ಭಾವೈಕ್ಯತೆಯ ಸಂಕೇತ ಹೊಸೂರು ಉರುಸ್


Team Udayavani, Mar 13, 2023, 7:08 PM IST

URUS

ರಬಕವಿ-ಬನಹಟ್ಟಿ: ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಹೊಸೂರಿನ ಸಿರಾಜಸಾಬ್ ಮತ್ತು ಮುರಾದಸಾಬ್ ದರ್ಗಾದ ಉರುಸ್ ಕಾರ್ಯಕ್ರಮ ಅತ್ಯಂತ ವಿಶೇಷವಾಗಿದ್ದು, ಇಲ್ಲಿಯ ಹಿಂದೂ ಮತ್ತು ಮುಸ್ಲಿಂ ಸಮುದಾಯದವರು ಒಂದಾಗಿ ಉರುಸ್ ಆಚರಣೆ ಮಾಡುತ್ತಿದ್ದು, ಇದು ಭಾವ್ಯಕ್ಯತೆಯ ಸಂಕೇತದ ಉರುಸ್ ಆಗಿದೆ.
ಐದು ದಿನಗಳ ಕಾಲ ನಡೆಯುವ ಉರುಸ್ ಕಾರ್ಯಕ್ರಮಕ್ಕೆ ರಬಕವಿ, ಬನಹಟ್ಟಿ, ರಾಮಪುರ ಹಾಗೂ ಹೊಸೂರಿನ ಹಿಂದೂಗಳು ಮತ್ತು ಮುಸ್ಲಿಂರು ಯಾವುದೆ ಬೇಧ ಭಾವವಿಲ್ಲದೆ ಒಂದಾಗಿ ನೂರಾರು ವರ್ಷಗಳಿಂದ ಅಚರಿಸುತ್ತ ಬಂದಿದ್ದಾರೆ. ಇದೊಂದು ಐತಿಹಾಸಿಕ ಮತ್ತು ಮಾದರಿ ಉರುಸ್ ಆಗಿದೆ.

ಹಿಂದೂ ಪುರುಷರು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಅನೇಕರು ತಮ್ಮ ಮನೆಗಳಿಂದ ದರ್ಗಾವರೆಗೆ ದೀಡ ನಮಸ್ಕಾರ ಸೇವೆ ಸಲ್ಲಿಸಿ ಹರಕೆ ತೀರಿಸುತ್ತಾರೆ. ದೀಡ ನಮಸ್ಕಾರ ಹಾಕಿದ ಮಹಿಳೆಯರು ಮತ್ತು ಮಕ್ಕಳು ದರ್ಗಾದ ಪೂಜಾರಿಗಳ ಕಾಲಿಗೆ ನಮಸ್ಕಾರ ಮಾಡುವ ಸನ್ನಿವೇಶಗಳನ್ನು ಕೂಡಾ ಇಲ್ಲಿ ಕಾಣಬಹುದಾಗಿದೆ. ಅನೇಕ ಹಿಂದೂಗಳು ಉರುಸ್ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಫಕೀರಗಳನ್ನು ತಮ್ಮ ಮನೆಗಳಿಗೆ ಊಟಕ್ಕೆ ಕರೆದುಕೊಂಡು ಹೋಗುತ್ತಾರೆ. ಅದರಂತೆ ಮುಸ್ಲಿಂ ಸಮುದಾಯದವರು ಹಿಂದೂಗಳನ್ನು ತಮ್ಮ ಮನೆಗೆ ಊಟಕ್ಕೆ ಆಹ್ವಾನಿಸುತ್ತಾರೆ. ಮುಸ್ಲಿಂ ಹೆಣ್ಣು ಮಕ್ಕಳಂತೆ ಹಿಂದೂ ಪುರುಷ, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಉರುಸ್ ಕಾರ್ಯಕ್ರಮದಲ್ಲಿ ಹೊಸ ಬಟ್ಟೆಗಳನ್ನು ಧರಿಸಿಕೊಂಡು ಕೈಯಲ್ಲಿ ಸಕ್ಕರೆ ಮತ್ತು ಮನೆಯಲ್ಲಿ ಮಾಡಿದ ಹೋಳಿಗೆ, ಮಾದೇಲಿ ಹಾಗೂ ಇನ್ನೀತರ ಸಿಹಿ ಪದಾರ್ಥದ ನೈವೇದ್ಯವನ್ನು ತೆಗೆದುಕೊಂಡು ಹೋಗಿ ಅರ್ಪಣೆ ಮಾಡಿ ಬರುತ್ತಾರೆ. ಇನ್ನೂ ಕೆಲವರು ಹತ್ತಾರು ಕೆ.ಜಿಯಷ್ಟು ಸಕ್ಕರೆಯನ್ನು ದರ್ಗಾದ ಭಾಗವಾನರಿಗೆ ಮತ್ತು ಫಕೀರರಿಗೆ ಸಲ್ಲಿಸುತ್ತಾರೆ. ಹಿಂದೂಗಳು ಕೂಡಾ ಇಲ್ಲಿಯ ದರ್ಗಾಕ್ಕೆ ಚಾದರ್ ಗಳನ್ನು ಅರ್ಪಣೆ ಮಾಡಿ ತಮ್ಮ ಹರಕೆಗಳನ್ನು ಪೂರೈಸುತ್ತಾರೆ. ಉರುಸ್ ಆಚರಣೆ ಸಂದರ್ಭದಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಪ್ರಮುಖರು ಕೂಡಿಕೊಂಡು ಪಟ್ಟಿಯನ್ನು ಸಂಗ್ರಹಿಸುತ್ತಾರೆ.

ಐದು ದಿನಗಳ ಉರಸನಲ್ಲಿ ನೂರಾರು ಕ್ವಿಂಟಲ್ ಸಕ್ಕರೆ ಮಾರಾಟವಾಗುತ್ತದೆ. ಅದೇ ರೀತಿಯಾಗಿ ಅಂದಾಜು ಐದಾರು ಸಾವಿರದಷ್ಟು ಚಾದರಗಳು ಮಾರಾಟವಾಗುತ್ತವೆ. ರೂ. ೫೦೦ ರಿಂದ ೧೦೦೦ ಸಾವಿರದವರೆಗೆ ಚಾದರಗಳು ಇದ್ದು, ಭಕ್ತರು ತಮ್ಮ ಹರಕೆಯಂತೆ ಖರೀದಿ ಮಾಡುತ್ತಾರೆ ಎನ್ನುತ್ತಾರೆ ಹೊಸೂರನ ವ್ಯಾಪಾರಸ್ಥರಾದ ಫರೀದ ಅತ್ತಾರ.
ನಮ್ಮೂರಿನ ಉರುಸ್ ಕಾರ್ಯಕ್ರಮ ಐತಿಹಾಸಿಕ ಮತ್ತು ಮಾದರಿ ಉರಸ್ ಆಗಿದೆ. ತಲೆ ತಲಾಂತರದಿಂದ ಆಚರಣೆ ಮಾಡುತ್ತ ಬಂದಿರುವ ಉರಸ್ ಕಾರ್ಯಕ್ರಮದಲ್ಲಿ ಹಿಂದೂಗಳ ಕೂಡಾ ಹೆಚ್ಚಾಗಿ ಕಂಡು ಬರುತ್ತಾರೆ. ಬೇರೆ ಊರುಗಳಿಗೆ ಹೋದ ಹಿಂದೂ ಯುವಕರು ಉರಸ್ ಕಾರ್ಯಕ್ರಮಕ್ಕೆ ಬಂದು ಹೋಗುವುದು ವಿಶೇಷವಾಗಿದೆ.
-ವೆಂಕಟೇಶ ನಿಂಗಸಾನಿ, ಹೊಸೂರನ ಪ್ರಮುಖರು

ಹೊಸೂರಿನ ಉರುಸ್ ಕಾರ್ಯಕ್ರಮವನ್ನು ಹಿಂದೂ ಮುಸ್ಲಿಂ ಸಂಘಟನೆಗಳು ಒಂದಾಗಿ ಶತ ಶತಮಾನಗಳಿಂದ ಆಚರಣೆ ಮಾಡುತ್ತ ಬಂದಿದ್ದಾರೆ. ದರ್ಗಾದ ಬದಿಗಿರುವ ಬೃಹತ್ ಆಲದ ಮರದಿಂದ ಯಾವಾಗಲೂ ಸಕ್ಕರೆ ಉದುರುತ್ತದೆ ಎಂಬುದು ಜನರ ನಂಬಿಕೆಯಾಗಿದೆ. ಯಾವಾಗಲೂ ಮರದ ಸುತ್ತ ಮುತ್ತ ಇರುವೆಗಳು ಓಡಾಡಿಕೊಂಡಿರುತ್ತವೆ. ಈ ಭಾಗದಲ್ಲಿ ಇದೊಂದು ವಿಶೇಷವಾದ ಉರುಸ್ ಆಗಿದೆ. ಹಿಂದೂಗಳು ದರ್ಗಾಕ್ಕೆ ಬಂದು ನೈವೇದ್ಯ ಸಲ್ಲಿಸುವುದು ವಿಶೇವಾಗಿದೆ.
– ಸಿರಾಜಸಾಬ್ ಹೊರಟ್ಟಿ, ಹೊಸೂರನ ಪ್ರಮುಖರು

ಟಾಪ್ ನ್ಯೂಸ್

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.