ಪಾರಂಪರಿಕ ನಂದಿ ರೈಲ್ವೆ ನಿಲ್ದಾಣ ಅಭಿವೃದ್ಧಿಗೆ ಕ್ರಮ:ಕಾಯಕಲ್ಪ ನೀಡಲು ಮುಂದಾದ ರೈಲ್ವೆ ಇಲಾಖೆ

ಶತಮಾನದ ರೈಲ್ವೇ ನಿಲ್ದಾಣ ಸಮಗ್ರ ಅಭಿವೃದ್ಧಿ | ರೈಲ್ವೆ ಪ್ರಯಾಣಿಕರಲ್ಲಿ ಹರ್ಷ

Team Udayavani, May 1, 2023, 8:21 AM IST

NANDI RAIL

ಚಿಕ್ಕಬಳ್ಳಾಪುರ: ತಾಲೂಕಿನ ನಂದಿ ರೈಲ್ವೆ ನಿಲ್ದಾಣಕ್ಕೆ ಕೊನೆಗೂ ರೈಲ್ವೆ ಇಲಾಖೆ ಕಾಯಕಲ್ಪ, ಪಾರಂಪರಿಕ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಮುಂದಾಗಿರುವುದು ಸಹಜವಾಗಿಯೇ ಆ ಭಾಗದ ರೈಲ್ವೆ ಪ್ರಯಾಣಿಕರಲ್ಲಿ ಸಂತಸ ಮೂಡಿಸಿದೆ.

ಚಿಕ್ಕಬಳ್ಳಾಪುರ ಕೋಲಾರ ರೈಲ್ವೆ ಮಾರ್ಗ ಮೈಸೂರು ಸಂಸ್ಥಾನದ ಮೊದಲ ರೈಲ್ವೆ ಮಾರ್ಗವಾಗಿ 1915ರಲ್ಲಿ ಈ ಮಾರ್ಗಕ್ಕೆ ಚಾಲನೆ ನೀಡಲಾಗಿತ್ತು. 2 ದಶಕದಿಂದೀಚೆಗೆ ಹಂತ ಹಂತವಾಗಿ ಬ್ರಾಡ್‌ಗೆಜ್‌ ಮಾರ್ಗವಾಗಿ ಮಾರ್ಪಟ್ಟಿದೆ. ಈ ಮಾರ್ಗದಲ್ಲಿ ಬರುವ ರೈಲ್ವೆ ನಿಲ್ದಾಣಗಳು ಶತಮಾನದ ಇತಿಹಾಸ ಹೊಂದಿವೆ.

ಈ ಹಿನ್ನೆಲೆಯಲ್ಲಿ ಅವುಗಳನ್ನು ಜೀರ್ಣೋದ್ಧಾರಗೊಳಿಸಿ ಪಾರಂಪರಿಕ ತಾಣಗಳಾಗಿ ಉಳಿಸಿಕೊಳ್ಳಬೇಕು ಎಂಬುದು ರೈಲ್ವೆ ಇಲಾಖೆ ಉದ್ದೇಶವಾಗಿದೆ. ಈಗಾಗಲೇ ಸರ್ಕಾರೇತರ ಸಂಸ್ಥೆಯ ಸಹಯೋಗದಲ್ಲಿ ದೊಡ್ಡಜಾಲ, ದೇವನಹಳ್ಳಿ ಹಾಗೂ ಆವತಿ ನಿಲ್ದಾಣಗಳನ್ನು ಜೀರ್ಣೋದ್ಧಾರಗೊಳಿಸಲಾಗಿದ್ದು, ಅದರ ಮುಂದುವರೆದ ಭಾಗವಾಗಿ ಈಗ ನಂದಿ ರೈಲ್ವೆ ನಿಲ್ದಾಣ ಅಭಿವೃದ್ಧಿಗೆ ಕ್ರಮ ವಹಿಸಲಾಗಿದೆ.

ಜೀರ್ಣೋದ್ಧಾರಕ್ಕೆ ಭೂಮಿ ಪೂಜೆ:
ಪ್ರಕೃತಿ ಸೌಂದರ್ಯದ ಮಡಿಲಲ್ಲಿರುವ ನಂದಿ ರೈಲ್ವೆ ನಿಲ್ದಾಣವನ್ನು ಈ ಮಾರ್ಗದ ಪ್ರಮುಖ ಪಾರಂಪರಿಕ ತಾಣವೆಂದು ಗುರುತಿಸಲಾಗಿದೆ. ನಿಲ್ದಾಣದ ಕಟ್ಟಡದ ಹಳೆಯ ಸ್ವರೂಪಕ್ಕೆ ಧಕ್ಕೆ ಬಾರದಂತೆ ಯತಾಸ್ಥಿತಿ ಕಾಪಾಡಿಕೊಂಡು ಜೀರ್ಣೋದ್ಧಾರಗೊಳಿಸಲು ಸರ್ಕಾರೇತರ ಇಂಟ್ಯಾಕ್ಸ್‌ ಸಂಸ್ಥೆ ಕೈಜೋಡಿಸಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಬೆಂಗಳೂರು ವಿಭಾಗದ ಆಡಳಿತ ವಿಭಾಗದ ಹೆಚ್ಚುವರಿ ರೈಲ್ವೆ ವ್ಯವಸ್ಥಾಪಕಿ ಕುಸುಮಾ ಹರಿಪ್ರಸಾದ್‌ ಜೀರ್ಣೋದ್ಧಾರ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಇಂಟ್ಯಾಕ್‌ ಸಂಸ್ಥೆಯ ಸಂಚಾಲಕಿ ಮೀರಾ ಅಯ್ಯರ್‌, ಸಹ ಸಂಚಾಲಕ ಅರವಿಂದ ಚೇತನಾ ಮತ್ತಿತರರು ಹಾಜರಿದ್ದರು.

ಶತಮಾನದ ಇತಿಹಾಸವುಳ್ಳ ಚಿಕ್ಕಬಳ್ಳಾಪುರದ ನಂದಿ ರೈಲ್ವೆ ನಿಲ್ದಾಣ.

ನಂದಿ ರೈಲ್ವೆ ನಿಲ್ದಾಣದ ಜೀರ್ಣೋದ್ಧಾರ ಕಾಮಗಾರಿಗೆ ಬೆಂಗಳೂರು ವಿಭಾಗೀಯ ಆಡಳಿತ ವಿಭಾಗದ ಹೆಚ್ಚುವರಿ ರೈಲ್ವೆ ವ್ಯವಸ್ಥಾಪಕಿ ಕುಸುಮಾ ಹರಿಪ್ರಸಾದ್‌ ಭೂಮಿಪೂಜೆ ನೆರವೇರಿಸಿದರು.

ನಂದಿಯಲ್ಲಿ ರೈಲ್ವೆ ಮ್ಯೂಸಿಯಂ
ಪ್ರವಾಸೋದ್ಯಮ ದೃಷ್ಟಿಯಲ್ಲಿರಿಸಿಕೊಂಡು ನಂದಿ ಬೆಟ್ಟಕ್ಕೆ ಈಗಾಗಲೇ ರಾಜ್ಯ ಸರ್ಕಾರ ರೋಪ್‌ವೇ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದೆ. ಬೆಟ್ಟದ ತಪ್ಪಲಿನಲ್ಲಿರುವ ನಂದಿ ರೈಲ್ವೆ ನಿಲ್ದಾಣ ಕೂಡ ಪ್ರವಾಸಿಗರ ಆಕರ್ಷಿಸುವಂತೆ ಅಭಿವೃದ್ಧಿಪಡಿಸುವುದು ರೈಲ್ವೆ ಇಲಾಖೆ ಉದ್ದೇಶವಾಗಿದೆ. ಮೊದಲ ಹಂತವಾಗಿ ಮುಖ್ಯ ರಸ್ತೆಯಿಂದ ರೈಲ್ವೇ ನಿಲ್ದಾಣದವರೆಗೆ ಸಿಮೆಂಟ್‌ ಕಾಂಕ್ರಿಟ್‌ ರಸ್ತೆ ಮಾಡಲಾಗಿದೆ. ಮುಂದಿನ ಹಂತದಲ್ಲಿ ಕೋಟ್ಯಂತರ ರೂ. ವೆಚ್ಚದಲ್ಲಿ ರೈಲ್ವೆ ಮ್ಯೂಸಿಯಂ, ಚಿತ್ರಪಟ ಗ್ಯಾಲರಿ, ಮಕ್ಕಳ ರೈಲು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ.

ಟಾಪ್ ನ್ಯೂಸ್

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.