ಕಾಲುಸಂಕ ಇನ್ನೂ ಸಮಸ್ಯೆಗಳ ಅಂಕ


Team Udayavani, Jun 9, 2023, 5:42 AM IST

paala

ಉಡುಪಿ: ಕರಾವಳಿಯ ಉಭಯ ಜಿಲ್ಲೆಗಳ ಗ್ರಾಮೀಣ ಭಾಗದ ಜನರು, ವಿಶೇಷವಾಗಿ ಶಾಲಾ ವಿದ್ಯಾರ್ಥಿಗಳ ಸಂಚಾರಕ್ಕೆ ಅಪಾಯ ಉಂಟು ಮಾಡುವ ಕಾಲುಸಂಕಗಳ ದುರಸ್ತಿ, ಹೊಸ ಸಂಕ ನಿರ್ಮಾಣ ಇನ್ನೂ ತೃಪ್ತಿಕರವಾಗಿ ಆಗಿಲ್ಲ. ಈ ಸಂಬಂಧ ಅಗತ್ಯವಿರುವ ಕಾಲು ಸಂಕಗಳ ವಿವರಗಳು ಜಿ.ಪಂ.ಗೆ ಸಲ್ಲಿಕೆಯಾಗಿ ಮತ್ತೂಂದು ಮಳೆಗಾಲ ಬಂದರೂ ಅಪಾಯದ ಸ್ಥಿತಿ ಹಾಗೆಯೇ ಮುಂದುವರಿದಿರುವುದು ಆತಂಕಕ್ಕೆ ಕಾರಣವಾಗಿದೆ.

2022ರ ಆ. 8ರಂದು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಾಲ್ತೋಡು  ಗ್ರಾ.ಪಂ. ವ್ಯಾಪ್ತಿಯಲ್ಲಿ 2ನೇ ತರಗತಿಯ ಮಗುವೊಂದು ಕಾಲುಸಂಕದಿಂದ ಕೆಳಗೆ ಬಿದ್ದು ನೀರು ಪಾಲಾಗಿತ್ತು. ಇದಾದ ಬಳಿಕ ದಕ್ಷಿಣ ಕನ್ನಡ, ಉಡುಪಿ ಜಿಲ್ಲಾಡಳಿತಗಳು ಎಚ್ಚೆತ್ತುಕೊಂಡಿದ್ದವು. ಅಗತ್ಯ ಇರುವ ಕಡೆಗಳಲ್ಲಿ ಹೊಸ ಕಾಲುಸಂಕ ನಿರ್ಮಾಣ ಹಾಗೂ ತುರ್ತು ದುರಸ್ತಿ ಮಾಡಬೇಕಾದ ಕಾಲು ಸಂಕ ಗಳು ಮತ್ತು ವಿದ್ಯಾರ್ಥಿಗಳು ನಿತ್ಯ ಸಂಚಾರ ಮಾಡುವ ಕಾಲುಸಂಕಗಳ ಪಟ್ಟಿಯನ್ನು ಸಿದ್ಧಪಡಿ ಸಲು ಎಲ್ಲ ಗ್ರಾ.ಪಂ.ಗಳ ಪಿಡಿಒಗಳಿಗೆ ಸೂಚನೆ ನೀಡಲಾಗಿತ್ತು. ಅದರಂತೆ ಪಿಡಿಒಗಳು ಪಟ್ಟಿ ಸಿದ್ಧಪಡಿಸಿ ಜಿ.ಪಂ.ಗೆ ಸಲ್ಲಿಸಿದ್ದರು. ನರೇಗಾ ದಡಿ ಯಲ್ಲಿ ಕಾಲುಸಂಕ ನಿರ್ಮಾಣಕ್ಕೆ ಸಿದ್ಧತೆ ಮಾಡಿ ಕೊಳ್ಳಲಾಗಿತ್ತು. ಆದರೂ ನಿರೀಕ್ಷಿತ ಪ್ರಮಾಣದಲ್ಲಿ ಹೊಸ ಕಾಲುಸಂಕಗಳ ನಿರ್ಮಾಣವಾಗಿಲ್ಲ.

ದ.ಕ.ದ 338 ಕಾಲುಸಂಕಗಳಲ್ಲಿ 55 ಅಪಾಯ ಕಾರಿಯಾಗಿದ್ದು, ದುರಸ್ತಿ ಆಗಿದೆ. ಆದರೆ ಹೊಸ ಕಾಲುಸಂಕ ನಿರ್ಮಾಣ ಆಗಿಲ್ಲ. ಉಡುಪಿ ಜಿಲ್ಲೆಯಲ್ಲಿ 567 ಹೊಸ ಕಾಲುಸಂಕ ನಿರ್ಮಾಣವಾಗಬೇಕಿತ್ತು. ಯಾವುದೂ ಪೂರ್ಣವಾಗಿಲ್ಲ. ನರೇಗಾ ದಡಿ ಕಾಮಗಾರಿ ನಡೆಯುವುದರಿಂದ ಪರಿಕರ ಗಳಿಗೆ ಅನುದಾನ ತತ್‌ಕ್ಷಣ ಬಾರದೆ ಕಾಲುಸಂಕಗಳ ನಿರ್ಮಾಣ ವಿಳಂಬವಾಗಿದೆ.

ಆದರೆ 800 ಕಾಲುಸಂಕಗಳನ್ನು ದುರಸ್ತಿ ಗೊಳಿಸಿ ಸುಸ್ಥಿತಿಗೆ ತರಲಾಗಿದೆ ಎಂದು ಜಿ.ಪಂ. ಮೂಲಗಳು ತಿಳಿಸಿವೆ.
ಉಡುಪಿ ಜಿಲ್ಲೆಯಲ್ಲಿ 8,220 ಕುಟುಂಬಗಳು ಕಾಲುಸಂಕ ಬಳಸುತ್ತಿವೆ. ಈ ಪೈಕಿ ಅಂದಾಜು 5,108 ವಿದ್ಯಾರ್ಥಿಗಳು. ಈಗ 1ನೇ ತರಗತಿಗೆ ಹೊಸದಾಗಿ ಸೇರ್ಪಡೆಯಾಗಿರುವ ಮಕ್ಕಳು ಇರುವುದರಿಂದ ವಿದ್ಯಾರ್ಥಿಗಳ ಸಂಖ್ಯೆ ಸ್ವಲ್ಪ ಹೆಚ್ಚಿರಬಹುದು. ದ.ಕ.ದಲ್ಲಿ ಅಪಯಾಕಾರಿ 55 ಕಾಲು ಸಂಕಗಳಲ್ಲಿ 3,136 ವಿದ್ಯಾರ್ಥಿಗಳು ಸಂಚಾರ ಮಾಡುತ್ತಿರುವ ಬಗ್ಗೆ ಈ ಹಿಂದೆ ಗ್ರಾ.ಪಂ.ಗಳಿಂದ ವರದಿ ಸಲ್ಲಿಸಲಾಗಿತ್ತು. ಈ ಸಂಖ್ಯೆ ಈ ವರ್ಷ ಸ್ವಲ್ಪ ಅಧಿಕವಾಗಿರುವ ಸಾಧ್ಯತೆಯಿದೆ.ಚೆಕ್‌ಡ್ಯಾಮ್‌ ಸ್ಥಿತಿ ಹೇಳತೀರದು

ಉಭಯ ಜಿಲ್ಲೆಯ ಕೆಲವು ಕಿಂಡಿ
ಅಣೆಕಟ್ಟುಗಳ ಪರಿಸ್ಥಿತಿ ಹೇಳ ತೀರದಾಗಿದೆ. ಮಳೆಗಾಲ ಆರಂಭವಾ ಗುತ್ತಿದ್ದಂತೆ ಕಿಂಡಿ ಅಣೆಕಟ್ಟುಗಳ ಹಲಗೆ ತೆಗೆದು ನೀರು ಸರಾಗವಾಗಿ ಹೋಗಲು ಅವಕಾಶ ಮಾಡಿಕೊಡಬೇಕು. ಆದರೆ ಬಹುಪಾಲು ಕಿಂಡಿ ಅಣೆಕಟ್ಟುಗಳಿಗೆ ಸರಿಯಾಗಿ ಹಲಗೆ ಹಾಕಿ, ಮಣ್ಣು ತುಂಬಿಸಿದೆ ಇರುವುದರಿಂದ ನೀರು ಸಂಗ್ರಹ ಸರಿಯಾಗಿ ಆಗಿಲ್ಲ. ಇನ್ನು ಕಿಂಡಿ ಅಣೆಕಟ್ಟುಗಳ ಮೇಲೆ ಸಂಚಾರಕ್ಕೆ ಕೆಲವು ಕಡೆ ವ್ಯವಸ್ಥೆ ಮಾಡಲಾಗಿದೆ. ಆ ದಾರಿಗಳು ಅಪಾಯಕಾರಿಯಾಗಿವೆ. ಹಲವು ಕಿಂಡಿ ಅಣೆಕಟ್ಟಿಗೆ ಕಟ್ಟಿರುವ ಸುರಕ್ಷೆಯ ಬೇಲಿಗಳು ಮುರಿದಿವೆ. ಮಳೆಗಾಲದಲ್ಲಿ ಗ್ರಾಮಸ್ಥರು ಚೆಕ್‌ಡ್ಯಾಮ್‌ಗಳ ಮೇಲೆ ನಡೆಯಲಾಗದ ಸ್ಥಿತಿ ನಿರ್ಮಾಣವಾಗಿದೆ.
ಉಭಯ ಜಿಲ್ಲೆಯ ಜಿಲ್ಲಾಡಳಿತ ಗಳು ಈ ಬಗ್ಗೆ ಹೆಚ್ಚಿನ ಅಮನ ಹರಿಸುವ ಅಗತ್ಯವಿದೆ.

ಶಾಲೆಗಳಿಗೆ ಸೂಚನೆ
ಕಾಲುಸಂಕಗಳ ನಿರ್ಮಾಣ ಪೂರ್ಣ ಪ್ರಮಾಣದಲ್ಲಿ ಆಗದೆ ಇರುವುದರಿಂದ ಎಲ್ಲ ಶಾಲೆಗಳಿಗೂ ಜಿ.ಪಂ. ನಿಂದ ಮಳೆಗಾಲದಲ್ಲಿ ವಿಶೇಷ ಸೂಚನೆ ನೀಡುವ ಸಾಧ್ಯತೆಯಿದೆ. ಕಾಲುಸಂಕ ದಾಟಿ ಶಾಲೆಗೆ ಬರುವ ಮಕ್ಕಳ ಬಗ್ಗೆ ವಿಶೇಷ ನಿಗಾ ವಹಿಸಲು ಮತ್ತು ಮಳೆ ಹೆಚ್ಚಿರುವ ಸಂದರ್ಭದಲ್ಲಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳನ್ನು ಪಾಲಕರೇ ಶಾಲೆಗೆ ಕರೆತರಬೇಕು ಹಾಗೂ ವಾಪಸ್‌ ಕರೆದೊಯ್ಯಬೇಕು ಎಂಬ ಸೂಚನೆ ನೀಡಲಾಗುತ್ತದೆ. ಅಲ್ಲದೆ ಇದರ ಸಂಪೂರ್ಣ ಉಸ್ತುವಾರಿ ಯನ್ನು ಶಾಲೆಗಳಿಗೆ ವಹಿಸುವ ಸಾಧ್ಯತೆಯೂ ಇದೆ.

ಅಪಾಯಕಾರಿ ಸ್ಥಿತಿಯಲ್ಲಿರುವ ಕಾಲುಸಂಕ ಗಳ ದುರಸ್ತಿ ನಡೆದಿದೆ. ಹೊಸ ಕಾಲುಸಂಕಗಳು ನಿರೀಕ್ಷಿತ ಪ್ರಮಾಣದಲ್ಲಿ ನಿರ್ಮಾಣವಾಗಿಲ್ಲ. ಹೀಗಾಗಿ ಎಲ್ಲ ಶಾಲೆಗಳಿಗೂ ಸೂಚನೆ ಕೊಡಲಾಗು ವುದು. ವಿದ್ಯಾರ್ಥಿಗಳ ಸುರಕ್ಷೆಗೆ ಹೆಚ್ಚಿನ ಆದ್ಯತೆ ನೀಡಲಿದ್ದೇವೆ.
-ಡಾ| ಕುಮಾರ್‌, ಪ್ರಸನ್ನ ಎಚ್‌., ಸಿಇಒ, ಜಿ.ಪಂ., ದ.ಕ., ಉಡುಪಿ

ತುರ್ತಾಗಿ ಏನಾಗಬೇಕು?
l ಜಿಲ್ಲಾಡಳಿತದಿಂದ ತುರ್ತಾಗಿ ಕಾಲುಸಂಕ, ಚೆಕ್‌ಡ್ಯಾಮ್‌ ಪರಿಶೀಲನೆಯಾಗಬೇಕು.
l ಉಪಯೋಗಿಸಲು ಯೋಗ್ಯವಲ್ಲದ ಕಾಲು ಸಂಕ, ಚೆಕ್‌ಡ್ಯಾಂಗಳ ಮಾಹಿತಿಯನ್ನು ಗ್ರಾ.ಪಂ.ಗಳಿಗೆ ತತ್‌ಕ್ಷಣ ರವಾನಿಸಬೇಕು.
l ಶಾಲಾ ಮಕ್ಕಳ ಸುರಕ್ಷೆಯ ದೃಷ್ಟಿಯಿಂದ ಅಪಾಯ ಇರುವ ಕಡೆಗಳಲ್ಲಿ ಮುನ್ನೆಚ್ಚರಿಕೆ ವಹಿಸಬೇಕು.
l ಕಾಲುಸಂಕಗಳನ್ನು ಎಚ್ಚರಿಕೆಯಿಂದ ದಾಟುವ ಬಗ್ಗೆ ಶಾಲೆಯಲ್ಲಿ ಶಿಕ್ಷಕರು ಮಕ್ಕಳಿಗೆ ಮಾಹಿತಿ ನೀಡಬೇಕು.
l ಮಳೆ ಬಿರುಸಾಗಿರುವ ಸಂದರ್ಭದಲ್ಲಿ ಪಾಲಕ, ಪೋಷಕರ ಜತೆಗೆ ಮಕ್ಕಳು ಕಾಲುಸಂಕ, ಚೆಕ್‌ಡ್ಯಾಂ ದಾಟಬೇಕು.
l ದುರಸ್ತಿಯಾಗದೆ ಇರುವ ಅಪಾಯಕಾರಿ ಕಾಲುಸಂಕಗಳನ್ನು ಮಳೆಗಾಲದಲ್ಲಿ ಬಳಸದೇ ಇರುವುದು ಉತ್ತಮ.

 ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.