
ಮಹಿಳೆಯರ ಕುತ್ತಿಗೆಯಿಂದ ಸರ ಅಪಹರಣ
Team Udayavani, Jun 11, 2023, 5:08 AM IST

ಕಾಸರಗೋಡು: ಹೆಲ್ಮೆಟ್ ಧರಿಸಿ ಸ್ಕೂಟರ್ನಲ್ಲಿ ಬಂದ ಕಳ್ಳರು ಮೂವರು ಮಹಿಳೆಯರ ಕುತ್ತಿಗೆಯಿಂದ ಚಿನ್ನದ ಸರ ಅಪಹರಿಸಿದ ಘಟನೆ ನಡೆದಿದೆ.
ಪನಯಾಲ್ ಪೊಡಿಪಳ್ಳದಲ್ಲಿ ಜಿ.ಜಿ. ಸ್ಟೋರ್ ಅಂಗಡಿ ನಡೆಸುತ್ತಿರುವ ಎ.ಗೋಪಾಲನ್ ಅವರ ಪತ್ನಿ ಪದ್ಮಾವತಿ ಅವರ ಕತ್ತಿನಿಂದ ಚಿನ್ನದ ಸರವನ್ನು ಎಗರಿಸಿ ಪರಾರಿಯಾಗಿದ್ದಾರೆ. ಪರಾರಿಯಾದ ಸ್ಕೂಟರ್ನ ದೃಶ್ಯ ಅಂಗಡಿ ಸಮೀಪದ ಸಿಸಿ ಟಿವಿಯಲ್ಲಿ ಪತ್ತೆಯಾಗಿದೆ. ಈ ಸ್ಕೂಟರ್ನ ನಂಬ್ರ ನಕಲಿ ಎಂಬುದಾಗಿ ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ.
ಬಾರಾ ಮುಲ್ಲಚ್ಚೇರಿ ಆಯುರ್ವೇದ ಆಸ್ಪತ್ರೆ ಪರಿಸರದ ನೆಲ್ಲಿಯಡ್ಕ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯೋರ್ವರ ಕತ್ತಿನಿಂದ ನಕಲಿ ಚಿನ್ನದ ಸರವನ್ನು ಎಗರಿಸಿ ಪರಾರಿಯಾಗಿದ್ದಾನೆ. ಮೇಲ್ಪರಂಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ಎಗರಿಸಿ ಪರಾರಿಯಾದ ಘಟನೆ ನಡೆದಿದೆ. ಈ ಎಲ್ಲ ಪ್ರಕರಣಗಳಲ್ಲಿ ಒಬ್ಬನೇ ಭಾಗಿಯಾಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ಟೆರೇಸ್ನಿಂದ ಬಿದ್ದು ವ್ಯಕ್ತಿ ಸಾವು
ಕುಂಬಳೆ: ಮನೆಯ ಟೆರೇಸ್ ಮೇಲಿನಿಂದ ಬಿದ್ದು ಮನೆಯೊಡೆಯ ಸಾವಿಗೀಡಾದ ಘಟನೆ ನಡೆದಿದೆ. ಪಾವೂರು ಜುಮಾ ಮಸೀದಿ ಬಳಿಯ ನಿವಾಸಿ ಮೊಹಮ್ಮದ್(64) ಸಾವಿಗೀಡಾದವರು. ಮನೆಯ ಟೆರೇಸ್ನ ಮೇಲೆ ನಿಂತಿದ್ದ ಮಳೆ ನೀರನ್ನು ತೆರವುಗೊಳಿಸಲೆಂದು ಮೊಹಮ್ಮದ್ ಟೆರೇಸ್ ಮೇಲೇರಿದ್ದರು. ಅಲ್ಲಿಂದ ಆಯ ತಪ್ಪಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ.
————————————————————————————————————–
ಕಟ್ಟಡದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು
ಕುಂಬಳೆ: ಸಂಶಯಾಸ್ಪದ ರೀತಿಯಲ್ಲಿ ಕಟ್ಟಡನಿಂದ ಬಿದ್ದು ಗಂಭೀರ ಗಾಯಗೊಂಡು ಕಲ್ಲಿಕೋಟೆ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಟ್ಟೆಗೋಳಿ ನಿವಾಸಿ ಬಾಪ್ಟಿಸ್ಟ್ ಕ್ರಾಸ್ತಾ (59) ಸಾವಿಗೀಡಾದರು. ಮೇ 21 ರಂದು ರಾತ್ರಿ ಅಟ್ಟೆಗೋಳಿಯ ಕಟ್ಟಡವೊಂದರ ಮೇಲಿನಿಂದ ಬಿದ್ದಿದ್ದರು. ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Baana dariyalli ನೂತನ ಭಾವ ಲಹರಿ; ಗಣೇಶ್-ರುಕ್ಮಿಣಿ- ರೀಷ್ಮಾ ನಟನೆಯ ಸಿನಿಮಾ ರಿಲೀಸ್

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್ ಸಿಂಗ್ ಖೈರಾ ಬಂಧನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Gudibande: ಬುದ್ದಿ ಹೇಳಿದ್ದಕ್ಕೆ ಪೊಲೀಸರ ಬೈಕ್ ಗೆ ಬೆಂಕಿ ಇಟ್ಟ ಭೂಪ