ಪಂಜಾಬ್ ಆಯ್ತು ಈಗ ಕೇಜ್ರಿವಾಲ್ ಚಿತ್ತ ಗುಜರಾತ್ ನತ್ತ…2 ದಿನ ಭೇಟಿ, ರೋಡ್ ಶೋ
ಎರಡು ಕಿಲೋ ಮೀಟರ್ ಗಳವರೆಗೆ ತಿರಂಗಾ ಯಾತ್ರೆ ಹೆಸರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ.
Team Udayavani, Apr 2, 2022, 11:22 AM IST
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಪಂಜಾಬ್ ನಲ್ಲಿ ಭರ್ಜರಿ ಜಯಭೇರಿ ಗಳಿಸಿದ್ದು, ಗೋವಾದಲ್ಲಿ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿ ತನ್ನ ಖಾತೆಯನ್ನು ತೆರೆದಿತ್ತು. ಇದೀಗ 2023ರ ಡಿಸೆಂಬರ್ ನಲ್ಲಿ ಗುಜರಾತ್ ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಹಿಂದುತ್ವದ ವಿನಾಶ ಮಾಡುತ್ತಿರುವ ‘ನಕಲಿ’ಗಳ ಮಾತು ನಂಬಬೇಡಿ: ಜನತೆಗೆ ಎಚ್ ಡಿಕೆ ಕರೆ
ಆಮ್ ಆದ್ಮಿ ಪಕ್ಷ ಶನಿವಾರದಿಂದ (ಏಪ್ರಿಲ್ 02) ಗುಜರಾತ್ ನಲ್ಲಿ ಸರಣಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಗುಜರಾತ್ ನಲ್ಲಿ 1995ರಿಂದ ಭಾರತೀಯ ಜನತಾ ಪಕ್ಷ ಆಡಳಿತ ನಡೆಸುತ್ತಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಎರಡು ದಿನಗಳ ಭೇಟಿಗಾಗಿ ಈಗಾಗಲೇ ಅಹಮ್ಮದಾಬಾದ್ ತಲುಪಿರುವುದಾಗಿ ವರದಿ ವಿವರಿಸಿದೆ.
ಶನಿವಾರ ಕೇಜ್ರಿವಾಲ್ ಮತ್ತು ಭಗವಂತ್ ಮಾನ್ ಸಬರಮತಿ ಆಶ್ರಮಕ್ಕೆ ಭೇಟಿದ ನಂತರ ಎರಡು ಕಿಲೋ ಮೀಟರ್ ಗಳವರೆಗೆ ತಿರಂಗಾ ಯಾತ್ರೆ ಹೆಸರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಭಾನುವಾರ (ಏಪ್ರಿಲ್ 03) ಅಹಮ್ಮದಾಬಾದ್ ನ ಸ್ವಾಮಿನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.
ಇತ್ತೀಚೆಗೆ ಅರವಿಂದ್ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ನಡೆದ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಹಾಗೂ ಭಗವಂತ್ ಮಾನ್ ಗೆ ಹೆಚ್ಚುವರಿ ಭದ್ರತಾ ವ್ಯವಸ್ಥೆ ಮಾಡಬೇಕು ಎಂದು ಗುಜರಾತ್ ನ ಆಮ್ ಆದ್ಮಿ ಪಕ್ಷ ಅಹಮ್ಮದಾಬಾದ್ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ