ತಬ್ಬಿಕೊಳ್ಳುವ ನೆಪದಲ್ಲಿ ವ್ಯಕ್ತಿಯ ಚಿನ್ನದ ಸರ ಕದ್ದ ತೃತೀಯ ಲಿಂಗಿ
Team Udayavani, Jan 15, 2023, 7:23 AM IST
ಬೆಂಗಳೂರು: ತೃತೀಯ ಲಿಂಗಿಯೊಬ್ಬರು ತಬ್ಬಿಕೊಳ್ಳುವ ನೆಪದಲ್ಲಿ ಕ್ಯಾಬ್ಗೆ ಕಾಯುತ್ತಿದ್ದ ವ್ಯಕ್ತಿಯ ಚಿನ್ನದ ಸರ ದೋಚಿರುವ ಘಟನೆ ಎಂ.ಜಿ.ರಸ್ತೆಯಲ್ಲಿ ನಡೆದಿದೆ.
ತಮಿಳುನಾಡಿನ ಚೆನ್ನೈ ಮೂಲದ 34 ವರ್ಷದ ವ್ಯಕ್ತಿ ಸರ ಕಳೆದುಕೊಂಡವರು. ಮಾರ್ಕೆಟಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿ ಜ.8ಕ್ಕೆ ಬೆಂಗಳೂರಿಗೆ ಬಂದು ಎಂ.ಜಿ.ರಸ್ತೆಯಲ್ಲಿ ಬೆಳಗಿನ ಜಾವ 3 ಗಂಟೆಯಲ್ಲಿ ಸ್ನೇಹಿತನ ಜತೆಗೆ ಕ್ಯಾಬ್ಗ ಕಾಯುತ್ತಿದ್ದರು. ಆಗ ಅಲ್ಲಿಗೆ ಬಂದ ತೃತೀಯ ಲಿಂಗಿ, ದೂರುದಾರನೊಂದಿಗೆ ಅಸಭ್ಯವಾಗಿ ವರ್ತಿಸಲು ಮುಂದಾಗಿದ್ದಾರೆ. ಅದಕ್ಕೆ ದೂರುದಾರ ಒಪ್ಪದಿದ್ದಾಗ ಮೂರ್ನಾಲ್ಕು ಬಾರಿ ತಬ್ಬಿಕೊಂಡು ಕತ್ತಿನಲ್ಲಿದ್ದ 1.64 ಲಕ್ಷ ರೂ. ಮೌಲ್ಯದ 32 ಗ್ರಾಂ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದಾರೆ. ಕೆಲ ಹೊತ್ತಿನ ಬಳಿಕ ಕುತ್ತಿಗೆ ಬಳಿ ಕೈ ಹಾಕಿದಾಗ ಸರ ಕಸಿದು ಕಳವಾಗಿರುವುದು ಗೊತ್ತಾಗಿದೆ. ಅನಂತರ ಸ್ನೇಹಿತನ ಜತೆ ಅಕ್ಕಪಕ್ಕದ ರಸ್ತೆಯಲ್ಲಿ ಹುಡುಕಾಟ ನಡೆಸಿ, ಪತ್ತೆಯಾಗದಿದ್ದಾಗ ಕೊನೆಗೆ ಕಬ್ಬನ್ ಪಾರ್ಕ್ ಠಾಣೆಗೆ ದೂರು ನೀಡಿದ್ದಾರೆ.
ಆರೋಪಿಯ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು. ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು