ಕಡಬದ ತಾಯಿ-ಮಗಳ ಮೇಲೆ ಆ್ಯಸಿಡ್ ಎರಚಿದ ಪ್ರಕರಣ : ಆರೋಪಿಯ ಜಾಮೀನು ರದ್ದುಪಡಿಸಿದ ಹೈಕೋರ್ಟ್
Team Udayavani, Feb 9, 2021, 11:45 PM IST
ಬೆಂಗಳೂರು: ತಾಯಿ ಹಾಗೂ ಆಕೆಯ ಎರಡು ವರ್ಷದ ಮಗಳ ಮೇಲೆ ಆ್ಯಸಿಡ್ ಹಾಕಿದ್ದ ಪ್ರಕರಣದ ಆರೋಪಿಗೆ ವಿಚಾರಣ ನ್ಯಾಯಾಲಯ ನೀಡಿದ್ದ ಜಾಮೀನನ್ನು ರದ್ದುಪಡಿಸಿದ ಹೈಕೋರ್ಟ್, ಆರೋಪಿಯನ್ನು ಮರಳಿ ಜೈಲಿಗೆ ಹಾಕುವಂತೆ ಪೊಲೀಸರಿಗೆ ನಿರ್ದೇಶನ ನೀಡಿದೆ.
ವಿಚಾರಣ ನ್ಯಾಯಾಲಯ ಆರೋಪಿಗೆ ಜಾಮೀನು ನೀಡಿದ್ದ ಆದೇಶ ರದ್ದುಪಡಿಸಲು ಕೋರಿ ಸಂತ್ರಸ್ತ ಮಹಿಳೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಆರೋಪಿಯ ಜಾಮೀನು ರದ್ದುಪಡಿಸಿ ಆದೇಶಿಸಿದೆ.
ಅಲ್ಲದೇ, ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ನಡೆಸಿ ಇತ್ಯರ್ಥಪಡಿಸುವಂತೆ ದಕ್ಷಿಣ ಕನ್ನಡ ಜಿಲ್ಲೆಯ 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯಕ್ಕೆ ನಿರ್ದೇಶಿಸಿದೆ. ಆರೋಪಿಯನ್ನು ಕೂಡಲೇ ವಶಕ್ಕೆ ಪಡೆದು ಜೈಲಿಗೆ ಕಳಹಿಸುವಂತೆ ಕಡಬ ಠಾಣೆ ಪೊಲೀಸರಿಗೆ ನಿರ್ದೇಶಿಸಿದೆ.
ಇದನ್ನೂ ಓದಿ:ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು
ಸಂತ್ರಸ್ತ ಮಹಿಳೆಯು ಆರೋಪಿಯ ಸ್ವಂತ ನಾದಿನಿ. ಹಣದ ವಿಚಾರಕ್ಕೆ ಆಕೆಯನ್ನು ಗುರಿಯಾಗಿಸಿಕೊಂಡು ಕಿರುಕುಳ ಕೊಡುತ್ತಿದ್ದ. ಲೈಂಗಿಕ ದೌರ್ಜನ್ಯಕ್ಕೂ ಯತ್ನಿಸಿದ್ದ. ಪತಿಯನ್ನು ಕಳೆದುಕೊಂಡು ಅಸಹಾಯಕ ಸ್ಥಿತಿಯಲ್ಲಿರುವ ಮಹಿಳೆ ಮತ್ತು ಆಕೆಯ ಮಗುವಿನ ಮೇಲೆ ಆ್ಯಸಿಡ್ ದಾಳಿ ನಡೆಸಿರುವುದು ಗಂಭೀರ ಸ್ವರೂಪದ ಕೃತ್ಯ. ಇಂತಹ ಗಂಭೀರ ಪ್ರಕರಣದ ಬಗ್ಗೆ ವಿಚಾರಣ ನ್ಯಾಯಾಲಯ ದೃಷ್ಟಿ ಕಳೆದುಕೊಂಡಂತೆ ವರ್ತಿಸಿದೆ. ಆರೋಪಿ ವಿಚಾರಣೆಯಿಂದ ತಲೆ ಮರೆಸಿಕೊಂಡು ಹೋಗುವ ಸಾಧ್ಯತೆಯಿಲ್ಲ ಎಂಬ ಕಾರಣದಿಂದಲೇ ಜಾಮೀನು ನೀಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಆರೋಪಿಯ ಜಾಮೀನು ಆದೇಶ ರದ್ದುಪಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್