ಖಾತೆ ಬದಲಾವಣೆಗೆ ಲಂಚ : ಎಸಿಬಿ ಬಲೆಗೆ ಬಿದ್ದ ರಿಪ್ಪನ್ ಪೇಟೆ ಗ್ರಾಮ ಲೆಕ್ಕಾಧಿಕಾರಿ!
Team Udayavani, Nov 4, 2020, 5:03 PM IST
ಶಿವಮೊಗ್ಗ: ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದ್ದ ಘಟನೆ ರಿಪ್ಪನ್ ಪೇಟೆಯಲ್ಲಿ ಬುಧವಾರ ನಡೆದಿದೆ.
ರಿಪ್ಪನ್ ಪೇಟೆಯ ಗ್ರಾಮ ಲೆಕ್ಕಾಧಿಕಾರಿ ರಾಘವೇಂದ್ರ ಅವರು ಕೆದ್ದಲಗುಡ್ಡೆ ಗ್ರಾಮದ ಜೋಸೆಫ್ ಚಾಕೋ ಎಂಬುವರಿಂದ ಖಾತೆ ಬದಲಾವಣೆಗಾಗಿ ವ್ಯಕ್ತಿಯೊಬ್ಬರಿಂದ ಒಂದು ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಈ ವಿಚಾರವಾಗಿ ಜೋಸೆಫ್ ಚಾಕೋ ಅವರು ಎಸಿಬಿಗೆ ದೂರು ನೀಡಿದ್ದರು. ಗ್ರಾಮ ಲೆಕ್ಕಾಧಿಕಾರಿ ಲಂಚ ಪಡೆಯುವ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.
ಎಸಿಬಿ ಡಿವೈಎಸ್ಪಿ ಲೋಕೇಶ್ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ವೀರೇಂದ್ರ ನೇತೃತ್ವದ ತಂಡದಿಂದ ದಾಳಿ ನಡೆಸಿದರು.
ಇದನ್ನೂ ಓದಿ:ಮೊದಲ ಮಹಾಯುದ್ಧದಲ್ಲಿ ಕಾಲಾಳು ಪಡೆಯ ಮೂಲಕ ಯುದ್ಧದಲ್ಲಿ ಪಾಲ್ಗೊಂಡ ಕೂರ್ಗ್ ರೆಜಿಮೆಂಟ್