
ಮನೆ ಕಳ್ಳತನದ ಆರೋಪಿ ಬಂಧನ : 11.18 ಲಕ್ಷ ಮೌಲ್ಯದ ಚಿನ್ನಾಭರಣ ವಶ
Team Udayavani, Mar 23, 2023, 7:33 PM IST

ಸಂಕೇಶ್ವರ : ಮನೆ ಕಳ್ಳತನಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಸಂಕೇಶ್ವರ ಮತ್ತು ಹುಕ್ಕೇರಿ ಪೊಲೀಸ್ ಠಾಣೆಯ ಜಂಟಿ ಕಾರ್ಯಾಚರಣೆಯಲ್ಲಿ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು ಬಂಧಿತನಿಂದ 169 ಗ್ರಾಂ ಚಿನ್ನಾಭರಣ 100 ಗ್ರಾಂ ಬೆಳ್ಳಿಯ ಆಭರಣ ಹೀಗೆ ಒಟ್ಟು 11,18,500 ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಫಕೀರಪ್ಪ ಕಾಂಬಳಿ ಎಂಬುವ ಬಂಧಿತ ಆರೋಪಿಯಾಗಿದ್ದಾನೆ. ಇದರಿಂದ ಶಂಕೇಶ್ವರ ಪೊಲೀಸ್ ಠಾಣೆ ನಾಲ್ಕು ಪ್ರಕರಣಗಳು ಮತ್ತು ಹುಕ್ಕೇರಿ ಪೊಲೀಸ್ ಠಾಣೆಯ ನಾಲ್ಕು ಪ್ರಕರಣಗಳು ಪತ್ತೆ ಆಗಿವೆ. ಮಾರ್ಚ್ 1 ರಂದು ನಿಡಸೋಸಿ ಗ್ರಾಮದ ಬಳಿಯ ಒಂದು ಮನೆಯಲ್ಲಿ ರಾತ್ರಿ ಕಳ್ಳತನ ಆಗಿರುವ ಬಗ್ಗೆ ಪ್ರಕರಣ ವರದಿ ಆಗಿದ್ದು ಅಲ್ಲದೇ ವರ್ಷದ ಆರಂಭದಲ್ಲಿ ಸಂಕೇಶ್ವರ ಮತ್ತು ಹುಕ್ಕೇರಿ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ರಾತ್ರಿ ಕಳ್ಳತನ ಪ್ರಕರಣಗಳು ವರದಿಯಾಗಿದ್ದವು.
ಈ ಬಗ್ಗೆ ತನಿಖೆ ನಡೆಸಲು ಹೇಚ್ಚುವರಿ ಪೊಲೀಸ್ ಅಧೀಕ್ಷಕ ಬೆಳಗಾವಿ ಮತ್ತು ಡಿ.ಎಸ್.ಪಿ ಗೋಕಾಕ ಡಿ.ಎಚ್ಮುಲ್ಲಾ, ಅವರ ನೇತೃತ್ವದಲ್ಲಿ ಹುಕ್ಕೇರಿಯ ಸಿಪಿಐ ರಪೀಕ್ ತಹಸಿಲ್ದಾರ್ ಮತ್ತು ಸಿಬ್ಬಂದಿ ಮತ್ತು ಸಂಕೇಶ್ವರ ಪೊಲೀಸ್ ಠಾಣಿಯ ಸಿಪಿಐ ಪ್ರಹ್ಲಾದ ಚೆನ್ನಗೀರಿ ಹಾಗೂ ಸಿಬ್ಬಂದಿ ಒಳಗೊಂಡ ತನಿಖಾ ತಂಡವನ್ನು ರಚನೆ ಮಾಡಿಲಾಗಿತ್ತು.
ಮಾರ್ಚ್ 13ರಂದು ಸಂಕೇಶ್ವರ ಠಾಣಿ ಹದ್ದಿಯ ಕಮತನೂರ ಗೇಟ್ ಹತ್ತಿರ ಆರೋಪಿಯನ್ನು ಪತ್ತೆ ಮಾಡಿ ಆತನ ಬಳಿ ಇದ್ದ 169 ಗ್ರಾಂ ಬಂಗಾರದ ಆಭರಣಗಳು ಹಾಗೂ 100 ಗ್ರಾಂ ಬೆಳ್ಳಿಯ ಆಭರಣಗಳು, 14540/- ರೂ. ನಗದು ಹಣ, ಟಾಟಾ ಕಂಪನಿಯ ಮಾಂಜಾ ಕಾರು -KA. 22 P 7662, ಹೀರೊ ಕಂಪನಿಯ ಮ್ಯಾಸ್ಕೊ ಮೋಟರ್ ಸೈಕಲ್ ನಂಬರ್- KA. 19 EJ 7059, 11,18,500 ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಸಂಕೇಶ್ವರ ಮತ್ತು ಹುಕ್ಕೇರಿ ಪೊಲೀಸ್ ಠಾಣೆಯ ಅಧಿಕಾರಿಗಳಾದ ಎಮ್. ಆರ್ ತಹಶಿಲ್ದಾರ, ಪಿ.ಆರ್ ಚನ್ನಗಿರಿ ಪಿ.ಐ, ಹಾಗೂ ಪಿ.ಎಸ್.ಐ ಕೆ.ಬಿ.ಜಕ್ಕನವರ, ಎ.ಎಸ್.ಐ ಯು.ಎಸ್. ಶೆಟ್ಟೆನ್ನವರ, ಹಾಗೂ ಸಿಬ್ಬಂದಿ ಜನರಾದ ಬಿ.ವಿ. ಹುಲಕುಂದ, ಬಿ. ಕೆ. ನಾಗನೂರಿ, ಎಮ್.ಎಮ್.ಕರಗುಪ್ಪಿ, ಬಿ.ಟಿ.ಪಾಟೀಲ, ಎಮ್. ಜಿ ದಾದಾಮಲಿಕ, ಬಿ.ಎಸ್.ಕಪರಟ್ಟಿ, ಎಮ್.ಎಮ್ ಜಂಬಗಿ ಹಾಗೂ ಹುಕ್ಕೇರಿ ಠಾಣಾ ಸಿಬ್ಬಂದಿಗಳಾದ ಎ.ಎಸ್.ಐ ಎ.ಎಸ್.ಸನದಿ, ಗಜಾನನ ಕಾಂಬಳೆ, ಅಜೀತ ನಾಯಿಕ, ಸದ್ದಾಂ ರಾಮದುರ್ಗ, ಇವರು ಪಾಲ್ಗೊಂಡಿರುತ್ತಾರೆ.
ಈ ಕಾರ್ಯಾಚರಣೆ ಮೂಲಕ ಆರೋಪಿನನ್ನು ಬಂಧಿಸಿರುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಸಂಜೀವ ಪಾಟೀಲ, ಅವರು ಶ್ಲಾಘಿಸಿ, ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೂ.5ರಂದು ಕುಂದಗೋಳದಲ್ಲಿ ಕರಿಭಂಡಿ ಉತ್ಸವ ವೈಭವ; ಉತ್ಸವ ನೋಡೋದೇ ಭಾಗ್ಯ

Vijayapur: ಮಲೀನವಾಗುತ್ತಿರುವ ಕೃಷ್ಣೆ ಕಾಪಾಡಿ; ತ್ಯಾಜ್ಯ ವಸ್ತು ಎಸೆಯಬೇಡಿ

ಜಗದೀಶ್ ಶೆಟ್ಟರ್ ಅವರ ಆಗಮನ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶಕ್ತಿ ತಂದಿದೆ: ಡಿ.ಕೆ.ಶಿವಕುಮಾರ್

ನನಗೂ ಸವದಿಗೂ ಸಚಿವ ಸ್ಥಾನ ಸಿಗಬೇಕಿತ್ತು, ಆದರೆ ಸಿಕ್ಕಿಲ್ಲ..: Jagadish Shettar

Santosh Lad: ಮರಾಠ ದೊರೆ ‘ಕೈ’ಗೆ ಏಳು ಸುತ್ತಿನ ಕೋಟೆ
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
