ಚಿತ್ರದುರ್ಗ: ಎಸಿಬಿ ಬಲೆಗೆ ಬಿದ್ದ ಪ್ರಭಾರಿ ಆಹಾರ ಸಂರಕ್ಷಣಾಧಿಕಾರಿ
Team Udayavani, Oct 28, 2021, 1:44 PM IST
ಚಿತ್ರದುರ್ಗ: ಲಂಚ ಸ್ವೀಕಾರ ವೇಳೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್ ಅವರು ಎಸಿಬಿ ಬಲೆಗೆ ಬಿದ್ದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಪ್ರಭಾರಿ ಆಹಾರ ಸಂರಕ್ಷಣಾಧಿಕಾರಿ ಆಗಿದ್ದ ತುಳಸಿ ರಂಗನಾಥ್, ಬೇಕರಿ ಪರವಾನಗಿ ನವೀಕರಣಕ್ಕಾಗಿ ‘ನಮ್ ಬೇಕರಿ’ ಮಾಲೀಕ ಮಂಜುನಾಥ್ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 8ಸಾವಿರ ರೂ. ಲಂಚ ಸ್ವೀಕಾರ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.
ಎಸಿಬಿ ಎಸ್ ಐ ಪ್ರವೀಣ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.