ಒಟ್ಟು 6ಕ್ಕೇರಿದೆ. ವಾರದ ಹಿಂದೆಯೂ ಇದೇ ಕಟ್ಟಡದಲ್ಲಿ ಶವವೊಂದು ಪತ್ತೆಯಾಗಿತ್ತು. ಅಪರಿಚಿತರು ಈ ಕಟ್ಟಡಕ್ಕೆ ಒಳನುಸುಳದಂತೆ ಕಟ್ಟಡಕ್ಕೆ ಸಂಬಂಧಪಟ್ಟವರು ಕಾವಲುಗಾರರನ್ನು ನೇಮಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
