ವಿಶ್ವ ಕೆಡೆಟ್ ಚೆಸ್ ಚಾಂಪಿಯನ್ ಶಿಪ್ನಲ್ಲಿ ಸಾಧನೆ: ಚಾರ್ವಿಗೆ 5 ಲಕ್ಷ ನಗದು ಬಹುಮಾನ ಘೋಷಣೆ
Team Udayavani, Sep 28, 2022, 11:43 AM IST
ಬೆಂಗಳೂರು: ವಿಶ್ವ ಕೆಡೆಟ್ ಚೆಸ್ ಚಾಂಪಿಯನ್ ಶಿಪ್ನ 8 ವರ್ಷದೊಳಗಿನವರ ಪ್ರಶಸ್ತಿ ವಿಜೇತರಾಗಿರುವ ಕರ್ನಾಟಕದ ಚಾರ್ವಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ 5 ಲಕ್ಷ ರೂ. ಘೋಷಿಸಿದ್ದಾರೆ.
ಜಾರ್ಜಿಯದ ಬಟುಮಿಯಲ್ಲಿ ನಡೆದ ವಿಶ್ವ ಕೆಡೆಟ್ಸ್ ಚೆಸ್ ಚಾಂಪಿಯನ್ಷಿಪ್ನ ಬಾಲಕಿಯರ 8 ವರ್ಷದೊಳಗಿನವರ ವಿಭಾಗದಲ್ಲಿ ಪ್ರಶಸ್ತಿ ಗೆಲ್ಲುವ ರಾಜ್ಯಕ್ಕೆ ಕೀರ್ತಿ ತಂದಿರುವ ಚಾರ್ವಿಗೆ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಚಾರ್ವಿ ಅಪಾರ ಪ್ರತಿಭೆ ಹೊಂದಿದ್ದು, ಚಿಕ್ಕ ವಯಸ್ಸಿನಲ್ಲೇ ಅಪ್ರತಿಮ ಸಾಧನೆ ಮಾಡುತ್ತಿದ್ದಾಳೆ. ಮುಂದಿನ ತಿಂಗಳು ಇಂಡೊನೇಷ್ಯಾದಲ್ಲಿ ನಡೆಯಲಿರುವ ಏಷ್ಯನ್ ಯೂತ್ ಚಾಂಪಿಯನ್ಷಿಪ್ನಲ್ಲೂ ಆಕೆ ದೇಶವನ್ನು ಪ್ರತಿನಿಧಿಸುವಳು. ನವೆಂಬರ್ನಲ್ಲಿ ಶ್ರೀಲಂಕಾದಲ್ಲಿ ನಡೆಯಲಿರುವ ಕಾಮನ್ವೆಲ್ತ್ ಚೆಸ್ ಕೂಟದಲ್ಲೂ ಪಾಲ್ಗೊಳ್ಳಲಿದ್ದಾಳೆ. ಈ ಬಾಲ ಪ್ರತಿಭೆಗೆ ಎಲ್ಲಾ ರೀತಿಯ ನೆರವು ನೀಡಲಿದ್ದು, ಐದು ಲಕ್ಷ ರೂಪಾಯಿ ನಗದು ಪುರಸ್ಕಾರ ನೀಡುತ್ತೇವೆ. ಮುಂದಿನ ದಿನಗಳಲ್ಲಿ ಹೆಚ್ಚೆಚ್ಚು ಸಾಧನೆ ಮಾಡಲಿ ಎಂದು ಹಾರೈಸುತ್ತೇನೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ-ಜೆಡಿಎಸ್ “ಜಂಟಿ ಸಮರಾಭ್ಯಾಸ’
Congress; ಕೋಲಾರಕ್ಕೆ ಗೌತಮ್ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!
Politics: ಟಿಕೆಟ್ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ