ಆ್ಯಸಿಡ್ ದಾಳಿಕೋರ ನಾಗೇಶ್ ಕೊನೆಗೂ ಅರೆಸ್ಟ್: ಸ್ವಾಮೀಜಿಯಂತೆ ವೇಷ ಧರಿಸಿದ್ದ!
Team Udayavani, May 13, 2022, 5:39 PM IST
ಬೆಂಗಳೂರು: ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿ ನಾಗೇಶ್ ನನ್ನ ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಹುಡುಕಾಟ ನಡೆಸುತ್ತಿದ್ದ ವೇಳೆ ತಮಿಳುನಾಡಿನ ತಿರುವಣ್ಣಾಮಲೈ ನಲ್ಲಿ ಸ್ವಾಮೀಜಿಯಂತೆ ವೇಷ ಧರಿಸಿ ತಲೆ ಮರೆಸಿಕೊಂಡಿದ್ದ 27 ವರ್ಷದ ನಾಗೇಶನನ್ನು ಪೊಲೀಸರು ಬಂಧಿಸಿದ್ದಾರೆ.
ಏಪ್ರಿಲ್ 28 ರಂದು ದಾಳಿ ನಡೆಸಿ ಪರಾರಿಯಾಗಿದ್ದ. ಆ್ಯಸಿಡ್ ದಾಳಿ ನಡೆದು 16 ದಿನ ಕಳೆದರೂ ಆರೋಪಿ ನಾಗೇಶ್ ಸುಳಿವು ಸಿಗದೆ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು. ಕಾಮಾಕ್ಷಿಪಾಳ್ಯ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ನಾಗೇಶನನ್ನು ಬಂಧಿಸಿದೆ ಎಂದು ವರದಿಗಳು ಲಭ್ಯವಾಗಿವೆ.
ನಾಗೇಶ್ ಓಡಾಡಿದ ಜಾಗದಲ್ಲಿ ವಾಂಟೆಡ್ ಲಿಸ್ಟ್ ಫೋಟೋ ಹಾಕಲಾಗಿತ್ತು. ಜತೆಗೆ ಎಲ್ಲೆಡೆ ಕರಪತ್ರಗಳನ್ನು ಹಚ್ಚಲಾಗಿತ್ತು.
ಇದನ್ನೂ ಓದಿ : ಮುಸ್ಕಾನ್ ಕುಟುಂಬ ಸೌದಿಗೆ : ತನಿಖೆ ನಡೆಸುವಂತೆ ಗೃಹ ಸಚಿವರಿಗೆ ದೂರು
ಪ್ರೀತಿ ನಿರಾಕರಿಸಿದ ಹೆಗ್ಗನಹಳ್ಳಿ ಕ್ರಾಸ್ ನಿವಾಸಿ 25 ವರ್ಷದ ಯುವತಿ ಮೇಲೆ ಹಾಡಹಗಲೇ ಆ್ಯಸಿಡ್ ದಾಳಿ ನಡೆಸಲಾಗಿತ್ತು. ಯುವತಿ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸರ್ಜಾಪುರ ಮೂಲದ ನಾಗೇಶ್, ಪ್ರೀತಿ ಸುವಂತೆ ಸುಮಾರು 7 ವರ್ಷಗಳಿಂದ ದುಂಬಾಲು ಬಿದ್ದಿದ್ದ. ಆಕೆ ನಿರಾಕರಿಸಿದ್ದರಿಂದ ಕುಪಿತನಾಗಿ ದಾಳಿ ನಡೆಸಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…