ಗುಜರಾತ್ ಸೂರತ್ ಅಭ್ಯರ್ಥಿ ಅಪಹರಣ, ಕುಟುಂಬ ಸದಸ್ಯರು ನಾಪತ್ತೆ: ಆಮ್ ಆದ್ಮಿ ಪಕ್ಷ ಆರೋಪ
ಇದೊಂದು ಕೇವಲ ಅಭ್ಯರ್ಥಿಯ ವಿಷಯಲ್ಲ, ಪ್ರಜಾಪ್ರಭುತ್ವದ ಅಪಹರಣ
Team Udayavani, Nov 16, 2022, 1:07 PM IST
ಅಹಮದಾಬಾದ್: ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಹಾಗೂ ಕುಟುಂಬದ ಸದಸ್ಯರು ಮಂಗಳವಾರ(ನವೆಂಬರ್ 15)ದಿಂದ ನಾಪತ್ತೆಯಾಗಿದ್ದಾರೆ. ಗುಜರಾತ್ ನ ಆಪ್ ಅಭ್ಯರ್ಥಿ ಕಾಂಚನ್ ಜರಿವಾಲಾ ಅವರನ್ನು ಬಿಜೆಪಿ ಅಪಹರಿಸಿದೆ ಎಂದು ಮನೀಶ್ ಸಿಸೋಡಿಯಾ ಬುಧವಾರ ಆರೋಪಿಸಿದ್ದಾರೆ.
ಇದನ್ನೂ ಓದಿ:ಶಿರ್ವ: ತಂತಿ ಬೇಲಿಗೆ ಸಿಲುಕಿ ಬಿದ್ದ ಚಿರತೆ, ಅರಣ್ಯಾಧಿಕಾರಿಗಳು ದೌಡು
ಕಾಂಚನ್ ಜರಿವಾಲಾ ಅವರು ಗುಜರಾತ್ ನ ಪೂರ್ವ ಸೂರತ್ ನ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಭೀತಿ ಆವರಿಸಿದೆ. ಇದರಿಂದಾಗಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯನ್ನು ಅಪಹರಿಸಿದೆ ಎಂದು ಸಿಸೋಡಿಯಾ ದೂರಿದ್ದಾರೆ.
ಮಂಗಳವಾರ ಕಾಂಚನ್ ಜರಿವಾಲಾ ಅವರು ನಾಮಪತ್ರ ಪರಿಶೀಲನೆಗಾಗಿ ತೆರಳಿದ್ದರು. ನಾಮಪತ್ರ ಪರಿಶೀಲನೆ ಬಳಿಕ ಹೊರಬಂದಾಗ ಅವರನ್ನು ಮತ್ತು ಕುಟುಂಬ ಸದಸ್ಯರನ್ನು ಬಿಜೆಪಿ ಗೂಂಡಾಗಳು ಅಪಹರಿಸಿದ್ದು, ಈಗ ಎಲ್ಲಿದ್ದಾರೆ ಎಂಬುದು ಗೊತ್ತಿಲ್ಲ ಎಂಬುದಾಗಿ ದೆಹಲಿ ಉಪಮುಖ್ಯಮಂತ್ರಿ ಸಿಸೋಡಿಯಾ ತಿಳಿಸಿದ್ದಾರೆ.
ಇದು ಅಪಾಯಕಾರಿ ಬೆಳವಣಿಗೆ. ಇದೊಂದು ಕೇವಲ ಅಭ್ಯರ್ಥಿಯ ವಿಷಯಲ್ಲ, ಪ್ರಜಾಪ್ರಭುತ್ವದ ಅಪಹರಣ ಎಂದು ಮನೀಶ್ ಆರೋಪಿಸಿದ್ದಾರೆ. ಈ ಘಟನೆ ಬಗ್ಗೆ ಆಮ್ ಆದ್ಮಿ ಪಕ್ಷದ ಮುಖಂಡರು ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
MUST WATCH
ಹೊಸ ಸೇರ್ಪಡೆ
Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!