ಇಂಧನ ಬೆಲೆಯ ಗಣನೀಯ ಇಳಿಕೆ ಅಗತ್ಯ


Team Udayavani, Mar 25, 2021, 7:30 AM IST

ಇಂಧನ ಬೆಲೆಯ ಗಣನೀಯ ಇಳಿಕೆ ಅಗತ್ಯ

ಕೋವಿಡ್‌ ಬಂದಾಗಿನಿಂದ ಜಗತ್ತಿನ ಎಲ್ಲ ರಾಷ್ಟ್ರ ಆರ್ಥಿಕ ಸ್ಥಿತಿಯೂ ಹದಗೆಟ್ಟು, ಅಲ್ಲಿನ ದೇಶವಾಸಿಗಳೆಲ್ಲರೂ ಪರದಾಡುವಂತಾಗಿದೆ. ಭಾರತದಲ್ಲೂ ಪರಿಸ್ಥಿತಿ ಭಿನ್ನವಾಗಿಲ್ಲ. ಆದರೆ ಈ ಸಂಕಷ್ಟದ ನಡುವೆಯೇ ಇಂಧನ ದರದಲ್ಲಿನ ಗಣನೀಯ ಏರಿಕೆ ಭಾರತೀ ಯರಿಗೆ ಹೊರೆಯಾಗುತ್ತಲೇ ಸಾಗಿದೆ. ಆದಾಗ್ಯೂ ಕೆಲವು ದಿನಗಳಿಂದ ಜಾಗತಿಕ ಕಚ್ಚಾ ತೈಲದ ದರಗಳಲ್ಲಿ ಕುಸಿತ ಕಾಣಿಸಿಕೊಂಡು ಈ ವರ್ಷದಲ್ಲಿ ಇದೇ ಮೊದಲ ಬಾರಿ ಭಾರತದಲ್ಲಿ ಇಂಧನ ದರಗಳು ಕಡಿಮೆಯಾಗಿವೆ ಯಾದರೂ, ಪೈಸೆಗಳ ಲೆಕ್ಕದಲ್ಲಿನ ಪೆಟ್ರೋಲ್‌-ಡೀಸೆಲ್‌ ದರಗಳ ಇಳಿಕೆ ಜನಸಾಮಾನ್ಯರಿಗೆ ಸಮಾಧಾನವಂತೂ ತರುವಂತಿಲ್ಲ.

ಈಗ ಸಾರ್ವಜನಿಕ ಚಟುವಟಿಕೆ ಮತ್ತೆ ಯಥಾಸ್ಥಿತಿಗೆ ಬಂದಿದೆ. ಹೀಗಾಗಿ ಲಾಕ್‌ಡೌನ್‌ ಸಮಯದಲ್ಲಿ ಮನೆಯಲ್ಲೇ ಇದ್ದ ಜನರಿಗೆ ಇಂಧನ ದರ ಏರಿಕೆ-ಇಳಿಕೆಯ ಬಗ್ಗೆ ಅಷ್ಟಾಗಿ ತಲೆಕೆಡಿಸಿಕೊಂಡಿರಲಿಲ್ಲ. ಈಗ ಎಲ್ಲರೂ ಮತ್ತೆ ಕಚೇರಿ ಹಾಗೂ ಇನ್ನಿತರ ಕಾರ್ಯಗಳಿಗೆ ಓಡಾಡುತ್ತಿದ್ದಾರೆ. ಹೀಗಾಗಿ ಬೇಸಗೆಯ ಧಗದ ಜತೆಗೆ, ಇಂಧನ ಬೆಲೆ ಏರಿಕೆಯ ಬಿಸಯೂ ಅವರನ್ನು ಹೈರಾಣಾಗಿಸಿದೆ. ಕಚ್ಚಾ ತೈಲದ ದರದಲ್ಲಿ ಇಳಿಕೆ ಕಾಣಿಸಿಕೊಂಡಾಗ, ಪೆಟ್ರೋಲ್‌-ಡೀಸೆಲ್‌ ಬೆಲೆಯೂ ಇಳಿಯಲಿ ಎಂಬುದು ಜನರ ಆಶಯ. ಆದರೆ ಈಗೆಂದಷ್ಟೇ ಅಲ್ಲ, ಕೋವಿಡ್‌ ಹಾವಳಿ ಆರಂಭವಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರದಲ್ಲಿ ಗಣನೀಯ ಇಳಿಕೆ ಕಂಡುಬಂದಾಗಲೂ ಭಾರತದಲ್ಲಿ ಇಂಧನ ದರ ಕಡಿಮೆಯಾಗುವ ಬದಲು ಹೆಚ್ಚಾಗುತ್ತಲೇ ಹೋಯಿತು.

ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ತೆರಿಗೆ ಪ್ರಮುಖ ಆದಾಯ ಮೂಲಗಳಲ್ಲಿ ಒಂದು ಎನ್ನುವುದೇನೋ ಸರಿ. ರಾಜ್ಯ ಹಾಗೂ ಕೇಂದ್ರವು ಒಟ್ಟಾರೆಯಾಗಿ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 5 ಲಕ್ಷ ಕೋಟಿಗೂ ಅಧಿಕ ತೆರಿಗೆಯನ್ನು ಸಂಗ್ರಹಿಸುತ್ತವೆ. ಇದರಲ್ಲಿ ಬಹುಪಾಲು ತೆರಿಗೆಯು ರಾಜ್ಯ ಸರಕಾರಗಳ ತಿಜೋರಿ ಸೇರುತ್ತದೆ. ಈ ಕಾರಣಕ್ಕಾಗಿಯೇ, ಸಾರ್ವಜನಿಕರು, ಇಂಧನದ ಮೇಲಿನ ತೆರಿಗೆಯನ್ನು ತಗ್ಗಿಸಲು ಆಗ್ರಹಿಸುತ್ತಲೇ ಬಂದಿದ್ದಾರೆ.

ಕೇಂದ್ರ ಬಜೆಟ್‌ ಹಾಗೂ ಇತ್ತೀಚಿನ ರಾಜ್ಯ ಬಜೆಟ್‌ ಮಂಡನೆ ಸಂದರ್ಭದಲ್ಲೂ ತೆರಿಗೆ ಕಡಿತವಾಗಬಹುದು ಎಂಬ ಜನಸಾಮಾನ್ಯರ ನಿರೀಕ್ಷೆ ಹುಸಿಯಾಯಿತು. ಇನ್ನು ಪೆಟ್ರೋಲ್‌ ಡೀಸೆಲ್‌ ಬೆಲೆಯನ್ನು ಜಿಎಸ್‌ಟಿ ಅಡಿಯಲ್ಲಿ ತರುವ ಮಾತನಾಡಲಾಗಿತ್ತಾದರೂ, ಮುಂದಿನ 8-10 ವರ್ಷಗಳವರೆಗೆ ಈ ಕೆಲಸ ಸಾಧ್ಯವಿಲ್ಲ ಎಂದು ಕೇಂದ್ರ ಸರಕಾರ ಹೇಳಿದೆ.

ಹೀಗಾಗಿ ಈಗ ಉಳಿದಿರುವ ದಾರಿಯೆಂದರೆ, ಇಂಧನ ದರಗಳ ಮೇಲಿನ ತೆರಿಗೆಯನ್ನು ತಗ್ಗಿಸಲು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಮುಂದಾಗಬೇಕಿರುವುದು. ಪೆಟ್ರೋಲ್‌-ಡೀಸೆಲ್‌ ದರ ಏರಿಕೆಯೆಂದರೆ, ಇದರ ಪರಿಣಾಮ ಅಗತ್ಯ ವಸ್ತುಗಳ ದರಗಳ ಮೇಲೆಯೂ ಕಾಣಿಸಿಕೊಳ್ಳುತ್ತದೆ. ಹೀಗಾಗಿ ಜನಸಾಮಾನ್ಯರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕುತ್ತಲೇ ಹೋಗುತ್ತಾರೆ. ಈ ಕಾರಣಕ್ಕಾಗಿಯೇ, ಈಗಲಾದರೂ ಸರಕಾರಗಳು ಇಂಧನ ಬೆಲೆಯನ್ನು ಇಳಿಸಲು ಸಂಘಟಿತವಾಗಲೇಬೇಕಿದೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.