ಅಮೆರಿಕ ಮಾದರಿಯಲ್ಲಿ ಸಿಗಲಿ ಲಸಿಕೆ


Team Udayavani, Mar 23, 2021, 7:05 AM IST

ಅಮೆರಿಕ ಮಾದರಿಯಲ್ಲಿ ಸಿಗಲಿ ಲಸಿಕೆ

ದೇಶದಲ್ಲಿ ಲಸಿಕೆ ವಿತರಣೆ ಪ್ರಕ್ರಿಯೆ ವೇಗ ಪಡೆದಿದ್ದರೂ, ಅದರಲ್ಲಿ ಹಲವು ಕುಂದುಕೊರತೆಗಳು ಗೋಚರಿಸುತ್ತಿರುವುದು ಆತಂಕಕ್ಕೆ ದೂಡುವಂತಿದೆ. ಮುಖ್ಯವಾಗಿ, ದೇಶಾದ್ಯಂತ ಲಸಿಕೆಯ ಡೋಸ್‌ಗಳು ಬಳಕೆಯಾಗದೇ ವ್ಯರ್ಥವಾಗುತ್ತಿರುವುದು ಚಿಂತೆಯ ಗೆರೆ ಮೂಡುವಂತೆ ಮಾಡಿದೆ. ಕೋವಿಡ್‌ ಡೋಸ್‌ಗಳು ವ್ಯರ್ಥವಾಗುತ್ತಿರುವ ರಾಜ್ಯಗಳ ಪೈಕಿ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿದ್ದು, ಇದುವರೆಗೂ ಒಂದೂವರೆ ಲಕ್ಷ ಡೋಸ್‌ಗಿಂತಲೂ ಅಧಿಕ ಪ್ರಮಾಣದ ಲಸಿಕೆ ವ್ಯರ್ಥವಾಗಿರುವ ಸುದ್ದಿ ಬಂದಿದೆ.

ಸಮಯಕ್ಕೆ ಸರಿಯಾಗಿ ಫ‌ಲಾನುಭವಿಗಳು ಬರದಿರುವುದೇ ಸಮಸ್ಯೆಗೆ ಮುಖ್ಯ ಕಾರಣ ಎಂದು ದೇಶದ ಆರೋಗ್ಯ ಇಲಾಖೆಗಳು ಹೇಳುತ್ತಿವೆ. ಈ ಕಾರಣಕ್ಕಾಗಿಯೇ ಲಸಿಕೆ ವಿತರಣೆಯ ವಿಚಾರದಲ್ಲಿ ಭಾರತವು ಅಮೆರಿಕದ ಮಾದರಿ ಅನುಸರಿಸುವುದು ಸೂಕ್ತ. ಅಮೆರಿಕದಲ್ಲಿ ಲಸಿಕೆ ವಿತರಣೆಯ ನಿಗದಿತ ಸಮಯದಲ್ಲಿ ಫ‌ಲಾನು ಭವಿಗಳು ಕಾರಣಾಂತರಗಳಿಂದ ಬರದಿದ್ದರೆ, ಅವರ ಪಾಲಿನ ಲಸಿಕೆ ಯನ್ನು ವಿತರಣ ಘಟಕದ ಸನಿಹದಲ್ಲಿರುವ ಸಾರ್ವಜನಿಕರಿಗೆ ನೀಡಲಾಗುತ್ತದೆ. ತನ್ಮೂಲಕ ಅನಗತ್ಯವಾಗಿ ಅಮೂಲ್ಯ ಲಸಿಕೆ ವ್ಯರ್ಥವಾ ಗುವುದನ್ನು ತಪ್ಪಿಸಲಾಗುತ್ತಿದೆ. ಭಾರತದಲ್ಲೂ ಈ ರೀತಿಯ ಕ್ರಮ ಕೈಗೊಂಡರೆ ಲಸಿಕೆ ಪೋಲಾಗುವುದನ್ನು ತಡೆಯಲು ಸಾಧ್ಯವಾಗುತ್ತದೆ.

ಇದಷ್ಟೇ ಅಲ್ಲದೆ ಕುಟುಂಬವೊಂದರಲ್ಲಿ ಒಬ್ಬರಿಗೆ ಸೋಂಕು ಬಂದರೆ ಇತರರಿಗೂ ಹರಡುವ ಸಾಧ್ಯತೆ ಅಧಿಕವಿರುತ್ತದೆ. ಹೀಗಾಗಿ ಕುಟುಂಬ ಸದಸ್ಯರು ಮನೆಯ ಹಿರಿಯರಿಗೆ ಲಸಿಕೆ ಹಾಕಿಸಲು ಕರೆದೊಯ್ದಾಗ, ವಿತರಣ ಘಟಕದಲ್ಲಿ ಫ‌ಲಾನುಭವಿಗಳಿಲ್ಲದೇ ಲಸಿಕೆ ಉಳಿದಿದ್ದರೆ ಅದನ್ನು ಕಸದಬುಟ್ಟಿಗೆ ಎಸೆಯುವ ಬದಲು, ಆ ಕುಟುಂಬ ವರ್ಗಕ್ಕೆ ನೀಡುವಂಥ ಕ್ರಮದ ಬಗ್ಗೆ ಯೋಚಿಸಬೇಕು. ಹೀಗಾಗಿ ರೋಗ ಪ್ರಸರಣವನ್ನು ತ್ವರಿತವಾಗಿ ತಡೆಯಲು ಸದ್ಯದ ವಯೋಮಿತಿ ನಿಯಮ ಬದಲಿಸಿ ವ್ಯಾಕ್ಸಿನ್‌ ಕೊಡಲಾರಂಭಿಸುವುದು ಒಳ್ಳೆಯದು. ಹೀಗೆ ಮಾಡುವುದರಿಂದ ಲಸಿಕೆ ವ್ಯರ್ಥವಾಗುವುದನ್ನು ತಪ್ಪಿಸುವ ಜತೆಗೆ, ಸಾಂಕ್ರಾಮಿಕದ ವೇಗವನ್ನೂ ಗಣನೀಯವಾಗಿ ತಗ್ಗಿಸಬಹುದು.

ಗಮನಿಸಬೇಕಾದ ಅಂಶವೆಂದರೆ, ದೇಶದಲ್ಲೀಗ 20-45 ವಯಸ್ಸಿನ ವರನ್ನು ಸೂಪರ್‌ ಸ್ಪ್ರೆಡರ್‌ಗಳೆಂದು ಕರೆಯಲಾಗುತ್ತಿದೆ. ಅಂದರೆ ಈ ವಯೋಮಾನದವರಿಂದಾಗಿ ಪ್ರಕರಣಗಳು ವೇಗವಾಗಿ ಹಬ್ಬುತ್ತಿವೆ. ಲಾಕ್‌ಡೌನ್‌ ತೆರವುಗೊಂಡ ಅನಂತರದಿಂದ ನೌಕರ ವರ್ಗವೇ ಅಧಿಕವಿರುವ ಈ ವಯೋಮಾನದವರು ನಿತ್ಯ ಕಚೇರಿಗಳಿಗೆ ತೆರಳುತ್ತಿದ್ದಾರೆ. ಹೊರಗೆ ಓಡಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿಯೇ ಲಸಿಕೆ ಫ‌ಲಾನುಭವಿಗಳ ವಯೋಮಿತಿಯ ವ್ಯಾಪ್ತಿಯನ್ನೂ ಕೂಡಲೇ ಬದಲಿಸುವುದು ಅಗತ್ಯವಾಗಿದೆ. ಆರೋಗ್ಯ ಇಲಾಖೆ, ಸರಕಾರ ಈ ನಿಟ್ಟಿನಲ್ಲಿ ತ್ವರಿತ ನಿರ್ಣಯಕ್ಕೆ ಬರುವುದು ಸೂಕ್ತ.

ಬೇಸರದ ಸಂಗತಿಯೆಂದರೆ ಕೋವಿಡ್‌ ಸೃಷ್ಟಿಸಿರುವ ಅನಾಹುತದ ಅರಿವಿದ್ದರೂ ಲಸಿಕೆ ಪಡೆಯುವ ವಿಚಾರದಲ್ಲಿ ಜನರು ಅಸಡ್ಡೆ ತೋರಿಸುತ್ತಿರುವುದು. ಸರಕಾರಗಳು ಹಾಗೂ ವಿಜ್ಞಾನ ಲೋಕದ ಅವಿರತ ಪ್ರಯತ್ನದ ಫ‌ಲವಾಗಿ ಇಷ್ಟು ತ್ವರಿತವಾಗಿ ಲಸಿಕೆ ಲಭ್ಯವಾಗಿರುವುದೇ ದೊಡ್ಡ ಸಂಗತಿ. ಹೀಗಿರುವಾಗ ಈ ವಿಚಾರದಲ್ಲಿ ಸಾರ್ವಜನಿಕರು ಅಸಡ್ಡೆ ತೋರಿಸುವುದು ಯಾವುದೇ ಕಾರಣಕ್ಕೂ ಸಮರ್ಥನೀಯವಲ್ಲ.

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.