Boycott ಎಫೆಕ್ಟ್: 7 ದಿನದಲ್ಲಿ 50 ಕೋಟಿ ರೂ. ಗಳಿಸಲು ವಿಫಲವಾದ “ಲಾಲ್ ಸಿಂಗ್ ಚಡ್ಡಾ”
ಕಳೆದ ಗುರುವಾರ ಬಿಡುಗಡೆಗೊಂಡಿದ್ದ ಲಾಲ್ ಸಿಂಗ್ ಚಡ್ಡಾ ಮೊದಲ ದಿನ 11.70 ಕೋಟಿ ರೂಪಾಯಿ ಗಳಿಕೆ ಕಂಡಿತ್ತು.
Team Udayavani, Aug 18, 2022, 1:38 PM IST
ಮುಂಬೈ: ದೇಶಾದ್ಯಂತ ತೀವ್ರ ವಿರೋಧ ಹಾಗೂ ಬಾಯ್ಕಾಟ್ ಟ್ರೆಂಡಿಂಗ್ ಆದ ಪರಿಣಾಮ ಆಮಿರ್ ಖಾನ್ ಮತ್ತು ಕರೀನಾ ಕಪೂರ್ ಅಭಿನಯದ ಲಾಲ್ ಸಿಂಗ್ ಚಡ್ಡಾ ಸಿನಿಮಾಕ್ಕೆ ಪ್ರೇಕ್ಷಕರ ನೀರಸ ಪ್ರತಿಕ್ರಿಯೆಯಿಂದ ಬಾಕ್ಸಾಫೀಸ್ ನಲ್ಲಿ ದಯನೀಯ ಸೋಲು ಕಂಡಿದೆ.
ಇದನ್ನೂ ಓದಿ:ನಕಲಿ ಸುದ್ದಿ ಹರಡುತ್ತಿದ್ದ ಭಾರತದ 7 ಮತ್ತು ಪಾಕ್ ನ 1 ಯೂಟ್ಯೂಬ್ ಚಾನೆಲ್ ನಿಷೇಧಿಸಿದ ಕೇಂದ್ರ
ಲಾಲ್ ಸಿಂಗ್ ಚಡ್ಡಾ ಸಿನಿಮಾ ಬಿಡುಗಡೆಯಾಗಿ ಒಂದು ವಾರ ಕಳೆದಿದೆ. ಆದರೆ ಬಾಕ್ಸಾಫೀಸ್ ನಲ್ಲಿ 50 ಕೋಟಿ ರೂಪಾಯಿ ಗಳಿಸಲು ವಿಫಲವಾಗಿದೆ. ಪಿಂಕ್ ವಿಲ್ಲಾ ಮಾಹಿತಿ ಪ್ರಕಾರ, ಆಮಿರ್ ಖಾನ್ ಲಾಲ್ ಸಿಂಗ್ ಚಡ್ಡಾ 7ನೇ ದಿನ ಗಳಿಸಿದ್ದು ಕೇವಲ 1.55 ಕೋಟಿ ರೂಪಾಯಿ. ಆಗಸ್ಟ್ 17ರಂದು ಚಿತ್ರದ ಒಟ್ಟು ಕಲೆಕ್ಷನ್ 49.23 ಕೋಟಿ ರೂಪಾಯಿ ಎಂದು ತಿಳಿಸಿದೆ.
ಹಾಲಿವುಡ್ ನ ಕ್ಲಾಸಿಕ್ ಸಿನಿಮಾವಾದ ಫಾರೆಸ್ಟ್ ಗಂಪ್ ನ ರಿಮೇಕ್ ಆಗಿರುವ ಲಾಲ್ ಸಿಂಗ್ ಚಡ್ಡಾ ಚಿತ್ರವನ್ನು ಅದ್ವೈತ್ ಚಂದನ್ ನಿರ್ದೇಶಿಸಿದ್ದು, ಸುಮಾರು 180 ಕೋಟಿ ರೂಪಾಯಿ ಬಜೆಟ್ ನಲ್ಲಿ ಸಿನಿಮಾ ಚಿತ್ರೀಕರಣಗೊಂಡಿತ್ತು.
ಕಳೆದ ಗುರುವಾರ ಬಿಡುಗಡೆಗೊಂಡಿದ್ದ ಲಾಲ್ ಸಿಂಗ್ ಚಡ್ಡಾ ಮೊದಲ ದಿನ 11.70 ಕೋಟಿ ರೂಪಾಯಿ ಗಳಿಕೆ ಕಂಡಿತ್ತು. ಸಿನಿಮಾ ವಾರಾಂತ್ಯದ ರಜೆಯಲ್ಲಿ ಭರ್ಜರಿ ಗಳಿಕೆ ಕಾಣಲಿದೆ ಎಂಬುದು ಚಿತ್ರತಂಡದ ನಿರೀಕ್ಷೆಯಾಗಿತ್ತು. ಆದರೆ Boycott ಲಾಲ್ ಸಿಂಗ್ ಚಡ್ಡಾ ಟ್ರೆಂಡಿಂಗ್, ಕರಿನಾ ಕಪೂರ್ ಹೇಳಿಕೆ ಇದೀಗ ಮುಳುವಾದಂತಾಗಿದೆ.
ಏಳು ದಿನಗಳಲ್ಲಿಯೂ ಲಾಲ್ ಸಿಂಗ್ ಚಡ್ಡಾ ಬಾಕ್ಸಾಫೀಸ್ ನಲ್ಲಿ 50 ಕೋಟಿ ರೂಪಾಯಿ ಗಳಿಸಲು ಹೆಣಗಾಡುವಂತಾಗಿದೆ. ಈ ನಿಟ್ಟಿನಲ್ಲಿ ಆಮಿರ್ ಅವರ ಸಿನಿ ಪಯಣದಲ್ಲಿ ಕಳಪೆ ಪ್ರದರ್ಶನ ಕಂಡ ಕೆಲವು ಸಿನಿಮಾಗಳ ಪಟ್ಟಿಗೆ ಲಾಲ್ ಸಿಂಗ್ ಚಡ್ಡಾ ಕೂಡಾ ಸೇರಿದಂತಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ