ಕುಮಾರಸ್ವಾಮಿ ಮಣಿಸಲು ಸೈನಿಕನ ಕಾರ್ಯಾಚರಣೆ


Team Udayavani, May 3, 2023, 8:25 AM IST

H YOG

ರಾಮನಗರ: ಹಾಲಿ ಮತ್ತು ಮಾಜಿ ಪ್ರಧಾನಿಗಳ ಪ್ರಚಾರ, ಸಿಎಂ ಆಗಲು ಹೊರಟಿರುವವರು, ಸಿಎಂ ಕುರ್ಚಿ ಕೆಡವಿದವರ ಮುಖಾಮುಖೀ ಕ್ಷೇತ್ರದಲ್ಲಿ ರಾಜಕೀಯ ರಂಗೇರುವಂತೆ ಮಾಡಿದ್ದು, ದಳಪತಿ ಕುಮಾರಸ್ವಾಮಿ ಮಣಿ ಸಲು ಬಿಜೆಪಿಯಿಂದ ಸೈನಿಕ ಚಿತ್ರದ ಖ್ಯಾತಿಯ ಯೋಗೇಶ್ವರ್‌ ಕಣಕ್ಕಿಳಿದಿದ್ದಾರೆ. ಇವರಿಬ್ಬರ ಜಿದ್ದಾಜಿದ್ದಿನ ಹೋರಾಟದ ನಡುವೆ ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್‌ ಕಸರತ್ತು ನಡೆಸುತ್ತಿದೆ.

ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಮುಸ್ಲಿಂ, ದಲಿತ ಮತ್ತು ಹಿಂದುಳಿದ ಸಮು ದಾಯದ ಮತಗಳು ನಿರ್ಣಾಯಕವೆನಿಸಿದೆ. ಈ ಬಾರಿ ಗೆಲುವಿಗೆ ಟೊಂಕ ಕಟ್ಟಿರುವ ಎರಡೂ ಅಭ್ಯರ್ಥಿಗಳು ಎಲ್ಲ ಸಮುದಾಯಗಳ ಓಲೆ„ಕೆಗೆ ಕಸರತ್ತು ನಡೆಸುತ್ತಿದ್ದಾರೆ.

ಎಚ್‌ಡಿಕೆಗೆ ಪ್ರತಿಷ್ಠೆಯ ಕಣ: ಕಳೆದ ಬಾರಿ ರಾಮನಗರ-ಚನ್ನಪಟ್ಟಣದಲ್ಲಿ ಸ್ಪರ್ಧೆ ಮಾಡಿದ್ದ ಎಚ್‌ಡಿಕೆ, ಈ ಬಾರಿ ಚನ್ನಪಟ್ಟಣದಿಂದ ಮಾತ್ರ ಮರುಆಯ್ಕೆ ಬಯಸಿದ್ದಾರೆ. ಕ್ಷೇತ್ರದಲ್ಲಿ ಎದು ರಾಳಿಯೇ ಇಲ್ಲ ಎಂದುಕೊಂಡಿದ್ದ ಯೋಗೇಶ್ವರ್‌ ಮಣಿಸುವ ಮೂಲಕ ಚನ್ನಪಟ್ಟಣದಲ್ಲಿ ಜೆಡಿಎಸ್‌ ಪತಾಕೆಯನ್ನು ಹಾರಿಸಿರುವ ಕುಮಾರಸ್ವಾಮಿಗೆ ಮತ್ತೆ ಗೆಲುವು ಸಾಧಿಸುವುದು ಅತ್ಯವಶ್ಯಕ. ಎಚ್‌.ಡಿ. ಕುಮಾರಸ್ವಾಮಿ ಗೆದ್ದ ಬಳಿಕ  ಕ್ಷೇತ್ರದ 1,500 ಕೋಟಿ ರೂ. ಯೋಜನೆ ನೀಡಿ ದ್ದಾರೆ, ಜೆಡಿಎಸ್‌ನ ಪಂಚರತ್ನ ಯೋಜನೆಗಳು, ಮತ್ತೆ ಸಿಎಂ ಆಗುತ್ತಾರೆ ಎಂಬ ಟ್ರಂಪ್‌ಕಾರ್ಡ್‌ ಬಳಸಿ ಅವರ ಪಕ್ಷದ ಮುಖಂಡರು ಕುಮಾರಸ್ವಾಮಿ ಪರ ವಾಗಿ ಕ್ಷೇತ್ರದಲ್ಲಿ ಮತಯಾಚನೆ ಮಾಡುತ್ತಿದ್ದಾರೆ. ಜೆಡಿಎಸ್‌ ಪರವಾಗಿ ಪ್ರಬಲ ಸಮುದಾಯವಾದ ಒಕ್ಕಲಿಗ ಸಮುದಾಯ ಹೆಚ್ಚು ಒಲವು ಹೊಂದಿ ರುವುದು, ಅಲ್ಪ ಸಂಖ್ಯಾಕ ಮತಗಳ ಬಗ್ಗೆ ಅಚಲ ವಿಶ್ವಾಸ ಹೊಂದಿರುವ ಜೆಡಿಎಸ್‌ ಉಳಿದ ಜಾತಿಗಳ ಮತವನ್ನು ಪಡೆದು ಗೆಲ್ಲಬಹುದು ಎಂಬ ಲೆಕ್ಕಾಚಾರದಲ್ಲಿದೆ.

ಎಚ್‌ಡಿಕೆ ಮಣಿಸಲು ಸೈನಿಕನ ಕಸರತ್ತು: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಈ ಬಾರಿ ಕ್ಷೇತ್ರದಲ್ಲಿ ಕುಮಾರಸ್ವಾಮಿ ಮಣಿಸಲು ಬೆವರು ಸುರಿಸುತ್ತಿದ್ದಾರೆ. ಈಗಾಗಲೇ ಸ್ವಾಭಿಮಾನಿ ಸಂಕಲ್ಪ ನಡಿಗೆಯ ಮೂಲಕ ಕ್ಷೇತ್ರದ ಮನೆಮನೆ ಸುತ್ತಿರುವ ಯೋಗೇಶ್ವರ್‌ ಸ್ವಾಭಿಮಾನದ ಪ್ರಶ್ನೆಯ ಜತೆಗೆ ಮನೆಮಗ ಎಂಬ ಟ್ರಂಪ್‌ಕಾರ್ಡ್‌ ಬಳಸಿದ್ದಾರೆ. ಕ್ಷೇತ್ರದಲ್ಲಿ ಪ್ರಧಾನಿ ಮೋದಿ ಬಂದು ಪ್ರಚಾರ ಮಾಡಿರುವುದು ವರದಾನವಾಗುತ್ತದೆ ಎಂಬುದು ಯೋಗೇಶ್ವರ್‌ ಲೆಕ್ಕಾಚಾರ. ಕ್ಷೇತ್ರದಲ್ಲಿ ಮಹಿಳಾ ಮತಗಳ ಜತೆಗೆ ಒಕ್ಕಲಿಗ ಸಮುದಾಯದ ಕೆಲವು ಮತಗಳನ್ನು ಸೆಳೆಯುವುದು, ಹಿಂದುಳಿದ ಸಮುದಾಯದ ಮತಗಳ ಬೆಂಬಲದೊಂದಿಗೆ ಗೆಲುವ ಕಾಣುವ ಹವಣಿಕೆ ಯೋಗೇಶ್ವರ್‌ರದ್ದು.

ಕಾಂಗ್ರೆಸ್‌ ನಡೆ ಏನು?: ಕಾಂಗ್ರೆಸ್‌ ಹಿಂದುಳಿದ ಸಮುದಾಯದ ಎಸ್‌.ಗಂಗಾಧರ್‌ ಅವರನ್ನು ಕಣಕ್ಕಿಳಿಸಿದೆ. ಇವರು ತೆಗೆದುಕೊಳ್ಳುವ ಮತಗಳ ಆಧಾರದ ಮೇಲೆ ಜೆಡಿಎಸ್‌, ಬಿಜೆಪಿ ಅಭ್ಯರ್ಥಿಯ ಗೆಲುವು ನಿರ್ಧಾರವಾಗುತ್ತದೆ. ಅಲ್ಲದೆ, ಕಾಂಗ್ರೆಸ್‌ನ ಶಕ್ತಿ ಪ್ರದರ್ಶನದ ಅರಿವು ಆಗುತ್ತದೆ.

~ ಸು.ನಾ.ನಂದಕುಮಾರ್‌

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.